
ಕೋಲ್ಕತಾ(ಜೂ.30) ಜವಾಹರ್ ಲಾಲ್ ನೆಹರೂ ಮಾಡಿದ ಕೆಟ್ಟ ಕಾಶ್ಮೀರ ನೀತಿಯಿಂದ ದೀರ್ಘಕಾಲ ಭಾರತದ ರಾಜತಾಂತ್ರಿಕತೆ ಮೇಲೆ ಪರಿಣಾಮ ಬೀರಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. 1953ರಲ್ಲಿ ಹಿರಿಯ ಹಾಗೂ ದೂರದೃಷ್ಟಿ ನಾಯಕ ಶ್ಯಾಮ್ ಪ್ರಸಾದ್ ಮುಖರ್ಜಿ ನೀಡಿದ ಸಲಹೆಯನ್ನು ನೆಹರೂ ಕಡೆಗಣಿಸಿದರು. ಕಾಶ್ಮೀರ ಸಮಸ್ಸೆಯನ್ನು ನಿರ್ವಹಣೆ ಮಾಡುತ್ತಿರುವ ರೀತಿ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಆದರೆ ಕೆಟ್ಟ ಕಾಶ್ಮೀರ ನೀತಿ ಭಾರತಕ್ಕೆ ತೀವ್ರ ತಲೆನೋವಾಗಿ ಪರಿಣಿಮಿಸಿತ್ತು ಎಂದು ಜೈಶಂಕರ್ ಹೇಳಿದ್ದಾರೆ.
ಕೋಲ್ಕತಾದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಸ್ ಜೈಶಂಕರ, ಪ್ರಸ್ತುತ ಭಾರತದ ರಾಜತಾಂತ್ರಿಕ ಸಂಬಂಧ, ಕಾಶ್ಮೀರ ಹಾಗೂ ಚೀನಾ ಸಮಸ್ಯೆಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ಕಾಶ್ಮೀರ ಸಮಸ್ಯೆಯನ್ನು ನಿಭಾಯಿಸುತ್ತಿರುವ ರೀತಿ, ಕಾಶ್ಮೀರ ಕುರಿತು ಭಾರತ ತೆಗೆದುಕೊಂಡಿರುವ ನೀತಿಯಿಂದ ಸಮಸ್ಯೆಗಳೇ ಹೆಚ್ಚುತ್ತದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರತಕ್ಕೆ ಹಿನ್ನೆಡೆಯಾಗಲಿದೆ. ಹೀಗಾಗಿ ನೀತಿಗಳ ಪುನರ್ ಪರಿಶೀಲನೆ ಅಗತ್ಯ ಅನ್ನೋ ಶ್ಯಾಮ್ ಪ್ರಸಾದ್ ಮುಖರ್ಜಿ ಮಾತನ್ನು ನೆಹರೂ ಕಡೆಗಣಿಸಿದರು. ಇದರ ಪರಿಣಾಮ ಭಾರತದ ರಾಜತಾಂತ್ರಿಕ ಪರಿಣಾಮ ದೀರ್ಘಕಾಲ ಎದುರಿಸಬೇಕಾಯಿತು ಎಂದು ಜೈಶಂಕರ್ ಹೇಳಿದ್ದಾರೆ.
ಭಾರತ ಎಲ್ಲಾ ದೇಶಗಳ ಜೊತೆ ಉತ್ತಮ ಸಂಬಂಧ ಹೊಂದಿದೆ. ಕಾಶ್ಮೀರ ಹಾಗೂ ಲಡಾಖ್ ಗಡಿ ಸಮಸ್ಯೆಗಳ ನಿವಾರಿಸಲು ಕೇಂದ್ರ ಬಿಜೆಪಿ ಸರ್ಕಾರ ದಿಟ್ಟ ಹೆಜ್ಜೆ ಇಡುತ್ತಿದೆ. ಈ ಹಿಂದಿನ ತಪ್ಪುಗಳಿಂದ ಆಗಿರುವ ರಾಜತಾಂತ್ರಿಕ ನಷ್ಟವನ್ನು ಸರಿದೂಗಿಸುವ ಕೆಲಸವಾಗುತ್ತಿದೆ ಎಂದು ಜೈಶಂಕರ್ ಹೇಳಿದ್ದಾರೆ. ಭಾರತ ರಷ್ಯಾ ಹಾಗೂ ಅಮೆರಿಕ ಜೊತೆ ಅತ್ಯುತ್ತಮ ಸಂಬಂಧ ಹೊಂದಿದೆ. ಭಾರತದ ರಾಜತಾಂತ್ರಿಕತೆಯನ್ನು ಹಲವು ದೇಶಗಳು ಮಾದರಿಯಾಗಿಸಿಕೊಂಡಿದೆ. ಭಾರತ ವಿಶ್ವದಲ್ಲೇ ಬಲಿಷ್ಠಗೊಂಡಿದೆ ಎಂದು ಜೈಶಂಕರ್ ಹೇಳಿದ್ದಾರೆ.
ಇತ್ತೀಚೆಗೆ ಜೈಶಂಕರ್ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.ರಾಹುಲ್ ಗಾಂಧಿ ಅವರು ದೇಶದಲ್ಲಿ ಭಾರತವನ್ನು ಟೀಕಿಸುವ ಖಯಾಲಿ ಹೊಂದಿದ್ದಾರೆ’ ಎಂದು ಟೀಕಿಸಿದ್ದರು. ರಾಹುಲ್ ವಿದೇಶಗಳಲ್ಲಿ ಭಾರತವನ್ನು ಟೀಕಿಸುವ ಚಟ ಹೊಂದಿದ್ದಾರೆ. ಭಾರತದ ಹಿತಾಸಕ್ತಿ ದೃಷ್ಟಿಯಿಂದ ಭಾರತದ ಆಂತರಿಕ ರಾಜಕೀಯವನ್ನು ದೇಶದ ಆಚೆ ಕೊಂಡೊಯ್ಯುವುದು ಸರಿಯಲ್ಲ. ವಿಶ್ವವೇ ನಮ್ಮನ್ನು ಎದುರು ನೋಡುತ್ತಿದೆ’ ಎಂದಿದ್ದರು.
ಪ್ರಧಾನಿ ಮೋದಿ ಭೇಟಿಗೂ ಮುನ್ನ 'ನ್ಯಾಟೋ' ಆಫರ್ ನೀಡಿದ ಅಮೆರಿಕ, ತಿರಸ್ಕರಿಸಿದ ಭಾರತ!
ಇತ್ತೀಚೆಗೆ ಗೋವಾದಲ್ಲಿ ನಡೆದ ಶಾಂಘೈ ಸಹಕಾರ ಸಭೆಯಲ್ಲಿ ಪಾಕಿಸ್ತಾನಕ್ಕೆ ಚಾಟಿ ಬೀಸಿದ್ದರು. ಭಯೋತ್ಪಾದನೆಯನ್ನು ಮಟ್ಟಹಾಕುವುದು ಶಾಂಘೈ ಸಹಕಾರ ಸಂಘದ ಪ್ರಮುಖ ನಿರ್ಧಾರವಾಗಿದೆ. ಅಲ್ಲದೇ ಭಯೋತ್ಪಾದನೆಗೆ ಯಾವುದೇ ಸಮರ್ಥನೆಗಳಿಲ್ಲ ಎಂಬುದನ್ನು ನಾವು ಬಲವಾಗಿ ನಂಬಿದ್ದೇವೆ. ಹಾಗಾಗಿ ಭಯೋತ್ಪಾದನೆ ಯಾವ ರೀತಿಯಲ್ಲಿದ್ದರೂ ನಾವು ಅದನ್ನು ತಡೆಗಟ್ಟಬೇಕು ಎಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ