ಕಾಂಗ್ರೆಸ್‌ಗೆ ಮತ್ತೆ ಟೆನ್ಶನ್: 13 ಬೇಡಿಕೆ, ಸೋನಿಯಾಗೆ ಪತ್ರ ಬರೆದ ಸಿಧು!

Published : Oct 17, 2021, 03:16 PM IST
ಕಾಂಗ್ರೆಸ್‌ಗೆ ಮತ್ತೆ ಟೆನ್ಶನ್: 13 ಬೇಡಿಕೆ, ಸೋನಿಯಾಗೆ ಪತ್ರ ಬರೆದ ಸಿಧು!

ಸಾರಾಂಶ

* ಪಂಜಾಬ್‌ ಕಾಂಗ್ರೆಸ್‌ನಲ್ಲಿ ಮತ್ತೆ ಗೊಂದಲ * ಎಲ್ಲವೂ ಸರಿಯಾಯ್ತು ಎನ್ನುವಷ್ಟರಲ್ಲಿ ಸೋನಿಯಾಗೆ ಸಿಧು ಪತ್ರ * ಆ ಹದಿಮೂರು ಬೇಡಿಕೆಗಳೇನು?

ಚಂಡೀಗಢ(ಅ.17) ಪಂಜಾಬ್(Punjab) ಕಾಂಗ್ರೆಸ್‌ನಲ್ಲಿ(Congress) ಹೊಸ ಸಚಿವರ ನೇಮಕ ಮಾಡಿದ್ದರೂ ರಾಜಕೀಯ ಗೊಂದಲಗಳು ನಿಂತಿಲ್ಲ. ಹೌದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಧು(Navjot Singh Sidhu) ಅವರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ. ಇದಕ್ಕಾಗಿ, ಅವರು ನಾಲ್ಕು ಪುಟಗಳ ಪತ್ರವನ್ನೂ ಬರೆದಿದ್ದಾರೆ, ಅದರಲ್ಲಿ ಭೇಟಿಯ ಕಾರಣವನ್ನು ನೀಡಲಾಗಿದೆ.

2022 ವಿಧಾನಸಭಾ ಚುನಾವಣೆಗೆ ಸಲಹೆ 

ವಾಸ್ತವವಾಗಿ, ನವಜೋತ್ ಸಿಧು ಪಂಜಾಬ್‌ನಲ್ಲಿ ಚುನಾವಣೆಯ ಕಾರಣದಿಂದ ಸೋನಿಯಾ ಗಾಂಧಿಯನ್ನು ಭೇಟಿ ಮಾಡಲು ಬಯಸುತ್ತಾರೆ. ಅವರು ಬರೆದಿರುವ ಪತ್ರದಲ್ಲಿ, ರಾಜ್ಯದ 13 ಅಂಶಗಳ ಕಾರ್ಯಸೂಚಿಯನ್ನು ಪ್ರಸ್ತುತಪಡಿಸಲಾಗಿದೆ. ಇವುಗಳು ಪಂಜಾಬ್‌ ಮಾಡೆಲ್‌ ಆಗಿ ಪ್ರಸ್ತುತಪಡಿಸಲಾಗಿದೆ. ಈ ವಿಷಯಗಳಿಗೆ ಆದ್ಯತೆಯ ಮೇಲೆ ಗಮನ ನೀಡಬೇಕು ಎಂದು ಸಿಧು ಬರೆದಿದ್ದಾರೆ. ಅಲ್ಲದೆ, 2022 ರ ವಿಧಾನಸಭಾ ಚುನಾವಣೆಗೆ ಅವರನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದೂ ಆಗ್ರಹಿಸಿದ್ದಾರೆ.

ಈ 13 ಸಮಸ್ಯೆಗಳನ್ನು ಉಲ್ಲೇಖಿಸಿದ ಸಿಧು

ಸಿಧು ತನ್ನ ಪತ್ರದಲ್ಲಿ 13 ಸಮಸ್ಯೆಗಳನ್ನು ಉಲ್ಲೇಖಿಸಿದ್ದಾರೆ. ಹೌದು ಇದರಲ್ಲಿ, ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ಮತ್ತು ವಿದ್ಯುತ್ ಕಂಪನಿಗಳ ನಡುವಿನ ಒಪ್ಪಂದಗಳನ್ನು ರದ್ದುಗೊಳಿಸುವುದು, ಡ್ರಗ್ಸ್ ಪ್ರಕರಣಗಳ ತನಿಖೆ, ರೈತರಿಗಾಗಿ ಅನೇಕ ಯೋಜನೆಗಳು, ಪರಿಶಿಷ್ಟ ಜಾತಿ ಮತ್ತು ಹಿಂದುಳಿದವರ ಅಭಿವೃದ್ಧಿ, ಉದ್ಯೋಗ, ಸಿಂಗಲ್ ವಿಂಡೋ ವ್ಯವಸ್ಥೆ, ಮದ್ಯ, ಮರಳು ಗಣಿಗಾರಿಕೆ, ಕೇಬಲ್ ಮತ್ತು ಸಾರಿಗೆ ಜೊತೆಗೆ, ಮಹಿಳೆಯರು ಮತ್ತು ಯುವ ಸಬಲೀಕರಣ ಈ ವಿಚಾರಗಳ ಬಗ್ಗೆ ಉಲ್ಲೇಖಿಸಲಾಗಿದೆ.

ಎರಡು ದಿನಗಳ ಹಿಂದೆ ಹೀಗಂದಿದ್ರು ಸಿಧು

ಎರಡು ದಿನಗಳ ಹಿಂದೆ ನವಜೋತ್ ಸಿಧು ದೆಹಲಿಗೆ ಹೋಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅವರನ್ನು ಭೇಟಿ ಮಾಡಿದರು. ಇದರ ನಂತರ ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನನ್ನ ನಾಯಕರು, ಅವರ ನಾಯಕತ್ವದಲ್ಲಿ ನನಗೆ ನಂಬಿಕೆ ಇದೆ ಎಂದು ಹೇಳಿದ್ದರು. ಹೈಕಮಾಂಡ್‌ನ ಪ್ರತಿಯೊಂದು ನಿರ್ಧಾರವೂ ಸ್ವೀಕಾರಾರ್ಹ ಎಂದಿದ್ದ ಸಿಧು ಪಕ್ಷದ ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ಮತ್ತು ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ