ಯುವತಿಯರ ಅಕ್ರಮ ವಶ ಪ್ರಕರಣ: ನಿತ್ಯಾನಂದಗೆ ಗುಜರಾತ್‌ ಹೈಕೋರ್ಟ್‌ ಕ್ಲೀನ್‌ಚಿಟ್‌

Published : Feb 05, 2024, 09:35 AM ISTUpdated : Feb 19, 2024, 11:00 AM IST
ಯುವತಿಯರ ಅಕ್ರಮ ವಶ ಪ್ರಕರಣ: ನಿತ್ಯಾನಂದಗೆ ಗುಜರಾತ್‌ ಹೈಕೋರ್ಟ್‌ ಕ್ಲೀನ್‌ಚಿಟ್‌

ಸಾರಾಂಶ

ಇಬ್ಬರು ಯುವತಿಯರನ್ನು ಅಕ್ರಮವಾಗಿ ತನ್ನ ಆಶ್ರಮದಲ್ಲಿ ಇಟ್ಟುಕೊಂಡಿರುವ ಆರೋಪ ಎದುರಿಸುತ್ತಿದ್ದ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನಿಗೆ ಗುಜರಾತ್‌ ಹೈಕೋರ್ಟ್‌ ಕ್ಲೀನ್‌ಚಿಟ್‌ ನೀಡಿದೆ.

ಅಹಮದಾಬಾದ್‌: ಇಬ್ಬರು ಯುವತಿಯರನ್ನು ಅಕ್ರಮವಾಗಿ ತನ್ನ ಆಶ್ರಮದಲ್ಲಿ ಇಟ್ಟುಕೊಂಡಿರುವ ಆರೋಪ ಎದುರಿಸುತ್ತಿದ್ದ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನಿಗೆ ಗುಜರಾತ್‌ ಹೈಕೋರ್ಟ್‌ ಕ್ಲೀನ್‌ಚಿಟ್‌ ನೀಡಿದೆ. ಅಲ್ಲದೆ ಇಬ್ಬರು ಯುವತಿಯರನ್ನು ಆತನ ವಶದಿಂದ ಕರೆತಂದು ಕೋರ್ಟ್‌ ಮುಂದೆ ಹಾಜರುಪಡಿಸುವಂತೆ ಯುವತಿಯರ ತಂದೆಯ ವಾದವನ್ನು ತಿರಸ್ಕರಿಸಿದೆ.

ಏನಿದು ಪ್ರಕರಣ?

ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನಿತ್ಯಾನಂದನ ಅಹಮದಾಬಾದ್‌ ಆಶ್ರಮದಲ್ಲಿ ಅಕ್ರಮವಾಗಿ ಬಂಧಿಸಿಡಲಾಗಿದೆ. ನಿತ್ಯಾನಂದ ದೇಶದಿಂದ ಪರಾರಿಯಾದ ಬಳಿಕ ಅವರನ್ನೂ ಅಪಹರಿಸಿ ಕರೆದೊಯ್ಯಲಾಗಿದೆ ಎಂದು 2019ರಲ್ಲಿ ಜನಾರ್ಧನ ಶರ್ಮಾ ಎಂಬುವವರು ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆ ಹೆಣ್ಣುಮಕ್ಕಳೊಂದಿಗೆ ವಿಡಿಯೋ ಕಾಲ್‌ನಲ್ಲಿ ಕೋರ್ಟ್ ಸಂವಹನ ನಡೆಸಿತ್ತು. ಆಗ ಅವರು ನಾವು ನಮ್ಮಿಷ್ಟದಂತೆ ಆಧ್ಯಾತ್ಮಿಕವಾಗಿ ಸಂತೋಷವಾಗಿ ಜೀವಿಸುತ್ತಿದ್ದೇವೆ. ಯಾರೂ ನಮ್ಮನ್ನು ಬಂಧಿಸಿಲ್ಲ ಎಂದಿದ್ದರು. ಹೀಗಾಗಿ ಇಬ್ಬರೂ ಯುವತಿಯರು ಪ್ರಾಪ್ತ ವಯಸ್ಸಿನವರಾಗಿದ್ದು, ಪ್ರಜ್ಞಾಪೂರ್ವಕ ನಿರ್ಧಾರ ತೆಗೆದುಕೊಳ್ಳಲು ಸಮರ್ಥರಾಗಿದ್ದಾರೆ ಎಂದು ಕೋರ್ಟ್ ಹೇಳಿದೆ.

ನಿತ್ಯಾನಂದನನ್ನು ಹೊಗಳಿ, ಕೈಲಾಸ ದೇಶದೊಂದಿಗೆ ವ್ಯವಹರಿಸಿದ ಹಿರಿಯ ಅಧಿಕಾರಿ ವಜಾ!

ಕೈಲಾಸದಲ್ಲಿ ಕನ್ನಡದ ಜೋಗಯ್ಯ ಹಾಡು, ಡ್ರಮ್ಸ್ ಮೂಲಕ ಮಿಂಚಿದ ನಿತ್ಯಾನಂದ ವಿಡಿಯೋ ವೈರಲ್!
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!