
ಮಂಬೈ(ಜೂ.23): ಕುಖ್ಯಾತ ಭೂಗತ ಪಾತಕಿ ಹಾಗೂ ದೇಶದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ, ತಮ್ಮ ಇಕ್ಬಾಲ್ ಕಸ್ಕರ್ನನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಕ್ಬಾಲ್ ಕಸ್ಕರ್ನನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ನಡೆದಿದ್ದ ಅಂತಾರಾಜ್ಯ ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಕ್ಬಾಲ್ ಕಸ್ಕರ್ನನ್ನು ಬಂಧಿಸಲಾಗಿದೆ. ಜಮ್ಮು ಕಾಶ್ಮೀರದಿಂದ ಪಂಜಾಬ್ ಮೂಲಕ ಮುಂಬೈಗೆ ಡ್ರಗ್ಸ್ ತರಿಸುತ್ತಿದ್ದ ದಾವೂದ್ ಇಬ್ರಾಹಿಂ ತಮ್ಮ, ಬಳಿಕ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
2017ರಲ್ಲಿ ಮುಂಬೈನ ಥಾನೆಯಲ್ಲಿ ಬಿಲ್ಡರ್ಸ್ಗಳಿಂದ ಹಫ್ತಾ ವಸೂಲಿ ನಡೆಸುತ್ತಿದ್ದ ದಾವೂದ್ ತಮ್ಮ ಇಕ್ಬಾಲ್ ಕಸ್ಕರ್ನನ್ನು ಪೊಲೀಸರು ಬಂಧಿಸಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಇದಕ್ಕೂ ಮುನ್ನ 2003ರಲ್ಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಬ್ ಕೊಲ್ಲಿ ರಾಷ್ಟ್ರದಿಂದ ಇಕ್ಬಾಲ್ ಕಸ್ಕರ್ನನ್ನು ಗಡೀಪಾರು ಮಾಡಲಾಗಿತ್ತು. ಆದರೆ 2007ರಲ್ಲಿ ಆತ ನಿರ್ದೋಷಿ ಎಂದು ಬಿಡುಗಡೆ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ