
Middle East tensions: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಇರಾನ್ನೊಂದಿಗಿನ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, ಇರಾನ್ನ ಪರಿಸ್ಥಿತಿಯ ಬಗ್ಗೆ ನೆತನ್ಯಾಹು ತಿಳಿಸಿದ್ದಾರೆ ಎಂದು ಬರೆದಿದ್ದಾರೆ. ಭಾರತದ ಕಳವಳಗಳನ್ನು ನಾನು ವ್ಯಕ್ತಪಡಿಸಿದ್ದೇನೆ ಮತ್ತು ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒತ್ತಿ ಹೇಳಿದ್ದೇನೆ, ಎಂದು ಮೋದಿ ಹೇಳಿದ್ದಾರೆ.
ವಾಯುದಾಳಿ ನಂತರ ವಿಶ್ವದ ಹಲವು ನಾಯಕರಿಗೆ ಕರೆ:
ಇರಾನ್ ಮೇಲೆ ಇಸ್ರೇಲ್ ನಡೆಸಿದ ಬೃಹತ್ ವಾಯುದಾಳಿಯ ನಂತರ, ನೆತನ್ಯಾಹು ವಿಶ್ವದ ಹಲವು ನಾಯಕರೊಂದಿಗೆ ಮಾತುಕತೆ ಆರಂಭಿಸಿದ್ದಾರೆ. ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಈಗಾಗಲೇ ಮಾತನಾಡಿರುವ ಅವರು, ಶೀಘ್ರದಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತವು ಎರಡೂ ದೇಶಗಳಿಗೆ ಉದ್ವಿಗ್ನತೆಯನ್ನು ಹೆಚ್ಚಿಸುವ ಕ್ರಮಗಳನ್ನು ತಪ್ಪಿಸಲು ಒತ್ತಾಯಿಸಿದೆ.
ನೆತನ್ಯಾಹು ಹೇಳಿದ್ದೇನು?
ಇರಾನ್ನ ಪರಮಾಣು ಮತ್ತು ಕ್ಷಿಪಣಿ ಕಾರ್ಯಕ್ರಮಗಳು ಇಸ್ರೇಲ್ಗೆ ಬೆದರಿಕೆಯೊಡ್ಡಿವೆ ಎಂದು ನೆತನ್ಯಾಹು ಆರೋಪಿಸಿದ್ದಾರೆ. ನಾವು ಇರಾನ್ನ ಪರಮಾಣು ಶಸ್ತ್ರಾಸ್ತ್ರ ಕೇಂದ್ರ, ಪ್ರಮುಖ ಪರಮಾಣು ವಿಜ್ಞಾನಿಗಳು, ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಮೇಲೆ ದಾಳಿ ನಡೆಸಿದ್ದೇವೆ, ಈ ದಾಳಿ ಇರಾನ್ ನಾಗರಿಕ ವಿರುದ್ಧ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇರಾನ್ ಇಸ್ರೇಲ್ಗೆ ಪ್ರಯಾಣ ಬೇಡ: ರಷ್ಯಾ ಸೂಚನೆ
ರಷ್ಯಾ ತನ್ನ ನಾಗರಿಕರಿಗೆ ಇರಾನ್ ಮತ್ತು ಇಸ್ರೇಲ್ಗೆ ಪ್ರಯಾಣಿಸದಂತೆ ಸೂಚಿಸಿದೆ. ಜೊತೆಗೆ ಇಸ್ರೇಲ್ನ ವಾಯುದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಜೂನ್ 13ರ ರಾತ್ರಿ ಇಸ್ರೇಲ್ ನಡೆಸಿದ ಮಿಲಿಟರಿ ಕ್ರಮವು ವಿಶ್ವಸಂಸ್ಥೆಯ ಚಾರ್ಟರ್ ಮತ್ತು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ