ನಿರ್ಭಯಾ ಕೇಸ್‌: ಇಬ್ಬರು ದೋಷಿಗಳ ಕ್ಯುರೇಟಿವ್‌ ಜ.14ರಂದು ವಿಚಾರಣೆ

Published : Jan 12, 2020, 08:49 AM ISTUpdated : Jan 12, 2020, 02:10 PM IST
ನಿರ್ಭಯಾ ಕೇಸ್‌: ಇಬ್ಬರು ದೋಷಿಗಳ ಕ್ಯುರೇಟಿವ್‌ ಜ.14ರಂದು ವಿಚಾರಣೆ

ಸಾರಾಂಶ

ನಿರ್ಭಯಾ ಕೇಸ್‌: ಇಬ್ಬರು ದೋಷಿಗಳ ಕ್ಯುರೇಟಿವ್‌ ಜ.14ರಂದು ವಿಚಾರಣೆ| ವಿನಯ್‌ ಶರ್ಮಾ (26) ಹಾಗೂ ಮುಕೇಶ್‌ ಕುಮಾರ್‌ (32) ಸಲ್ಲಿಸಿರುವ ಕ್ಯುರೇಟಿವ್‌ ಅರ್ಜಿ

ನವದೆಹಲಿ[ಜ.12]: ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಇಬ್ಬರು ದೋಷಿಗಳು ಸಲ್ಲಿಸಿರುವ ಕ್ಯುರೇಟಿವ್‌ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಜ.14ರಂದು ವಿಚಾರಣೆ ನಡೆಸಲಿದೆ.

ನ್ಯಾ| ಎನ್‌.ವಿ. ರಮಣ, ನ್ಯಾ. ಅರುಣ್‌ ಮಿಶ್ರಾ, ನ್ಯಾ| ಆರ್‌ಎಫ್‌ ನಾರಿಮನ್‌ ಮತ್ತು ನ್ಯಾ| ಅಶೋಕ್‌ ಭೂಷಣ್‌ ಅವರು ವಿನಯ್‌ ಶರ್ಮಾ (26) ಹಾಗೂ ಮುಕೇಶ್‌ ಕುಮಾರ್‌ (32) ಸಲ್ಲಿಸಿರುವ ಕ್ಯುರೇಟಿವ್‌ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳಲಿದ್ದಾರೆ. ಈ ಪ್ರಕರಣದ ಇನ್ನಿಬ್ಬರು ದೋಷಿಗಳಾದ ಅಕ್ಷಯ್‌ ಕುಮಾರ್‌ ಸಿಂಗ್‌ (31) ಹಾಗೂ ಪವನ್‌ ಗುಪ್ತಾ (25) ಈವರೆಗೆ ಕ್ಯುರೇಟಿವ್‌ ಅರ್ಜಿ ಸಲ್ಲಿಕೆ ಮಾಡಿಲ್ಲ. ಈಗಾಗಲೇ ಈ ನಾಲ್ವರನ್ನೂ ಜ.22ರಂದು ಬೆಳಗ್ಗೆ 7 ಗಂಟೆಗೆ ಗಲ್ಲಿಗೆ ಏರಿಸುವಂತೆ ದೆಹಲಿ ನ್ಯಾಯಾಲಯ ಡೆತ್‌ ವಾರಂಟ್‌ ಜಾರಿ ಮಾಡಿದೆ.]

ನಿರ್ಭಯಾ ರೇಪಿಸ್ಟ್‌ಗಳ ಗಲ್ಲು ಮತ್ತೆ ಮುಂದಕ್ಕೆ?

ಏನಿದು ಕ್ಯುರೆಟಿವ್‌ ಅರ್ಜಿ?:

ಗಲ್ಲು ಶಿಕ್ಷೆಗೆ ಗುರಿಯಾದ ದೋಷಿಗಳಿಗೆ ಸುಪ್ರೀಂಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ ತಿರಸ್ಕೃತಗೊಂಡ ಬಳಿಕ ಇರುವ ಕೊನೆಯ ಕಾನೂನು ಆಯ್ಕೆ ಇದಾಗಿದೆ. ಸುಪ್ರೀಂಕೋರ್ಟ್‌ ಅಂತಿಮ ತೀರ್ಪಿನ ವಿರುದ್ಧ ಯಾವುದೇ ರೀತಿಯ ಕ್ಷಮೆಗೆ ದೋಷಿಗಳು ಅರ್ಹರೇ ಎಂಬುದುನ್ನು ಕೋರ್ಟ್‌ ಪರಿಶೀಲಿಸಲಿದೆ. ಒಂದು ವೇಳೆ ಅರ್ಜಿ ತಿರಸ್ಕೃತಗೊಂಡರೆ ಕ್ಷಮಾದಾನ ನೀಡುವ ಅಧಿಕಾರ ರಾಷ್ಟ್ರಪತಿಗಳಿಗೆ ಮಾತ್ರ ಇರುತ್ತದೆ.

ನಿರ್ಭಯಾ ರೇಪಿಸ್ಟ್‌ಗಳನ್ನು ಗಲ್ಲಿಗೇರಿಸುವ ಪವನ್‌ಗೆ ನಟ ಜಗ್ಗೇಶ್‌ರಿಂದ 1 ಲಕ್ಷ ರೂ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ
Holi Special Trains: ಹೋಳಿ ಹಬ್ಬಕ್ಕೆ ಊರಿಗೆ ಹೋಗ್ತೀರಾ? ರೈಲ್ವೆ ಇಲಾಖೆಯಿಂದ ಭರ್ಜರಿ ವ್ಯವಸ್ಥೆ, ಇಲ್ಲಿದೆ ಡೀಟೇಲ್ಸ್