
ನವದೆಹಲಿ, (ಜೂನ್, 13): ನವದೆಹಲಿಯ ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನದ ಸಿಬ್ಬಂದಿಯೊಬ್ಬರಲ್ಲಿ ಕೋವಿಡ್ -19 ಸೋಂಕು ಇರುವುದು ಶನಿವಾರ ದೃಢಪಟ್ಟಿದೆ.
ರೂಂ ಬಾಯ್ ಆಗಿ ಕೆಲಸ ಮಾಡುತ್ತಿದ್ದ ದೆಹಲಿ ಮೂಲದ 25 ವರ್ಷದ ಯುವಕನಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ.
ಜೂನ್ 8ರವರೆಗೆ ಕೆಲಸಕ್ಕೆ ಬಂದಿದ್ದ ಈ ವ್ಯಕ್ತಿ ಜ್ವರದಿಂದ ಬಳಲಿದ್ದರಿಂದ ಪರೀಕ್ಷೆಗೆ ಒಳಪಡಿಸಲಾಗಿತ್ತು. ಶನಿವಾರ ಸೋಂಕು ಇರುವುದು ದೃಢಪಟ್ಟಿದೆ.
ಬೆಂಗ್ಳೂರು ಡಾಕ್ಟರ್ಗೆ, ಬಿಎಸ್ಎಫ್ ಯೋಧನಿಗೆ ಕೊರೋನಾ ಪಾಸಿಟಿವ್
ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನ-1ರಲ್ಲಿ ಈ ವ್ಯಕ್ತಿ ರೂಂ ಬಾಯ್ ಕೆಲಸ ಮಾಡುತ್ತಿದ್ದ. ಇವರ ಸಂಪರ್ಕಕ್ಕೆ ಬಂದಿದ್ದ ಇತರ ಸಿಬ್ಬಂದಿ ಯಾರು ಎಂಬ ಕುರಿತು ಪತ್ತೆ ಮಾಡುವ ಕಾರ್ಯ ನಡೆದಿದೆ.
ದೆಹಲಿಯ ನಿವಾಸಿಯಾಗಿರುವ ಈ ವ್ಯಕ್ತಿಗೆ ಭವನದ ಸಿಬ್ಬಂದಿ ಅಲ್ಲದ, ಇತರರ ಸಂಪರ್ಕದಿಂದ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ