ವಾರದ ಗಡುವು: ನಿರ್ಭಯಾ ಹಂತಕರ ಹೊಸ ಡೆತ್‌ವಾರಂಟ್‌ಗೆ ಅರ್ಜಿ!

Published : Feb 07, 2020, 10:25 AM IST
ವಾರದ ಗಡುವು: ನಿರ್ಭಯಾ ಹಂತಕರ ಹೊಸ ಡೆತ್‌ವಾರಂಟ್‌ಗೆ ಅರ್ಜಿ!

ಸಾರಾಂಶ

ನಿರ್ಭಯಾ ಹಂತಕರ ಹೊಸ ಡೆತ್‌ವಾರಂಟ್‌ಗೆ ಅರ್ಜಿ| ಕೇಂದ್ರ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ

ನವದೆಹಲಿ[ಫೆ.07]: ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ನೇಣಿಗೇರಿಸುವ ಸಂಬಂಧ ಹೊಸದಾಗಿ ಡೆತ್‌ ವಾರಂಟ್‌ ಹೊರಡಿಸುವಂತೆ ಕೋರಿ ದೆಹಲಿಯ ತಿಹಾರ್‌ ಜೈಲಿನ ಅಧಿಕಾರಿಗಳು ಗುರುವಾರ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ಶುಕ್ರವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ನಾಲ್ವರೂ ಅಪರಾಧಿಗಳಿಗೆ ನ್ಯಾಯಾಧೀಶ ಧರ್ಮೇಂದ್ರ ರಾಣಾ ಅವರು ಸೂಚಿಸಿದ್ದಾರೆ. ಜ.23ರಂದು ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಲು ನ್ಯಾಯಾಲಯ ಡೆತ್‌ ವಾರಂಟ್‌ ಹೊರಡಿಸಿತ್ತು. ಆದರೆ ಹಂತಕರು ಕಾನೂನು ಅಸ್ತ್ರ ಪ್ರಯೋಗಿಸಿದ ಹಿನ್ನೆಲೆಯಲ್ಲಿ ಫೆ.1ರ ಮುಹೂರ್ತ ನಿಗದಿಯಾಗಿತ್ತು.

ಆದರೆ ಹಂತಕರಿಗೆ ಕಾನೂನು ಮಾರ್ಗದಡಿ ಮತ್ತಷ್ಟುಅವಕಾಶವಿದ್ದ ಕಾರಣ ಜ.31ರಂದು ಆ ಡೆತ್‌ವಾರಂಟ್‌ಗೆ ನ್ಯಾಯಾಲಯ ತಡೆ ಕೊಟ್ಟಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?