ಪಕ್ಷದಲ್ಲಿ ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ ಮಾತು!

Published : May 10, 2021, 01:08 PM ISTUpdated : May 10, 2021, 01:27 PM IST
ಪಕ್ಷದಲ್ಲಿ ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ ಮಾತು!

ಸಾರಾಂಶ

* ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು * ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ಸಭೆ * ಪಕ್ಷದಲ್ಲಿ ಬದಲಾವಣೆ ಅಗತ್ಯ ಎಂದ ಸೋನಿಯಾ ಗಾಂಧಿ

ನವದೆಹಲಿ(ಮೇ.10): ಇತ್ತೀಗಷ್ಟೇ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಳಪೆ ಪ್ರದರ್ಶನದ ಬಳಿಕ ಪಕ್ಷದ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದಲ್ಲಿ ಬದಲಾವಣೆಗಳಾಗಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಕಾರ್ಯಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸೋನಿಯಾ 'ನಾವು ಈಗಾಗಲೇ ಪಡೆದಿರುವ ಹೊಡೆತಗಳಿಂದ ಎಚ್ಚೆತ್ತುಕೊಳ್ಳಬೇಕು. ನಾವು ಬಹಳ ನಿರಾಸೆಗೊಂಡಿದ್ದೇವೆ ಎಂದರೆ ಕಡಿಮೆಯಾಗುತ್ತದೆ. ನಮಗೆ ಸಿಕ್ಕ ಹೊಡೆತಗಳನ್ನು ಸೂಕ್ಷ್ಮವಾಗಿ ಗಮನಹರಿಸಿ ವಿಮರ್ಶೆ ನಡೆಸಲು ಪುಟ್ಟ ಗುಂಪುಗಳನ್ನು ರಚಿಸಬೇಕಿದೆ. ಈ ಸಮಿತಿಗಳಿಂದ ಶೀಘ್ರವಾಗಿ ವರದಿ ಪಡೆಯಲಿದ್ದೇನೆ' ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಕಳಪೆ ಪ್ರದರ್ಶನದ ಸಮೀಕ್ಷೆ ನಡೆಸಲು ಸಮಿತಿಯೊಂದನ್ನು ರಚಿಸುವ ಮಾತುಗಳನ್ನಾಡಿದ್ದರು. ಅಲ್ಲದೇ ಕೇರಳ, ಅಸ್ಸಾಂನಲ್ಲಾದ ಸೋಲು ಮತ್ತು ಪಶ್ಚಿಮ ಬಂಗಾಳದಲ್ಲಿ ಒಂದೂ ಸ್ಥಾನದಲ್ಲಿ ಗೆಲುವು ಸಿಗದಿರುವುದನ್ನು ನಿರಾಶಾದಾಯಕವೆಂದಿದ್ದರು.

ಲಸಿಕೆಗೂ ಮಣಿಯಲ್ಲ ಭಾರತದ ಬಿ.1.617 ತಳಿಯ ವೈರಸ್‌?

ಇದೇ ವೇಳೆ ಕೊರೋನಾ ಪರಿಸ್ಥಿತಿ ಬಗ್ಗೆಯೂ ಮಾತನಾಡಿದ ಸೋನಿಯಾ ಗಾಂಧಿ ಕೊರೋನಾ ನಿಯಂತ್ರಸಿವ ವಿಚಾರವಾಗಿ ಮೋದಿ ಸರ್ಕಾರ ವಿಫಲಗೊಂಡಿದೆ. ಸದ್ಯ ಈ ಬಗ್ಗೆ ಚರ್ಚೆ ನಡೆಸಲು ಸರ್ವಪಕ್ಷ ಸಭೆ ಕರೆಯಬೇಕು. ಕೊರೋನಾ ಅನಿರೀಕ್ಷಿತ ಆರೋಗ್ಯ ಬಿಕ್ಕಟ್ಟು ಎಂದಿರುವ ಸೋನಿಯಾ ಗಾಂಧಿ ಅದನ್ನು ಎದುರಿಸಲು ಸಾಧ್ಯವಿರುವ ಎಲ್ಲಾ ಸಹಕಾರಕ್ಕಾಗಿ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ₹610 ಕೋಟಿ ಟಿಕೆಟ್‌ ಹಣ ವಾಪಸ್‌ ನೀಡಿದ ಇಂಡಿಗೋ; ಪ್ರಯಾಣಿಕರಿಗೆ ತಲುಪಿದ ಲಗೇಜ್
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !