ಪಾಕ್, ಚೀನಾ ಬೆನ್ನಲ್ಲೇ ಗಡಿ ಕ್ಯಾತೆ ತೆಗೆದ ನೇಪಾಳ: ಭಾರತದ ಭೂಭಾಗ ಸೇರಿಸಿ ಹೊಸ ನಕ್ಷೆ!

Published : May 20, 2020, 08:34 AM ISTUpdated : May 20, 2020, 09:35 AM IST
ಪಾಕ್, ಚೀನಾ ಬೆನ್ನಲ್ಲೇ ಗಡಿ ಕ್ಯಾತೆ ತೆಗೆದ ನೇಪಾಳ: ಭಾರತದ ಭೂಭಾಗ ಸೇರಿಸಿ ಹೊಸ ನಕ್ಷೆ!

ಸಾರಾಂಶ

ಭಾರತದ ಭೂಭಾಗ ಸೇರಿಸಿ ನೇಪಾಳದಿಂದ ಹೊಸ ನಕ್ಷೆ!| ಪಾಕ್, ಚೀನಾ ಬೆನ್ನಲ್ಲೇ ಗಡಿ ಕ್ಯಾತೆ ತೆಗೆದ ನೇಪಾಳ| ಭಾರತ ಹಾಗೂ ನೇಪಾಳದ ನಡುವೆ ಈಗ ಗಡಿಗಾಗಿ ಸಂಘರ್ಷ| ಭಾರತದ ಪ್ರದೇಶಗಳಾದ ಕಾಲಾಪಾನಿ, ಲಿಪುಲೇಖ ಹಾಗೂ ಲಿಂಪಿಯಾಧುರಾ ಪ್ರದೇಶಗಳನ್ನು ತನ್ನ ಪ್ರದೇಶಗಳು ಎಂದು ಘೋಷಿಸಿರುವ ನೇಪಾಳ

ಕಾಠ್ಮಂಡು(ಮೇ.20): ಭಾರತ ಹಾಗೂ ನೇಪಾಳದ ನಡುವೆ ಈಗ ಗಡಿಗಾಗಿ ಸಂಘರ್ಷ ಆರಂಭವಾಗಿದೆ. ಭಾರತದ ಪ್ರದೇಶಗಳಾದ ಕಾಲಾಪಾನಿ, ಲಿಪುಲೇಖ ಹಾಗೂ ಲಿಂಪಿಯಾಧುರಾ ಪ್ರದೇಶಗಳನ್ನು ತನ್ನ ಪ್ರದೇಶಗಳು ಎಂದು ಘೋಷಿಸಿರುವ ನೇಪಾಳ, ಇವನ್ನು ಒಳಗೊಂಡ ಹೊಸ ನೇಪಾಳದ ನಕ್ಷೆಗೆ ಅನುಮೋದನೆ ನೀಡಿದೆ.

ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ವಿದೇಶಾಂಗ ಸಚಿವ ಪ್ರದೀಪ್‌ ಕುಮಾರ್‌ ಗ್ಯಾವಲಿ ಮಂಗಳವಾರ ತಿಳಿಸಿದ್ದಾರೆ. ಈ ನಕ್ಷೆಯನ್ನು ಶೀಘ್ರ ಬಿಡುಗಡೆ ಮಾಡುವುದಾಗಿ ಅವರು ಹೇಳಿದ್ದಾರೆ.

ಭಾರತ ಗಡಿಯಲ್ಲಿ ಟೆಂಟ್‌ ಹಾಕಿದ ಚೀನಾ ಯೋಧರು!

ಟಿಬೆಟ್‌ನ ಕೈಲಾಸ ಮಾನಸ ಸರೋವರಕ್ಕೆ ಹೋಗಲು ಸಂಪರ್ಕ ರಸ್ತೆ ಕಲ್ಪಿಸುವ ಲಿಪುಲೇಖ ಪಾಸ್‌ ಎಂಬುದು ಕಾಲಾಪಾನಿ ಸಮೀಪ ಇದೆ. ಇದು ಉಭಯ ದೇಶಗಳ ನಡುವಿನ ವಿವಾದಿತ ಪ್ರದೇಶ. ಇದನ್ನು ಎರಡೂ ದೇಶಗಳು ತಮ್ಮದೆಂದು ಹೇಳಿಕೊಳ್ಳುತ್ತವೆ. ಕಾಲಾಪಾನಿ ಉತ್ತರಾಖಂಡದ ಪಿತೋರಗಢ ಜಿಲ್ಲೆಯ ಭಾಗ ಎಂದು ಭಾರತ ಹೇಳಿಕೊಳ್ಳುತ್ತದೆ ಹಾಗೂ ನೇಪಾಳವು ಧರ್ಚುಲಾ ಜಿಲ್ಲೆಯಲ್ಲಿದೆ ಎಂದು ಹೇಳಿಕೊಳ್ಳುತ್ತದೆ.

ಇತ್ತೀಚೆಗೆ ಲಿಪುಲೇಖ ಪಾಸ್‌ನಲ್ಲಿ ರಸ್ತೆ ಕಾಮಗಾರಿ ನಡೆಸಿದ್ದಕ್ಕೆ ನೇಪಾಳವು ಭಾರತದ ರಾಯಭಾರಿಗೆ ತನ್ನ ಪ್ರತಿಭಟನೆ ಸಲ್ಲಿಸಿತ್ತು. ಆದರೆ ರಸ್ತೆಯು ತನ್ನ ಭಾಗಕ್ಕೆ ಸೇರಿದ್ದು ಎಂದು ಭಾರತ ತಿರುಗೇಟು ಕೊಟ್ಟಿತ್ತು.

ಹೊಸ ನಕ್ಷೆ ಕುರಿತಾದ ನೇಪಾಳ ಸಂಪುಟ ನಿರ್ಣಯ ಸುವರ್ಣಾಕ್ಷರದಲ್ಲಿ ಬರೆಯುವಂಥದ್ದು ಎಂದು ಸಚಿವ ಯೋಗೇಶ್‌ ಭಟ್ಟಾರಾಯ್‌ ಹೇಳಿದ್ದಾರೆ. ಆದರೆ, ಆಡಳಿತಾರೂಢ ನೇಪಾಳ ಕಮ್ಯುನಿಸ್ಟ್‌ ಪಕ್ಷದ ಮುಖಂಡ ಗಣೇಶ್‌ ಶಾ, ‘ರಾಜತಾಂತ್ರಿಕ ಮಾತುಕತೆ ಮೂಲಕ ಗಡಿ ವಿವಾದ ಬಗೆ ಹರಿಸಿಕೊಳ್ಳಬೇಕು. ಕೊರೋನಾ ಬಿಕ್ಕಟ್ಟಿನ ವೇಳೆ ಇಂಥ ನಿರ್ಣಯ ಬೇಕಿರಲಿಲ್ಲ’ ಎಂದಿದ್ದಾರೆ.

ಕೇರಳ-ಕರ್ನಾಟಕ ಬಾರ್ಡರ್‌ನಲ್ಲೇ ತಾಳಿ ಕಟ್ಟೋಕೆ ಮುಂದಾದ ವರ: ಏನಾಯ್ತು ನೋಡಿ

ಕೈತೊಳೆದುಕೊಂಡ ಚೀನಾ:

ಕಾಲಾಪಾನಿ ಗಡಿ ವಿಷಯ ಭಾರತ ಹಾಗೂ ನೇಪಾಳದ ದ್ವಿಪಕ್ಷೀಯ ವಿಚಯ. ವಿವಾದವನ್ನು ಉಭಯ ದೇಶಗಳು ಇತ್ಯರ್ಥಪಡಿಸಿಕೊಳ್ಳುವ ವಿಶ್ವಾಸವಿದೆ ಎಂದು ಚೀನಾ ಪ್ರತಿಕ್ರಿಯಿಸಿದೆ.

ಇತ್ತೀಚೆಗೆ ಕಾಲಾಪಾನಿ ಸಮೀಪದ ಲಿಪುಲೇಖ ಪಾಸ್‌ ರಸ್ತೆ ಕಾಮಗಾರಿಗೆ ನೇಪಾಳ ಆಕ್ಷೇಪಿಸಿದ್ದರ ಹಿಂದೆ ಕೆಲವು ಅದೃಶ್ಯ ಶಕ್ತಿಗಳ ಕೈವಾಡವಿದೆ ಎಂದು ಭಾರತದ ಸೇನಾ ಮುಖ್ಯಸ್ಥ ಜ

ಎಂ.ಎಂ. ನಾರವಣೆ ಹೇಳಿದ್ದರು. ಇದರ ಬೆನ್ನಲ್ಲೇ ಚೀನ ಈ ಪ್ರತಿಕ್ರಿಯೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!