
ರೈಲಿನ ಶೌಚಾಲಯದಲ್ಲಿ ನವಜಾತ ಶಿಶುವೊಂದನ್ನು ಯಾರೋ ಬಿಟ್ಟು ಹೋದಂತಹ ಘಟನೆ ನಡೆದಿದೆ. ಒಂದು ಬಟ್ಟೆಯಲ್ಲಿ ಸುತ್ತಿ ಮಗುವನ್ನು ಬಿಡಲಾಗಿದ್ದು, ಮಗು ಶೌಚಾಲಯಕ್ಕೆ ಹೋದವರಿಗೆ ಮಗು ನಡುಗುತ್ತಾ ಅಳುತ್ತಿರುವ ದೃಶ್ಯ ಕಂಡು ಬಂದಿದೆ. ಕೂಡಲೇ ಅವರು ರೈಲ್ವೆ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಮಗುವನ್ನು ರಕ್ಷಣೆ ಮಾಡಲಾಗಿದ್ದು, ಮಗು ರೈಲಿನ ಟಾಯ್ಲೆಟ್ನಲ್ಲಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹರಿದ್ವಾರದಿಂದ ಪುರಿಗೆ ಹೊರಟಿದ್ದ ಉತ್ಕಲ್ ಎಕ್ಸ್ಪ್ರೆಸ್ ರೈಲಿನಲ್ಲಿ ಶೌಚಾಲಯದಲ್ಲಿ ಈ ಘಟನೆ ನಡೆದಿದೆ. ಸಣ್ಣದೊಂದು ಟವೆಲ್ನಲ್ಲಿ ಮಗುವನ್ನು ಅರ್ಧ ಸುತ್ತಿ ಶೌಚಾಲಯದಲ್ಲಿ ಬಿಡಲಾಗಿತ್ತು.
ಪ್ರಯಾಣಿಕನೊಬ್ಬ ಶೌಚಾಲಯದ ಬಾಗಿಲು ತೆರೆದಾಗ ಘಟನೆ ಬೆಳಕಿಗೆ
ಅಧಿಕಾರಿಗಳ ಪ್ರಕಾರ, ಎಸ್ 4ಕೋಚ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಶೌಚಾಲಯದ ಬಾಗಿಲು ತೆರೆದಾಗ, ಶೌಚಾಲಯದ ನೆಲದಲ್ಲಿ ನವಜಾತ ಶಿಶುವೊಂದನ್ನು ಬಿಟ್ಟು ಹೋಗಿರುವುದನ್ನು ನೋಡಿ ಆಘಾತಗೊಂಡಿದ್ದಾರೆ. ಆ ಪ್ರಯಾಣಿಕ ಕೂಡಲೇ ರೈಲಿನ ಬೋಗಿಯಲ್ಲಿರುವವರಿಗೆ ವಿಚಾರ ತಿಳಿಸಿದ್ದರಿಂದ ರೈಲಿನಲ್ಲಿದ್ದವರು ಭಯಗೊಂಡಿದ್ದಾರೆ. ನಂತರ ಒಬ್ಬ ಪ್ರಯಾಣಿಕ ರೈಲ್ವೆ ತುರ್ತು ಸಹಾಯವಾಣಿಗೆ ಕರೆ ಮಾಡಿ ಪರಿಸ್ಥಿತಿಯ ಬಗ್ಗೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ನವಜಾತ ಶಿಶುವನ್ನು ರಕ್ಷಿಸಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ.
ಇದನ್ನೂ ಓದಿ: ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ: ಯಾವ ವಾಹನಗಳಿಗೆ ಎಷ್ಟು ದರ ಹೆಚ್ಚಳ
ರೈಲಿನಲ್ಲಿ ಸಿಕ್ಕ ಮಗುವನ್ನು ಜಿಲ್ಲಾ ಆಸ್ಪತ್ರೆಯ ವಿಶೇಷ ಆರೈಕೆ ನವಜಾತ ಶಿಶು ಘಟಕಕ್ಕೆ (SNCU) ದಾಖಲಿಸಲಾಗಿದೆ ಎಂದು ಸಿವಿಲ್ ಸರ್ಜನ್ ಡಾ. ಯಶವಂತ್ ವರ್ಮಾ ತಿಳಿಸಿದ್ದಾರೆ. ವೈದ್ಯರ ತಂಡವು ಮಗುವಿನ ಆರೋಗ್ಯವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಅಗತ್ಯವಿರುವ ವೈದ್ಯಕೀಯ ಆರೈಕೆಯನ್ನು ಒದಗಿಸುತ್ತಿದೆ ಎಂದು ಅವರು ಹೇಳಿದರು. ಆಸ್ಪತ್ರೆ ಅಧಿಕಾರಿಗಳ ಪ್ರಕಾರ, ಶಿಶುವನ್ನು ಪ್ರಸ್ತುತ ವೀಕ್ಷಣೆಯಲ್ಲಿಡಲಾಗಿದ್ದು, ವೈದ್ಯರು ಮಗುವಿನ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
ಇದನ್ನೂ ಓದಿ: ಟೋಲ್ ದರ ಹೆಚ್ಚಳ ನಗದು ಸ್ವೀಕಾರ ಇಲ್ಲ: ಯುಪಿಐ ಮೂಲಕವೇ ಪೇಮೆಂಟ್
ಇತ್ತ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಉತ್ಕಲ್ ಎಕ್ಸ್ಪ್ರೆಸ್ನ ಎಸ್ -4 ಕೋಚ್ನ ಪ್ರಯಾಣಿಕರ ಪಟ್ಟಿಯನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಕಟ್ನಿ ಮುರ್ವಾರಾ ರೈಲು ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ನವಜಾತ ಶಿಶುವನ್ನು ಶೌಚಾಲಯದಲ್ಲಿ ಬಿಟ್ಟವರು ಯಾರು ಎಂದು ತಿಳಿಯಲುಪೊಲೀಸರು ಅದೇ ಕೋಚ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಸಹ ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ