ನೀಟ್‌ ರದ್ದತಿಗೆ ನೊಂದು ಬೆಂಗಳೂರಿಗ ಸೇರಿ 4 ವಿದ್ಯಾರ್ಥಿಗಳು ಸಾವಿಗೆ ಶರಣು!

Kannadaprabha News, Ravi Janekal |   | Kannada Prabha
Published : May 17, 2026, 05:39 AM ISTUpdated : May 17, 2026, 05:43 AM IST
NEET 2026 Cancellation Tragedy 4 Aspirants Including Bengaluru Teen end their life

ಸಾರಾಂಶ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ, ದೇಶಾದ್ಯಂತ ಬೆಂಗಳೂರಿನ ವಿದ್ಯಾರ್ಥಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆಯು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸಿದೆ.

ನವದೆಹಲಿ (ಮೇ.17): ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ನೀಟ್‌ ಪರೀಕ್ಷೆ ರದ್ದಾದ ಬೆನ್ನಲ್ಲೇ, ರದ್ದಾದ ದಿನದಿಂದ ಈವರೆಗೆ ದೇಶಾದ್ಯಂತ ಒಟ್ಟು 4 ವಿದ್ಯಾರ್ಥಿಗಳು ಆತ್ಮ*ತ್ಯೆಗೆ ಶರಣಾಗಿದ್ದಾರೆ. ಇವರಲ್ಲಿ ಒಬ್ಬ ಬೆಂಗಳೂರಿನ ವಿದ್ಯಾರ್ಥಿಯೂ ಇದ್ದಾರೆ.

ಸಾಕಷ್ಟು ಶ್ರಮವಹಿಸಿದ ಬರೆದ ಪರೀಕ್ಷೆ ರದ್ದಾಗಿ, ಮತ್ತೆ ಪರೀಕ್ಷೆ ಬರೆಯಬೇಕಾದ ಒತ್ತಡ, ಖಿನ್ನತೆ ಒಳಗಾಗಿ ವಿದ್ಯಾರ್ಥಿಗಳು ಆತ್ಮ*ತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಈ ನಡುವೆ ವಿದ್ಯಾರ್ಥಿಗಳ ಸಾವಿನ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್‌, ‘ಮೋದಿ ಸರ್ಕಾರದ ಅಮೃತ ಕಾಲ ವಿದ್ಯಾರ್ಥಿಗಳ ಪಾಲಿಗೆ ಮೃತಕಾಲವಾಗಿ ಪರಿಣಮಿಸಿದೆ. ಘಟನೆಯ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಖಾತೆ ಸಚಿವ ಧರೇಂದ್ರ ಪ್ರಧಾನ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು’ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.

ನಾಲ್ಕು ಸಾವು:

ಮೇ 3ರಂದು ನಡೆದ ನೀಟ್‌ ಪರೀಕ್ಷೆಯಲ್ಲಿ ಭಾಗಿಯಾಗಿ ಉತ್ತಮ ಅಂಕದ ನಿರೀಕ್ಷೆಯಲ್ಲಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ಗೋವಾದಲ್ಲಿ ಬುಧವಾರ ಆತ್ಮ*ತ್ಯೆ ಮಾಡಿಕೊಂಡಿದ್ದ ಎಂದು ಶನಿವಾರ ಬೆಳಕಿಗೆ ಬಂದಿದೆ.

ಈ ನಡುವೆ ರಾಜಸ್ಥಾನ ಮೂಲದ ಪ್ರದೀಪ್‌ ಮೇಘ್ವಾಲ್‌ ಎಂಬ ವಿದ್ಯಾರ್ಥಿ ಶನಿವಾರ ಆತ್ಮ*ತ್ಯೆಗೆ ಶರಣಾಗಿದ್ದಾನೆ. ಈತ ಪರೀಕ್ಷೆಯಲ್ಲಿ 720ಕ್ಕೆ 650 ಅಂಕದ ನಿರೀಕ್ಷೆಯಲ್ಲಿದ್ದ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆ, ಮರು ಪರೀಕ್ಷೆ ನಿಗದಿಯಿಂದ ಖಿನ್ನತೆಗೆ ಒಳಗಾಗಿ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ ಎನ್ನಲಾಗಿದೆ.

ಇನ್ನು ಶುಕ್ರವಾರ ದೆಹಲಿಯಲ್ಲಿ ಅನ್ಷಿಕಾ ಪಾಂಡೆ, ಉತ್ತರಪ್ರದೇಶದಲ್ಲಿ ರಿತಿಕಾ ಮಿಶ್ರಾ ಎನ್ನುವ ವಿದ್ಯಾರ್ಥಿಗಳು ಆತ್ಮ*ತ್ಯೆ ಮಾಡಿಕೊಂಡಿದ್ದರು.

10 ಲಕ್ಷ ಕೊಟ್ಟು ಪ್ರಶ್ನೆ ಪತ್ರಿಕೆ ಕೊಂಡವನ ಮಗಗೆ ಬರೀ 107 ಅಂಕ!

ತಂದೆಯೊಬ್ಬ ತನ್ನ ಮಗ ಒಳ್ಳೆಯ ಅಂಕ ಪಡೆಯಲಿ ಎಂದು 10 ಲಕ್ಷ ರು. ಕೊಟ್ಟು ನೀಟ್‌ ಪ್ರಶ್ನೆಪತ್ರಿಕೆ ಖರೀದಿಸಿದ್ದ. ಆದಾಗ್ಯೂ ಆತನ ಮಗ ಪಡೆದಿದ್ದು 720ಕ್ಕೆ ಕೇವಲ 107 ಅಂಕ ಎಂಬ ಅಚ್ಚರಿಯ ಮಾಹಿತಿ ಗೊತ್ತಾಗಿದೆ.

ಮತ್ತೊಬ್ಬ ಅಧ್ಯಾಪಕಿ ಅರೆಸ್ಟ್‌

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಶಾಯನಶಾಸ್ತ್ರ ಅಧ್ಯಾಪಕನನ್ನು ಬಂಧಿಸಿದ್ದ ಸಿಬಿಐ, ಇದೀಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್‌ಟಿಎ) ಭಾಗವಾಗಿದ್ದ ಜೀವಶಾಸ್ತ್ರ ಪ್ರಾಧ್ಯಾಪಕಿಯನ್ನು ಬಂಧಿಸಿದೆ.-----

ಪ್ರಧಾನಿ ರಾಜೀನಾಮೆ ನೀಡಲಿ

ಮೋದಿ ಸರ್ಕಾರದ ಅಮೃತ ಕಾಲ ವಿದ್ಯಾರ್ಥಿಗಳ ಪಾಲಿಗೆ ಮೃತಕಾಲವಾಗಿ ಪರಿಣಮಿಸಿದೆ. ಘಟನೆಯ ಹೊಣೆ ಹೊತ್ತು ಶಿಕ್ಷಣ ಖಾತೆ ಸಚಿವ ಧರ್ಮೇಂಧ್ರ ಪ್ರಧಾನ್‌ ರಾಜೀನಾಮೆ ನೀಡಬೇಕು.

- ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧ್ಯಕ್ಷ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Medical Miracle in UP: 5 ದಿನಗಳಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಿಳೆ! ನಿಜಕ್ಕೂ ಅಚ್ಚರಿ, ಇದು ಹೇಗೆ ಸಾಧ್ಯ?
NEET Paper scam: ಮಗನಿಗಾಗಿ ₹10 ಲಕ್ಷ ಕೊಟ್ಟುತಂದೆ ನೀಟ್‌ ಖರೀದಿ: ಮಗಪಡೆದದ್ದು ಬರೀ 107 ಅಂಕ!