ನಕ್ಸಲ್ ದಾಳಿ ಬೆನ್ನಲ್ಲೇ ಉನ್ನತ ಮಟ್ಟದ ಸಭೆ ನಡೆಸಿದ ಅಮಿತ್ ಶಾ!

Published : Apr 04, 2021, 09:39 PM IST
ನಕ್ಸಲ್ ದಾಳಿ ಬೆನ್ನಲ್ಲೇ ಉನ್ನತ ಮಟ್ಟದ ಸಭೆ ನಡೆಸಿದ ಅಮಿತ್ ಶಾ!

ಸಾರಾಂಶ

ಚತ್ತೀಸ್‌ಘಡದ ಬಿಜಾಪುರದಲ್ಲಿ ಯೋಧರ ಮೇಲೆ ನಡೆದ ನಕ್ಸಲರ ದಾಳಿಯಲ್ಲಿ 22 ಯೋಧರು ಹುತಾತ್ಮರಾಗಿದ್ದಾರೆ. ಅತೀ ಭೀಕರ ದಾಳಿ ಬೆನ್ನಲ್ಲೇ ಚತ್ತೀಸಘಡ ಮುಖ್ಯಮಂತ್ರಿ ಜೊತೆ ಮಾತನಾಡಿದ ಅಮಿತ್ ಶಾ, ಇದೀಗ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ನವದೆಹಲಿ(ಎ.04): ದೇಶ ಕಂಡ ಅತೀ ಭೀಕರ ನಕ್ಸಲರ ದಾಳಿಗಲ್ಲಿ ಚತ್ತೀಸಘಡ ಬಿಜಾಪುರ-ಸುಕ್ಮ ಅರಣ್ಯ ಪ್ರದೇಶದಲ್ಲಿ ನಡೆದ ದಾಳಿ ಒಂದಾಗಿದೆ. 400ಕ್ಕೂ ಹೆಚ್ಚು ನಕ್ಸಲರು ಭಾರತೀಯ ಭದ್ರತಾ ಪಡೆಗಳ ಮೇಲೆ ದಾಳಿ ಮಾಡಿದೆ. ಈ ಗುಂಡಿನ ಚಕಮಕಿಯಲ್ಲಿ 22 ಯೋಧರು ಹುತಾತ್ಮರಾಗಿದ್ದಾರೆ. ಈ ದಾಳಿ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

22 ಯೋಧರು ಹುತಾತ್ಮ, 30 ಮಂದಿ ನಾಪತ್ತೆ; ಚತ್ತೀಸ್‌ಘಡದಲ್ಲಿ ಅತೀ ಭೀಕರ ನಕ್ಸಲ್ ದಾಳಿ!.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಗುಪ್ತಚರ ಬ್ಯೂರೋ ನಿರ್ದೇಶಕ ಅರವಿಂದ್ ಕುಮಾರ್, ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ. 

ಚತ್ತೀಸಘಡದಲ್ಲಿ ಭದ್ರತಾ ಪರಿಸ್ಥಿತಿ ಪರಿಶೀಲನೆ, ಮುಂದಿನ ಕ್ರಮ ಸೇರಿದಂತೆ ಹಲವು ಮಹತ್ವ ಮಾಹಿತಿಗಳನ್ನು ಸಭೆಯಲ್ಲಿ ಚರ್ಚಿಸಲಾಗಿದೆ. ಘಟನೆ ಬಳಿಕ ಚತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್ ಬಘೇಲಾ ಜೊತೆ ಮಾತುಕತೆ ನಡೆಸಿದ್ದರು. ನಕ್ಸಲ್ ದಾಳಿಯಿಂದಾಗಿ ಅಮಿತ್ ಶಾ ತಮ್ಮ ಚುನಾವಣಾ ಪ್ರಚಾರ ರ್ಯಾಲಿ ರದ್ದು ಮಾಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ
ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್