
ನವದೆಹಲಿ[ಮಾ.11]: ಮಾ.20ರಂದು ಗಲ್ಲು ಶಿಕ್ಷೆಗೆ ಗುರಿಯಾಗಬೇಕಿರುವ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ದೋಷಿಯಾದ ವಿನಯ್ ಶರ್ಮಾ, ಸಾವನ್ನು ತಪ್ಪಿಸಿಕೊಳ್ಳುವ ಮತ್ತೊಂದು ಯತ್ನ ಮಾಡಿದ್ದಾನೆ. ತನಗೆ ಗಲ್ಲು ಶಿಕ್ಷೆ ಬದಲಾಗಿ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಕೋರಿ ವಿನಯ್ ಶರ್ಮಾ, ದೆಹಲಿಯ ಉಪರಾಜ್ಯಪಾಲ ಅನಿಲ್ ಬೈಜಲ್ ಅವರಿಗೆ ಮನವಿ ಮಾಡಿಕೊಂಡಿದ್ದಾನೆ.
ಅಪರೂಪದಲ್ಲಿ ಪ್ರಕರಣದಲ್ಲಿ ಮಾತ್ರವೇ ಗಲ್ಲು ಶಿಕ್ಷೆ ವಿಧಿಸಬೇಕು. ಹೀಗಾಗಿ ಈ ಪ್ರಕರಣದಲ್ಲಿ ತನಗೆ ಗಲ್ಲು ಶಿಕ್ಷೆ ಬದಲಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ತನ್ನ ಸಣ್ಣ ವಯಸ್ಸು, ಸಾಮಾಜಿಕ- ಆರ್ಥಿಕ ಪರಿಸ್ಥಿತಿ ಮತ್ತು ಸುಧಾರಣೆಯ ಹಾದಿಯಲ್ಲಿನ ಅಂಶಗಳನ್ನು ಪರಿಗಣಿಸಿ ಕ್ಷಮಾದಾನ ನೀಡುವ ಮೂಲಕ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಬೇಕು ಎಂದು ಕೋರಿದ್ದಾನೆ.
ಈಗಾಗಲೇ ದೆಹಲಿಯ ಹೆಚ್ಚುವರಿ ಸೆಷೆನ್ಸ್ ನ್ಯಾಯಾಲಯ ಮಾ.20ರಂದು ಬೆಳಗ್ಗೆ ನಿರ್ಭಯಾ ಪ್ರಕರಣದ ನಾಲ್ವರೂ ದೋಷಿಗಳಿಗೆ ಗಲ್ಲು ಶಿಕ್ಷೆ ಜಾರಿಗೆ ಡೆತ್ವಾರಂಟ್ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ