ಇವಿಎಂ ಅನುಮಾನಿಸಿದ ಕಾಂಗ್ರೆಸ್‌ಗೆ ಮೋದಿ ಚಾಟಿ

Published : Jun 08, 2024, 10:52 AM IST
ಇವಿಎಂ ಅನುಮಾನಿಸಿದ ಕಾಂಗ್ರೆಸ್‌ಗೆ ಮೋದಿ ಚಾಟಿ

ಸಾರಾಂಶ

ಚುನಾವಣಾ ಪ್ರಕ್ರಿಯೆಯ ಉದ್ದಕ್ಕೂ ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಮತ್ತು ಚುನಾವಣಾ ಆಯೋಗದ ಮೇಲೆ ಅನುಮಾನಗಳನ್ನು ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ಹಾಗೂ ಇಂಡಿಯಾ ಕೂಟದ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ನವದೆಹಲಿ (ಜೂ.8): ಚುನಾವಣಾ ಪ್ರಕ್ರಿಯೆಯ ಉದ್ದಕ್ಕೂ ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಮತ್ತು ಚುನಾವಣಾ ಆಯೋಗದ ಮೇಲೆ ಅನುಮಾನಗಳನ್ನು ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ಹಾಗೂ ಇಂಡಿಯಾ ಕೂಟದ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

‘ಫಲಿತಾಂಶಗಳು ತಮಗೆ ಸರಿಹೊಂದುವುದಿಲ್ಲ ಎಂದರೆ ಅವರು ದೇಶಾದ್ಯಂತ ಬೆಂಕಿ ಹಚ್ಚಲು ಬಯಸಿದ್ದರು. ಆದಾಗ್ಯೂ, ಜೂನ್ 4ರ ಸಂಜೆಯ ವೇಳೆಗೆ ಇವಿಎಂಗಳು ಅವುಗಳನ್ನು ಮೌನಗೊಳಿಸಿದವು’ ಎಂದು ಹೇಳಿದ್ದಾರೆ. ಈ ಮೂಲಕ ಇವಿಎಂ ತಿರುಚಲು ಅಸಾಧ್ಯವಾಗಿದ್ದರಿಂದಲೇ ವಿಪಕ್ಷಗಳು ಉತ್ತಮ ಪ್ರದರ್ಶನ ತೋರಿದವು ಎಂಬುದನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಭಾರತಕ್ಕೆ ಸರಿಯಾದ ನಾಯಕನೆಂದರೆ ಮೋದಿ: ಚಂದ್ರಬಾಬು ನಾಯ್ಡು

ಎನ್‌ಡಿಎ ಸಂಸದೀಯ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಮೋದಿ, ‘ಜೂ.4 ರಂದು ಫಲಿತಾಂಶಗಳು ಹೊರಬರುತ್ತಿರುವಾಗ, ನಾನು ಕೆಲಸದಲ್ಲಿ ನಿರತನಾಗಿದ್ದೆ. ನಂತರ ಫೋನ್ ಕರೆಗಳು ಬರಲಾರಂಭಿಸಿದವು. ನಾನು ಯಾರೋ ಒಬ್ಬರನ್ನು ಆಗ ‘ಸಂಖ್ಯೆಗಳು ಸರಿಯಾಗಿ ಬರುತ್ತಿವೆಯೇ? ಇವಿಎಂ ಜಿಂದಾ ಹೈ ಕಿ ಮರ್ ಗಯಾ (ಇವಿಎಂ ಸತ್ತಿದೆಯೇ ಅಥವಾ ಜೀವಂತವಾಗಿದೆಯೇ) ಹೇಳಿ ಎಂದೆ’ ಎಂದು ಚಟಾಕಿ ಹಾರಿಸಿದರು.

ಸಚಿವ ಸಂಪುಟ ಬಗ್ಗೆ ಟೀವಿ ಸುದ್ದಿಗಳು ಸುಳ್ಳು: ಯಾರೂ ನಂಬಬೇಡಿ ಎಂದ ಪ್ರಧಾನಿ ಮೋದಿ

‘ಜೂ.4ಕ್ಕೂ ಮುನ್ನ ವಿಪಕ್ಷ ನಾಯಕರು ಇವಿಎಂಗಳನ್ನು ದೂಷಿಸುತ್ತಿದ್ದರು ಮತ್ತು ಭಾರತದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಜನರು ನಂಬಿಕೆ ಕಳೆದುಕೊಳ್ಳುವಂತೆ ಮಾಡಲು ಸಂಚು ರೂಪಿಸಿದ್ದರು. ಅವರು ಇವಿಎಂನ ಶವಯಾತ್ರೆ ಮಾಡುತ್ತಾರೆ ಎಂದು ಭಾವಿಸಿದ್ದೆವು. ಆದರೆ ಜೂನ್ 4 ರ ಸಂಜೆಯ ವೇಳೆಗೆ, ಅವೇ ಇವಿಎಂಗಳು ಅವರನ್ನು ಮೌನಗೊಳಿಸಿದವು. ಇದು ಭಾರತದ ಪ್ರಜಾಪ್ರಭುತ್ವದ ಶಕ್ತಿ ಹಾಗೂ ನ್ಯಾಯದ ಪ್ರತೀಕ. ನಾನು ಇನ್ನು 5 ವರ್ಷ ಇವಿಎಂ ಬಗ್ಗೆ ಯಾವುದೇ ಟೀಕೆ ಕೇಳಿಬರುವುದಿಲ್ಲ ಎಂಬ ವಿಶ್ವಾಸದಲ್ಲಿದ್ದೇನೆ. ಆದರೆ 2029ರ ಚುನಾವಣೆ ವೇಳೆ ಮತ್ತೆ ಅವರು ಮತ್ತೆ ಇವಿಎಂ ಬಗ್ಗೆ ವಾದಿಸುತ್ತಾರೆ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು