ನಿರ್ಭಯಾ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ಹಂತಕನ ಹೊಸ ದಾಳ!

Published : Mar 07, 2020, 09:11 AM ISTUpdated : Mar 07, 2020, 05:41 PM IST
ನಿರ್ಭಯಾ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ಹಂತಕನ ಹೊಸ ದಾಳ!

ಸಾರಾಂಶ

ನಿರ್ಭಯಾ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್| ಶಿಕ್ಷೆ ದೂಡಲು ನಿರ್ಭಯಾ ಹಂತಕನ ಹೊಸ ದಾಳ|

ನವದೆಹಲಿ[ಮಾ.07]: ಮಾರ್ಚ್ 20ಕ್ಕೆ ನಿಗದಿಯಾಗಿರುವ ಗಲ್ಲು ಶಿಕ್ಷೆಯನ್ನು ಮುಂದೂಡಲು ನಿರ್ಭಯಾ ದೋಷಿಗಳು ಮತ್ತೊಂದು ವಿಳಂಬ ದಾಳವನ್ನು ಉರುಳಿಸಿದ್ದಾರೆ.

ವಕೀಲರು ದಾರಿ ತಪ್ಪಿಸಿದ್ದು, ಹಾಗಾಗಿ ನನ್ನ ಕಾನೂನು ಹೋರಾಟವನ್ನು ಪುನಃ ಸ್ಥಾಪಿಸಬೇಕು ಎಂದು ಕೋರಿ 4 ದೋಷಿಗಳಲ್ಲಿ ಓರ್ವನಾದ ಮುಕೇಶ್‌ ಸುಪ್ರಿಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಕೆಳ ನ್ಯಾಯಾಲಯಗಳು ನೀಡಿದ್ದ ತೀರ್ಪುಗಳನ್ನು ಹಾಗೂ ಕ್ಷಮಾದಾನ ಅರ್ಜಿ ತಿರಸ್ಕಾರವನ್ನು ರದ್ದು ಮಾಡಬೇಕು ಎಂದು ಕೇಳಿಕೊಂಡಿದ್ದಾನೆ.

ಅಲ್ಲದೇ ಈ ಪ್ರಕರಣದಲ್ಲಿ ಸಿಬಿಐ ನಡೆಸಿರುವ ತನಿಖೆಯು ಕೇಂದ್ರ ಗೃಹ ಇಲಾಖೆ, ದೆಹಲಿ ಸರ್ಕಾರ ಹಾಗೂ ಪ್ರಕರಣದ ಅಮಿಕಸ್‌ ಕ್ಯೂರಿ ವೃಂದಾ ಗ್ರೋವರ್‌ ಮಾಡಿರುವ ವ್ಯವಸ್ಥಿತ ಸಂಚು ಎಂದು ಹೇಳಿದ್ದಾನೆ.

ಸುಳ್ಳು ಹೇಳಿ ದಾಖಲೆಗಳಿಗೆ ನನ್ನಿಂದ ಸಹಿ ಹಾಕಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾನೆ. ಸೋಮವಾರ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಹೇಳಿದೆ.

ಮಾರ್ಚ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!
ನಾವ್ಯಾರಿಗೂ ಕಮ್ಮಿ ಇಲ್ಲ ಬ್ರೋ... ಆಹಾ ಭಾರತೀಯ ನಾರಿ ಕುಡಿದು ರಾಪಿಡೋ ಏರಿ ಬಿದ್ದಳು ಕೆಳಗೆ ಜಾರಿ: ವೀಡಿಯೋ