
ಕಠ್ಮಂಡು: ನದಿಯಲ್ಲಿ ರಭಸವಾಗಿ ಹರಿದು ಬರ್ತಿರೋ ಪ್ರವಾಹ, ಕೆಲವೇ ಸೆಕೆಂಡ್ಗಳಲ್ಲಿ ಕುಸಿದು ಬೀಳೋ ಕಟ್ಟಡಗಳು, ನೀರಿನಲ್ಲಿ ಕೊಚ್ಚಿ ಹೋಗ್ತಿರೋ ವಾಹನಗಳು, ಸೇತುವೆಗಳು, ರಸ್ತೆಗಳು... ಈ ದೃಶ್ಯಗಳಿಂದ ಇಡೀ ನೇಪಾಳವೇ ಬೆಚ್ಚಿಬಿದ್ದಿದೆ. ಟಿಬೆಟ್ ಗಡಿಯಿಂದ ಹರಿಯುವ ಭೋಟೆ ಕೋಶಿ ನದಿಯಲ್ಲಿ ಉಂಟಾದ ದಿಢೀರ್ ಪ್ರವಾಹ, ನೇಪಾಳದ ಹಲವು ಹಳ್ಳಿಗಳಲ್ಲಿ ಭಾರೀ ಅನಾಹುತ ಸೃಷ್ಟಿಸಿದೆ. ಸದ್ಯದ ವರದಿಗಳ ಪ್ರಕಾರ, ಈ ದುರಂತದಲ್ಲಿ 157 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 750 ಮಂದಿ ನಾಪತ್ತೆಯಾಗಿದ್ದು, ಅವರಲ್ಲಿ 133 ಭಾರತೀಯರೂ ಸೇರಿದ್ದಾರೆ.
ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಭೀಕರ ದುರಂತ ಸಂಭವಿಸಿದೆ. ಟಿಬೆಟ್ನಿಂದ ಹರಿಯುವ ಭೋಟೆ ಕೋಶಿ ನದಿಯಲ್ಲಿ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಿಕೆಯಾಗಿದೆ. ರಭಸವಾಗಿ ನುಗ್ಗಿದ ನೀರು ರಸುವಾ, ಧಾದಿಂಗ್ ಮತ್ತು ನುವಾಕೋಟ್ ಜಿಲ್ಲೆಗಳಲ್ಲಿ ಭಾರೀ ನಾಶನಷ್ಟ ಉಂಟುಮಾಡಿದೆ. ಈ ದುರಂತದ ಭಯಾನಕ ಸಿಸಿಟಿವಿ ದೃಶ್ಯಗಳು ಕೂಡ ಈಗ ವೈರಲ್ ಆಗಿವೆ.
ನದಿಯಲ್ಲಿ ಪ್ರವಾಹದ ನೀರು ರಭಸವಾಗಿ ನುಗ್ಗುತ್ತಿದ್ದಂತೆ, ಅನೇಕ ಕಟ್ಟಡಗಳು ಮತ್ತು ಮನೆಗಳು ಕ್ಷಣಾರ್ಧದಲ್ಲಿ ನೆಲಸಮವಾಗಿವೆ. ಬಸ್ಗಳು ಸೇರಿದಂತೆ ಹಲವಾರು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಪ್ರಾಣ ಉಳಿಸಿಕೊಳ್ಳಲು ಹಲವರು ಓಡಿಹೋಗಿದ್ದಾರೆ. ಆದರೂ, ಈ ದಿಢೀರ್ ಪ್ರವಾಹದಲ್ಲಿ ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಮಣ್ಣು ಮತ್ತು ಕಲ್ಲುಗಳಿಂದ ಕೂಡಿದ ಪ್ರವಾಹದ ನೀರು ನುಗ್ಗಿ ಕಟ್ಟಡಗಳು ಕುಸಿದು ಬೀಳುವ ದೃಶ್ಯಗಳು ಹೊರಬಂದಿವೆ. ಜೀವ ಉಳಿಸಿಕೊಳ್ಳಲು ಅಳುತ್ತಾ, ಚೀರುತ್ತಾ ಓಡಿಹೋಗುತ್ತಿರುವ ಜನರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ದುರಂತದ ನಂತರ, ನೇಪಾಳ ಸರ್ಕಾರವು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದೆ. ಆದರೆ, ವಿದೇಶಿ ಪ್ರವಾಸಿಗರು ಸೇರಿದಂತೆ ಅನೇಕರು ಇನ್ನೂ ನಾಪತ್ತೆಯಾಗಿದ್ದಾರೆ.
ಇದೇ ವೇಳೆ, ಈ ಪ್ರವಾಹವು ನೇಪಾಳದ ವಿದ್ಯುತ್ ಪೂರೈಕೆಯ ಮೇಲೂ ಗಂಭೀರ ಪರಿಣಾಮ ಬೀರಿದೆ. ವಿವಿಧ ಜಲವಿದ್ಯುತ್ ಯೋಜನೆಗಳು ಸೇರಿದಂತೆ 430 ಮೆಗಾವ್ಯಾಟ್ ಉತ್ಪಾದನಾ ಸಾಮರ್ಥ್ಯದ ವಿದ್ಯುತ್ ಕೇಂದ್ರಗಳು ಪ್ರವಾಹದಲ್ಲಿ ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಇದರಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.
Very Horrific videos from China and Nepal.
This could be the most dangerous flooding ever recorded on camera , its looks like an inland Tsunami
Hundreds might has lost their lives and infra worth Billions might have already been lost of these floods.
This migth impact India too… pic.twitter.com/PHyGejM4b9— Woke Eminent (@WokePandemic) August 26, 2026
ದಿಢೀರ್ ಪ್ರವಾಹದಿಂದ ತತ್ತರಿಸಿರುವ ನೇಪಾಳಕ್ಕೆ ಭಾರತ ತಕ್ಷಣದ ನೆರವು ನೀಡಿದೆ. ತಾತ್ಕಾಲಿಕ ಟೆಂಟ್ಗಳು, ಕಂಬಳಿಗಳು, ನೈರ್ಮಲ್ಯ ಕಿಟ್ಗಳು, ಸೋಲಾರ್ ದೀಪಗಳು ಮತ್ತು ಔಷಧಿಗಳನ್ನು ಒಳಗೊಂಡಂತೆ ಹತ್ತು ಟನ್ ಪರಿಹಾರ ಸಾಮಗ್ರಿಗಳನ್ನು ನೇಪಾಳಕ್ಕೆ ಕಳುಹಿಸಲಾಗಿದೆ. "ಭಾರತ ನೇಪಾಳದ ಜೊತೆಗಿದೆ" ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ಸಹಾಯಕ್ಕಾಗಿ ಭಾರತದಿಂದ ಒಂದು ವಿಮಾನವನ್ನು ಈಗಾಗಲೇ ಕಳುಹಿಸಲಾಗಿದೆ. ಇನ್ನೂ ಎರಡು ವಿಮಾನಗಳನ್ನು ಕಳುಹಿಸಲಾಗುವುದು ಎಂದು ಭಾರತೀಯ ವಾಯುಪಡೆ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆಗಾಗಿ ವಾಯುಪಡೆಯ ಹೆಲಿಕಾಪ್ಟರ್ಗಳನ್ನೂ ನೇಪಾಳಕ್ಕೆ ಕಳುಹಿಸಲಾಗುವುದು.
ಪ್ರವಾಹ ದುರಂತದಿಂದ ಕಂಗೆಟ್ಟಿರುವ ನೇಪಾಳ, ಭಾರತದ ಸಹಾಯಕ್ಕೆ ಧನ್ಯವಾದ ತಿಳಿಸಿದೆ. ನೇಪಾಳದ ಪ್ರಧಾನಿ ಬಲೇಂದ್ರ ಶಾ ಮತ್ತು ವಿದೇಶಾಂಗ ಸಚಿವ ಶಿಸಿರ್ ಖನಾಲ್ ಅವರು ಭಾರತದ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. "ಪ್ರವಾಹ ಪರಿಹಾರದ ಭಾಗವಾಗಿ ಮಾನವೀಯ ನೆರವು ಮತ್ತು ವೈದ್ಯಕೀಯ ಸಾಮಗ್ರಿಗಳನ್ನು ಪೂರೈಸಿದ್ದಕ್ಕಾಗಿ ಭಾರತ ಸರ್ಕಾರ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಧನ್ಯವಾದಗಳು" ಎಂದು ನೇಪಾಳದ ವಿದೇಶಾಂಗ ಸಚಿವ ಶಿಸಿರ್ ಖನಾಲ್ 'ಎಕ್ಸ್' ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. "ಈ ಕಷ್ಟದ ಸಮಯದಲ್ಲಿ ಭಾರತದ ತ್ವರಿತ ಸ್ಪಂದನೆಯು ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತು ಐಕಮತ್ಯದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ" ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ