
ಬಿಡದಿ (ಜು. 09): ಕೊರೋನಾ ವೈರಸ್ಗೆ ಔಷಧಿ ಕಂಡುಹಿಡಿಯಲು ಇಡೀ ವಿಶ್ವವೇ ತಲೆ ಕೆಡಿಸಿಕೊಂಡಿದೆ. ಆದರೆ, ತನ್ನದೇ ಆದ ‘ಕೈಲಾಸ ದೇಶ’ದಲ್ಲಿ ನೆಲೆಸಿದ್ದಾನೆ ಎನ್ನಲಾದ ಬಿಡದಿಯ ನಿತ್ಯಾನಂದ ಸ್ವಾಮೀಜಿ, ಕೊರೋನಾ ವೈರಸ್ ನಾಶಕ ಮಂತ್ರ ಕಂಡುಹಿಡಿದಿದ್ದಾನೆ.
ಅಷ್ಟೇ ಅಲ್ಲ ಈ ಮಂತ್ರದಿಂದ ತನ್ನ ಆಶ್ರಮದ ಕೊರೋನಾ ಸೋಂಕಿತರನ್ನು ಸಂಪೂರ್ಣ ಗುಣಪಡಿಸಿದ್ದಾನೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದಿರುವ ನಿತ್ಯಾನಂದ ತಾನು ಹೇಳುವ ಮಂತ್ರದಿಂದ ಕೊರೋನಾ ವೈರಸ್ ಗುಣವಾಗುತ್ತದೆ.
ತಮಾಷೆಯೇ ಅಲ್ಲ! ಹರ್ಬಲ್ ಮೈಸೂರ್ ಪಾಕ್ ತಿಂದರೆ ಕೊರೋನಾ ಬರಲ್ವಂತೆ!
ಒಂದು ವೇಳೆ ಎಲ್ಲಾ ಕಡೆಯೂ ತನ್ನ ಮಂತ್ರವನ್ನು ಪ್ರಯೋಗಿಸಲು ಅನುಮತಿ ನೀಡಿದರೆ ಕೇವಲ ಒಂದು ತಿಂಗಳಿನಲ್ಲಿ ಇಡೀ ವಿಶ್ವವನ್ನು ಕೊರೋನಾದಿಂದ ಮುಕ್ತಗೊಳಿಸುವುದಾಗಿ ನಿತ್ಯಾನಂದ ಹೇಳಿಕೊಂಡಿದ್ದಾನೆ ಎಂದು ಬಿಡದಿ ಮಠದ ಸದಸ್ಯರೊಬ್ಬರು ಸುಳ್ ಸುದ್ದಿ ಮೂಲಗಳಿಗೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ