New Parliament Building Inauguration: ನೂತನ ಸಂಸತ್‌ ಭವನ ನಿರ್ಮಾಣಕ್ಕೆ ಶ್ರಮಿಸಿದ 'ಶ್ರಮ ಯೋಗಿಗಳಿಗೆ' ಮೋದಿ ಸನ್ಮಾನ

Published : May 28, 2023, 08:55 AM ISTUpdated : May 28, 2023, 09:00 AM IST
New Parliament Building Inauguration: ನೂತನ ಸಂಸತ್‌ ಭವನ ನಿರ್ಮಾಣಕ್ಕೆ ಶ್ರಮಿಸಿದ 'ಶ್ರಮ ಯೋಗಿಗಳಿಗೆ' ಮೋದಿ ಸನ್ಮಾನ

ಸಾರಾಂಶ

ಮಧ್ಯಾಹ್ನದವರೆಗೂ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ನೂತನ ಸಂಸತ್‌ ಭವನದ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ಹಾಗೂ ಪೂಜಾ ಕೈಂಕರ್ಯಗಳೊಂದಿಗೆ ಸಾಂಸ್ಕೃತಿಕವಾಗಿ ನಡೆಯುತ್ತಿದೆ.

ನವದೆಹಲಿ (ಮೇ 28, 2023): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಿರ್ಮಾಣಗೊಂಡ ನೂತನ ಸಂಸತ್‌ ಭವನವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ. ಈ ವೇಳೆ ಕೆಂದ್ರ ಗೃಹ ಸಚಿವ ಅಮಿತ್ ಶಾ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಸೇರಿ ಅನೇಕರು ಭಾಗಿಯಾಗಿದ್ರು. ಇನ್ನು, ಲೋಕಾರ್ಪಣೆ ಬಳಿಕ ಪ್ರಧಾನಿ ಮೋದಿ ಕಳೆದ ಎರಡೂವರೆ ವರ್ಷಗಳಿಂದ ನೂತನ ಸಂಸತ್‌ ಭವನ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರಿಗೆ ಸನ್ಮಾನ ಮಾಡಿದ್ದಾರೆ. ಈ ಸುಂದರ ಕಟ್ಟಡ ನಿರ್ಮಿಸಲು 60 ಸಾವಿರಕ್ಕೂ ಹೆಚ್ಚು ಶ್ರಮ ಯೋಗಿಗಳು ಕಷ್ಟ ಪಟ್ಟಿದ್ದಾರೆ. ಈ ಹಿನ್ನೆಲೆ ಇವರನ್ನು ಮೋದಿ ಸನ್ಮಾನಿಸಿದ್ದಾರೆ.

ಅದಕ್ಕೂ ಮುನ್ನ ಪ್ರಧಾನಿ ಮೋದಿ ನೂತನ ಸಂಸತ್‌ ಭವನದ ಲೋಕಾರ್ಪಣೆ ನಡೆಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ತುಂಬಿದ ಬೆನ್ನಲ್ಲೇ ಆಧುನಿಕ ಸ್ಪರ್ಶದೊಂದಿಗೆ ಹೊಸ ಸಂಸತ್‌ ಭವನ ಲೋಕಾರ್ಪಣೆಯಾಗಿದೆ. ಇನ್ನು, ಐತಿಹಾಸಿಕ ರಾಜದಂಡ ಅಥವಾ ಚಿನ್ನದ ಸೆಂಗೋಲ್‌ ಅನ್ನೂ ಸಹ ಮೋದಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಇದನ್ನು ಓದಿ: New Parliament Building Inauguration: ಪ್ರಧಾನಿ ಮೋದಿಯಿಂದ ರಾಜದಂಡ ಪ್ರತಿಷ್ಠಾಪನೆ; ಸಂಸತ್‌ ಭವನದಲ್ಲಿ ಸರ್ವಧರ್ಮ ಪ್ರಾರ್ಥನೆ

ಪ್ರಧಾನಿ ಮೋದಿ ನೂತನ ಸಂಸತ್‌ ಭವನವನ್ನು ಬೆಳಗ್ಗೆಯೇ ಲೋಕಾರ್ಪಣೆಗೊಳಿಸಿದ್ದು, ನಂತರ ಚಿನ್ನದ ಸೆಂಗೋಲ್‌ ಅನ್ನು ಪ್ರತಿಷ್ಠಾಪನೆ ಮಾಡಲಾಯ್ತು. ಇನ್ನು, ಕಾರ್ಮಿಕರಿಗೆ ಸನ್ಮಾನ ಮಾಡಿದ ಬಳಿಕ ಸರ್ವಧರ್ಮ ಪ್ರಾರ್ಥನೆಯನ್ನೂ ನಡೆಸಲಾಯ್ತು. ಸರ್ವಧರ್ಮಗಳ ದರ್ಮಗುರುಗಳು ಈ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ರು.

ಆಧುನೀಕರಣದತ್ತ ದಾಪುಗಾಲು ಹಾಕುತ್ತಿರುವ ನವ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ತುಂಬಿದ ಬೆನ್ನಲ್ಲೇ ಆಧುನಿಕ ಸ್ಪರ್ಶದೊಂದಿಗೆ ಹೊಸ ಸಂಸತ್‌ ಭವನ ಲೋಕಾರ್ಪಣೆಯಾಗಿದೆ. ಬೆಳಗ್ಗೆ 7.25ರ ಸುಮಾರಿಗೆ ಪ್ರಧಾನಿ ಮೋದಿ ನೂತನ ಸಂಸತ್‌ ಭವನಕ್ಕೆ ಆಗಮಿಸಿದ್ದು ,ಪೂಜಾ ಕೈಂಕರ್ಯ ನಡೆಸಿದ್ದಾರೆ.

ಇದನ್ನೂ ಓದಿ: ನೂತನ ಸಂಸತ್‌ ಭವನ ಲೋಕಾರ್ಪಣೆ: ಶೃಂಗೇರಿ ಶಾರದಾ ಪೀಠದ ಪುರೋಹಿತರಿಂದ ಪೂಜಾ ಕೈಂಕರ್ಯ

ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಬಳಿಕ ಪ್ರಧಾನಿ ಮೋದಿ ಹೋಮ ಹವನ ನಡೆಸಿದ್ದು,, ಮೋದಿಗೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಸಾಥ್‌ ನೀಡಿದ್ದಾರೆ. ಗಣಪತಿ ಹೋಮವನ್ನೂ ಸಹ ಪ್ರಧಾನಿ ಮೋದಿ ಮಾಡಿದ್ದಾರೆ. ಶೃಂಗೇರಿ ಶಾರದಾ ಪೀಠದ ಪುರೋಹಿತರು ಈ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ.

ಮಧ್ಯಾಹ್ನದವರೆಗೂ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ನೂತನ ಸಂಸತ್‌ ಭವನದ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ಹಾಗೂ ಪೂಜಾ ಕೈಂಕರ್ಯಗಳೊಂದಿಗೆ ಸಾಂಸ್ಕೃತಿಕವಾಗಿ ನಡೆಯಲಿದೆ. ಅಲ್ಲದೆ, ಪ್ರಧಾನಿ ಮೋದಿ ಸೆಂಗೋಲ್‌ ಅನ್ನು ಪಡೆದು, ಬಳಿಕ ಅದಕ್ಕೆ ವಿಶೇಷ ಪೂಜೆ ನಡೆಸಿ, ನಂತರ ಸೆಂಗೋಲ್‌ ಅಥವಾ ಚಿನ್ನದ ರಾಜದಂಡವನ್ನು ಸಂಸತ್‌ ಭವನದಲ್ಲಿ ಪ್ರತಿಷ್ಠಾಪನೆ ಮಾಡಲಾಯ್ತು.

ಇದನ್ನೂ ಓದಿ: ಸೆಂಗೋಲ್‌ ತಯಾರಿಸಿದ ತಮಿಳುನಾಡಿನ ಕುಟುಂಬಕ್ಕೆ ಸಂಸತ್‌ ಭವನ ಉದ್ಘಾಟನೆಗೆ ಆಹ್ವಾನ:ರಾಜದಂಡ ನಿರ್ಮಾತೃರ ಹರ್ಷ!

ಪ್ರಧಾನಿ ನರೇಂದ್ರ ಮೋದಿ ಅವರು ಈ ಹೊಸ ಕಟ್ಟಡವನ್ನು ಉದ್ಘಾಟನೆ ಮಾಡಿದ್ದು, ಮುಂದಿನ ಮುಂಗಾರು ಅಧಿವೇಶನ ಇದೇ ಕಟ್ಟಡದಲ್ಲಿ ನಡೆಯಲಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರವಾದ ಭಾರತ, ಜಗತ್ತಿನ ಅತಿ ಉತ್ತಮ ವಾಸ್ತುಶಿಲ್ಪ ರಚನೆಯನ್ನು ಹೊಂದಿರುವ ಸಂಸತ್‌ ಭವನವನ್ನು ಹೊಂದಿದ್ದರೂ ಸಹ ಆ ಕಟ್ಟಡ ಬರೋಬ್ಬರಿ 96 ವರ್ಷಗಳ ಹಳೆಯದ್ದಾದ ಕಾರಣ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!