ವಾರಾಂತ್ಯಕ್ಕೆ ರಚನೆಯಾಗಲಿದೆ ಹೊಸ ಸರ್ಕಾರ: ತ್ರಿಮೂರ್ತಿಗಳ ಕನಸು ಸಾಕಾರ?

Published : Nov 21, 2019, 04:40 PM ISTUpdated : Nov 21, 2019, 05:33 PM IST
ವಾರಾಂತ್ಯಕ್ಕೆ ರಚನೆಯಾಗಲಿದೆ ಹೊಸ ಸರ್ಕಾರ: ತ್ರಿಮೂರ್ತಿಗಳ ಕನಸು ಸಾಕಾರ?

ಸಾರಾಂಶ

ಈ ವಾರಾಂತ್ಯದಲ್ಲಿ ಅಸ್ತಿರತ್ವಕ್ಕೆ ಬರಲಿದೆ ಹೊಸ ಸರ್ಕಾರ| ಸರ್ಕಾರ ರಚನೆಯ ಕಸರತ್ತು ಚುರುಕು| ಮಹಾರಾಷ್ಟ್ರದ ಮಹಾ ನಾಟಕಕ್ಕೆ ಅಂತಿಮ ತೆರೆ ಬೀಳುವ ಸಾಧ್ಯತೆ| ಶಿವಸೇನೆ, ಕಾಂಗ್ರೆಸ್-ಎನ್’ಸಿಪಿ ಮೈತ್ರಿಕೂಟ ಸರ್ಕಾರ ರಚಿಸುವ ಸಾಧ್ಯತೆ| ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸರ್ಕಾರ ರಚನೆಗೆ ಒಪ್ಪಿಗೆ| ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರ ರಚಿಸಲು ಸಮ್ಮತಿ| ನಾಳೆ(ನ.22) ಮುಂಬೈನಲ್ಲಿ ಮೂರು ಪಕ್ಷಗಳ ನಾಯಕರ ಸಭೆ| 

ಮುಂಬೈ(ನ.21): ಮಹಾರಾಷ್ಟ್ರದ ಮಹಾ ನಾಟಕಕ್ಕೆ ಅಂತಿಮ ತೆರೆ ಬೀಳುವ ಸಾಧ್ಯತೆ ಇದ್ದು, ಶಿವಸೇನೆ, ಕಾಂಗ್ರೆಸ್-ಎನ್’ಸಿಪಿ ಮೈತ್ರಿಕೂಟ ಈ ವಾರಾಂತ್ಯದಲ್ಲಿ ಸರ್ಕಾರ ರಚಿಸುವ ಸಾಧ್ಯತೆ ದಟ್ಟವಾಗಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಸಂಬಂಧ ಅಂತಿಮ ನಿರ್ಧಾರಕ್ಕೆ ಬಂದಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಶಿವಸೇನೆ ಜೊತೆಗೆ ಕೈಜೋಡಿಸಿ ಸರ್ಕಾರ ರಚಿಸಲು ನಿರ್ಧರಿಸಿದೆ ಎನ್ನಲಾಗಿದೆ.  

ಉದ್ಧವ್‌ಗೆ 5 ವರ್ಷ ಸಿಎಂ ಪಟ್ಟ: ರಾಜಿ ಸೂತ್ರ ರೆಡಿ?

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರ ರಚಿಸಲು ಸಾಧ್ಯ ಎಂದು ಹೇಳಿದ್ದಾರೆ.

ಇನ್ನು ಸರ್ಕಾರ ರಚನೆಯ ಕುರಿತು ಶಿವಸೇನೆ ಕೂಡ ಉತ್ಸುಕವಾಗಿದ್ದು, ಕಾಂಗ್ರೆಸ್-ಎನ್’ಸಿಪಿ ಅಂತಿಮ ಒಪ್ಪಿಗೆಗಾಗಿ ಕಾಯುತ್ತಿದೆ. ನಾಳೆ(ನ.22) ಮುಂಬೈನಲ್ಲಿ ಮೂರು ಪಕ್ಷಗಳ ನಾಯಕರು ಸಭೆ ಸೇರಿ ಅಂತಿಮ ನಿರ್ಧಾರ ಘೋಷಿಸಿದ್ದಾರೆ ಎನ್ನಲಾಗಿದೆ.

ಪುಣೆಯಲ್ಲಿ NCP ಕೋರ್‌ಕಮಿಟಿ ಸಭೆ, ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಯಾವಾಗ?

ಡಿ.01ರೊಳಗಾಗಿ ಸರ್ಕಾರ ರಚನೆಯಾಗುವ ಸಂಭವವಿದ್ದು, ಇದಕ್ಕೆ ಪೂರಕವಾಗಿ ಮೂರೂ ಪಕ್ಷಗಳು ಸಿದ್ಧತೆ ನಡೆಸಿವೆ ಎಂದು ಮೂಲಗಳು ತಿಳಿಸಿವೆ.

ನವೆಂಬರ್ 21ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?