ಕರ್ನಾಟಕ‌ ಭವನದ ರೂಂ ಬಾಯ್‌ಗೆ ಕೊರೋನಾ ಅಟ್ಯಾಕ್ ...!

By Suvarna NewsFirst Published Jun 13, 2020, 3:47 PM IST
Highlights

ನವದೆಹಲಿಯಲ್ಲಿರುವ ಕರ್ನಾಟಕ ಭವನದ ಸಿಬ್ಬಂದಿಯೊಬ್ಬರಿಗೆ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದ್ದು, ರಾಜಕೀಯ ನಾಯಕರ ಆತಂಕಕ್ಕೆ ಕಾರಣವಾಗಿದೆ.

ನವದೆಹಲಿ, (ಜೂನ್, 13): ನವದೆಹಲಿಯ ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ‌  ಭವನದ ಸಿಬ್ಬಂದಿಯೊಬ್ಬರಲ್ಲಿ ಕೋವಿಡ್ -19 ಸೋಂಕು ಇರುವುದು ಶನಿವಾರ ದೃಢಪಟ್ಟಿದೆ.

ರೂಂ ಬಾಯ್ ಆಗಿ ಕೆಲಸ ಮಾಡುತ್ತಿದ್ದ ದೆಹಲಿ ಮೂಲದ 25 ವರ್ಷದ ಯುವಕನಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ.

ಜೂನ್ 8ರವರೆಗೆ ಕೆಲಸಕ್ಕೆ ಬಂದಿದ್ದ ಈ ವ್ಯಕ್ತಿ ಜ್ವರದಿಂದ ಬಳಲಿದ್ದರಿಂದ ಪರೀಕ್ಷೆಗೆ ಒಳಪಡಿಸಲಾಗಿತ್ತು. ಶನಿವಾರ ಸೋಂಕು ಇರುವುದು ದೃಢಪಟ್ಟಿದೆ.

ಬೆಂಗ್ಳೂರು ಡಾಕ್ಟರ್‌ಗೆ, ಬಿಎಸ್‌ಎಫ್ ಯೋಧನಿಗೆ ಕೊರೋನಾ ಪಾಸಿಟಿವ್

 ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ‌ ಭವನ-1ರಲ್ಲಿ ಈ ವ್ಯಕ್ತಿ ರೂಂ ಬಾಯ್ ಕೆಲಸ ಮಾಡುತ್ತಿದ್ದ. ಇವರ ಸಂಪರ್ಕಕ್ಕೆ ಬಂದಿದ್ದ ಇತರ ಸಿಬ್ಬಂದಿ ಯಾರು ಎಂಬ ಕುರಿತು ಪತ್ತೆ ಮಾಡುವ ಕಾರ್ಯ ನಡೆದಿದೆ.

ದೆಹಲಿಯ ನಿವಾಸಿಯಾಗಿರುವ ಈ ವ್ಯಕ್ತಿಗೆ ಭವನದ ಸಿಬ್ಬಂದಿ ಅಲ್ಲದ, ಇತರರ ಸಂಪರ್ಕದಿಂದ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"

click me!