ಸಾಮಾಜಿಕ ಮಾಧ್ಯಮ ಬಳಕೆದಾರರ ಸಮಸ್ಯೆ ಆಲಿಸಲು ಸಮಿತಿ

Published : Jun 07, 2022, 05:09 AM ISTUpdated : Jun 07, 2022, 06:49 AM IST
ಸಾಮಾಜಿಕ ಮಾಧ್ಯಮ ಬಳಕೆದಾರರ ಸಮಸ್ಯೆ ಆಲಿಸಲು ಸಮಿತಿ

ಸಾರಾಂಶ

* ಐಟಿ ಸಚಿವಾಲಯದ ಕರಡು ಪ್ರಕಟ * ಕುಂದುಕೊರತೆ ಅಧಿಕಾರಿ ನಿರ್ಣಯ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ * 30 ದಿನದೊಳಗೆ ಆಕ್ಷೇಪಣೆ, ಸಲಹೆ-ಸೂಚನೆ ಸಲ್ಲಿಸಲು ಅವಕಾ

ನವದೆಹಲಿ(ಜೂ.07): ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ ನಿಯಮಗಳ ತಿದ್ದುಪಡಿ ಕರಡನ್ನು ಪ್ರಕಟಿಸಿದೆ. ಇದರಲ್ಲಿ ಸಾಮಾಜಿಕ ಜಾಲತಾಣಗಳ ಕುಂದುಕೊರತೆ ಅಧಿಕಾರಿ (ಗ್ರೀವಿಯನ್ಸ್‌ ಆಫೀಸರ್‌) ನಿರ್ಣಯವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಕುಂದುಕೊರತೆ ಮೇಲ್ಮನವಿ ಸಮಿತಿ ಸ್ಥಾಪಿಸುವ ಚಿಂತನೆ ನಡೆಸಿದೆ.

ಈ ಕರಡು ನಿಯಮಗಳಿಗೆ ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಇನ್ನು 30 ದಿನದೊಳಗೆ ಜನರು ಅನಿಸಿಕೆ-ಅಭಿಪ್ರಾಯ-ಆಕ್ಷೇಪ ತಿಳಿಸಬಹುದು. ಜೂನ್‌ ಮಧ್ಯಭಾಗದಲ್ಲಿನ ಜನತೆಯೊಂದಿಗೆ ಸಭೆಯನ್ನೂ ನಡೆಸಲಾಗುತ್ತದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್‌ ಚಂದ್ರಶೇಖರ್‌ ತಿಳಿಸಿದ್ದಾರೆ.

Rajeev Chandrasekhar: ಗ್ಯಾಲಿಯಂ ನೈಟ್ರೇಟ್‌ ತಂತ್ರಜ್ಞಾನಕ್ಕೆ ಮಹತ್ವ

ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಟ್ವೀಟರ್‌ನಂತಹ ಸಾಮಾಜಿಕ ಜಾಲತಾಣಗಳು ಸೆಲೆಬ್ರಿಟಿ ಸೇರಿದಂತೆ ಹಲವರ ಖಾತೆಗಳನ್ನು ರದ್ದುಗೊಳಿಸಿದ ಘಟನೆಗಳು ಪದೇಪದೇ ವರದಿಯಾಗುತ್ತಿರುವೆ. ಈ ಹಿನ್ನೆಲೆಯಲ್ಲಿ ಬಳಕೆದಾರರ ಹಕ್ಕು ಕಾಪಾಡುವ ಇರಾದೆ ಸರ್ಕಾರಕ್ಕಿದೆ.

ಏನು ತಿದ್ದುಪಡಿ?

ಸಾಮಾಜಿಕ ಜಾಲತಾಣಗಳ ಕುಂದುಕೊರತೆ ಅಧಿಕಾರಿ (ಗ್ರೀವಿಯನ್ಸ್‌ ಆಫೀಸರ್‌) ನಿರ್ಣಯವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಕೇಂದ್ರವು ಕುಂದುಕೊರತೆ ಮೇಲ್ಮನವಿ ಸಮಿತಿಯನ್ನು ಸ್ಥಾಪಿಸುವುದು ಕರಡು ನಿಯಮದಲ್ಲಿದೆ.

ರಾಜಪಥದಲ್ಲಿ ಹಾರಲಿದೆ ಶ್ರೀನಗರ ಕಾಪಾಡಿದ, ಬಾಂಗ್ಲಾಗೆ ಸ್ವಾತಂತ್ರ್ಯ ಕೊಟ್ಟ ವಿಂಟೇಜ್ ಡಕೋಟಾ!

ಸಾಮಾಜಿಕ ಜಾಲತಾಣಗಳ ಬಳಕೆದಾರನು ಕುಂದುಕೊರತೆ ಅಧಿಕಾರಿ ಕ್ರಮ ಜರುಗಿಸಿದ 30 ದಿನಗಳೊಳಗಾಗಿ ಸಮಿತಿಗೆ ಮೇಲ್ಮನವಿ ಸಲ್ಲಿಸಬೇಕು. ಸಮಿತಿಯು ಮೇಲ್ಮನವಿ ಶೀಘ್ರ ವಿಚಾರಣೆ ನಡೆಸಿ, ಅರ್ಜಿ ಸ್ವೀಕರಿಸಿದ 30 ದಿನಗಳೊಳಗೆ ಪ್ರಕರಣ ಇತ್ಯರ್ಥಗೊಳಿಸಬೇಕು. ಎಲ್ಲ ಸಾಮಾಜಿಕ ಜಾಲತಾಣದ ಕಂಪನಿಗಳು ಸಮಿತಿಯ ನಿರ್ಣಯಕ್ಕೆ ಬದ್ಧವಾಗಿರಬೇಕು ಎಂದು ಮಾಹಿತಿ ತಂತ್ರಜ್ಞಾನ ಕಾಯ್ದೆ 2021ರ ತಿದ್ದುಪಡಿಯ ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..