
ಮುಂಬೈ(ನ.23): ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಉಪಮುಖ್ಯಮಂತ್ರಿಯಾಗಿರುವ ಎನ್’ಸಿಪಿ ನಾಯಕ ಅಜಿತ್ ಪವಾರ್ ನಡೆಯನ್ನು, ಶರದ್ ಪವಾರ್ ಪುತ್ರಿ ಹಾಗೂ ಸಂಸದೆ ಸುಪ್ರಿಯಾ ಸುಳೆ ತೀವ್ರವಾಗಿ ಖಂಡಿಸಿದ್ದಾರೆ.
'ಮಹಾ' ರಾಜಕೀಯದಲ್ಲಿ ರೋಚಕ ತಿರುವು: 'ಸೇನೆ'ಗೆ ಶಾಕ್, ಫಡ್ನವೀಸ್ ಮತ್ತೆ ಸಿಎಂ!
ಅಜಿತ್ ಪವಾರ್ ಅವರಿಂದಗಿ ಪಕ್ಷ ಹಾಗೂ ಕುಟುಂಬ ಒಡೆದು ಹೋಗಿದೆ ಎಂದು ಸುಪ್ರಿಯಾ ಸುಳೆ ನೊಂದು ವಾಟ್ಸಾಪ್ ಸ್ಟೇಟಸ್ ಹಾಕಿದ್ದಾರೆ.
ತಾವು ಜೀವನದಲ್ಲಿ ಯಾರಿಂದಲೂ ಇಷ್ಟು ಮೋಸ ಹೋಗಿಲ್ಲ ಎಂದು ಮಾರ್ಮಿಕವಾಗಿ ಹೇಳಿರುವ ಸುಪ್ರಿಯಾ ಸುಳೆ, ಅಜಿತ್ ಪವಾರ್ ಅವರನ್ನು ಬೆರಂಬಲಿಸಿದ್ದಕ್ಕೆ ಪ್ರತಿಯಾಗಿ ಅವರು ನಮ್ಮ ಬೆನ್ನಿಗೆ ಚೂರಿ ಇರಿದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶರದ್ ಪವಾರ್ ಅವರು ಇಂದು ಸಂಜೆ 4.30ಕ್ಕೆ ಎನ್’ಸಿಪಿ ಶಾಸಕರ ಸಭೆ ಕರೆದಿದ್ದಾರೆ. ಇದರ ಬಳಿಕ ಎನ್’ಸಿಪಿಯ ಮುಂದಿನ ರಾಜಕೀಯ ನಿರ್ಧಾರ ಸ್ಪಷ್ಟವಾಗಲಿದೆ ಎಂದು ಸುಳೆ ಸ್ಪಷ್ಟಪಡಿಸಿದ್ದಾರೆ.
ಎನ್ಸಿಪಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಉಚ್ಛಾಟನೆಗೊಂಡ ಅಜಿತ್ ಪವಾರ್!
ಈ ಮಧ್ಯೆ ಅಜಿತ್ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಪರಿಣಾಮ ಅಜಿತ್ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಉಚ್ಛಾಟನೆಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ