
ಮುಂಬೈ (ಅ. 22): ದೇಶ ವಿರೋಧಿ, ಹಿಂದುತ್ವ ಸಿದ್ಧಾಂತವನ್ನು ಟೀಕಿಸುವ ಸಿನಿಮಾ, ಯಾವುದೇ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಆರ್ಎಸ್ಎಸ್ ನಾಯಕರು ತನಗೆ ಸೂಚಿಸಿದ್ದಾರೆ ಎಂಬ ವರದಿಗಳನ್ನು ನೆಟ್ಫ್ಲಿಕ್ಸ್ ಸಂಸ್ಥೆ ತಳ್ಳಿಹಾಕಿ, ಇದೊಂದು ಸುಳ್ಳು ಸುದ್ದಿಯಾಗಿದೆ ಎಂದು ಸ್ಪಷ್ಟಪಡಿಸಿದೆ.
ಆರ್ಎಸ್ಎಸ್ ನಾಯಕರು ನೆಟ್ಫ್ಲಿಕ್ಸ್, ಅಮೇಜಾನ್, ಮತ್ತಿತರ ಡಿಜಿಟಲ್ ಪ್ರಸಾರ ವಾಹಿನಿಗಳ ಜತೆ ಅನೌಪಚಾರಿಕ ಸಭೆ ನಡೆಸಿ, ಕೇಂದ್ರ ಸರ್ಕಾರ, ರಾಷ್ಟ್ರ ವಿರೋಧಿ ಮತ್ತು ಹಿಂದುತ್ವ ವಿರೋಧಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಒತ್ತಡ ಹೇರಿದ್ದಾರೆ ಎಂದು ವರದಿಯಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ನೆಟ್ಫ್ಲಿಕ್ಸ್ನ ಕಾರ್ಯಕಾರಿ ನಿರ್ದೇಶಕರಾದ ಸೃಷ್ಟಿಆರ್ಯ ಅವರು ಆರ್ಎಸ್ಎಸ್ ನಮ್ಮ ಜತೆ ಯಾವುದೇ ಸಭೆ ನಡೆಸಿಲ್ಲ. ಈ ವರದಿಗಳು ಸತ್ಯಕ್ಕೆ ದೂರವಾದವು ಎಂದು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ