ಬಿಹಾರದಲ್ಲಿ ಕೇಸರಿ ಪರ್ವ: ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ

Published : Apr 15, 2026, 11:55 AM ISTUpdated : Apr 15, 2026, 12:00 PM IST
BJP's Samrat Choudhary takes oath as new Bihar CM

ಸಾರಾಂಶ

Bihars First BJP CM: ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ನೂತನ ಸಿಎಂಗೆ ಪ್ರಮಾಣವಚನ ಬೋಧಿಸಿದರು.

ಬಿಹಾರದಲ್ಲಿ ನಿತೀಶ್‌ಕುಮಾರ್ ಯುಗಾಂತ್ಯ: ಕೇಸರಿ ಪರ್ವ ಆರಂಭ

ಪಾಟ್ನಾ: ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಇಂದು ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಕೇಸರಿ ಪಕ್ಷದಿಂದ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಗೌರವಕ್ಕೆ ಸಾಮ್ರಾಟ್ ಚೌಧರಿ ಪಾತ್ರರಾಗಿದ್ದಾರೆ.

ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ ಹಸ್ನೈನ್ ಅವರು ಇಲ್ಲಿನ ಲೋಕಭವನದಲ್ಲಿ ಸಾಮ್ರಾಟ್‌ ಚೌಧರಿ ಅವರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಜೆಡಿ (ಯು) ನ ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್ ಅವರು ಕೂಡ ಸಚಿವ ಸಂಪುಟದ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿ, ಜೆಡಿ (ಯು) ಮತ್ತು ಇತರ ಮೂರು ಪಕ್ಷಗಳನ್ನು ಒಳಗೊಂಡಿರುವ ಬಿಹಾರದ ಆಡಳಿತಾರೂಢ ಎನ್‌ಡಿಎಯ ಉನ್ನತ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಚಿರಾಗ್ ಪಾಸ್ವಾನ್, ನಿತೀಶ್ ಕುಮಾರ್ ಮತ್ತು ಎಲ್ಲಾ ಎನ್‌ಡಿಎ ಶಾಸಕರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು ಅಂಬೇಡ್ಕರ್ ಜಯಂತಿ ವೇಳೆ ದುರಂತ: ಕುಡಿದ ಮತ್ತಿನಲ್ಲಿ ಮೆರವಣಿಗೆ ಮೇಲೆ ಕಾರು ಚಾಲನೆ: 7 ವರ್ಷದ ಸಾನ್ವಿ ಸಾವು

ಈಗ ರಾಜ್ಯಸಭಾ ಸಂಸದರಾಗಿರುವ ನಿತೀಶ್ ಕುಮಾರ್ ಮಂಗಳವಾರ ಬಿಹಾರದ ಮುಖ್ಯಮಂತ್ರಿ ಹುದ್ದೆಯನ್ನು ತ್ಯಜಿಸಿದರು, ನಿತೀಶ್ ಕುಮಾರ್ ಸಂಪುಟದಲ್ಲಿ ಈಗ ಮುಕ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಉಪಮುಖ್ಯಮಂತ್ರಿಯಾಗಿದ್ದರು ಮತ್ತು ನಿರ್ಣಾಯಕ ಗೃಹ ಖಾತೆಯನ್ನು ಹೊಂದಿದ್ದರು.

2017 ರಲ್ಲಿ ಬಿಜೆಪಿಗೆ ಸೇರಿದ ಸಾಮ್ರಾಟ್ ಚೌಧರಿ ಅವರನ್ನು ಮಂಗಳವಾರ ನಡೆದ ಸಭೆಯಲ್ಲಿ ಬಿಜೆಪಿ ಮುಖ್ಯಸ್ಥ ನಿತಿನ್ ನಬಿನ್ ಮತ್ತು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಉನ್ನತ ನಾಯಕರ ಸಮ್ಮುಖದಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿತ್ತು. ಶಿವರಾಜ್ ಸಿಂಗ್ ಅವರನ್ನು ಸಂಸದೀಯ ಮಂಡಳಿಯು ಪರಿವರ್ತನೆಗಾಗಿ ಕೇಂದ್ರ ವೀಕ್ಷಕ ಎಂದು ಹೆಸರಿಸಿತ್ತು.

ಇದನ್ನೂ ಓದಿ: ಧಾರವಾಡದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆಗೆ ಕಲ್ಲೆಸೆದು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾರಾಷ್ಟ್ರ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ; ಭಾಷೆ ಬರದಿದ್ರೆ ಪರವಾನಗಿ ರದ್ದು
ಕಾರ್ಪೊರೇಟ್ ಜಿಹಾದ್ ಗುಟ್ಟು ರಟ್ಟಾಗಿದ್ದೇಗೆ? ಪೊಲೀಸರ ಮಾರುವೇಷದ ಕಾರ್ಯಾಚರಣೆ ಹೇಗಿತ್ತು?