ನೆಹರು ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ, ಅಧಿಕೃತವಾಗಿ ಮರುನಾಮಕರಣ!

Published : Aug 15, 2023, 10:18 PM IST
ನೆಹರು ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ, ಅಧಿಕೃತವಾಗಿ ಮರುನಾಮಕರಣ!

ಸಾರಾಂಶ

ನವದೆಹಲಿಯಲ್ಲಿದ್ದ ನೆಹರೂ ಸ್ಮಾರಕ ಮ್ಯೂಸಿಯಂಅನ್ನು ಕೇಂದ್ರ ಸರ್ಕಾರ ಸ್ವಾತಂತ್ರ್ಯೋತ್ಸವ ದಿನದಂದೇ ಪ್ರಧಾನಮಂತ್ರಿ ಮ್ಯೂಸಿಯಂ ಮತ್ತು ಗ್ರಂಥಾಲಯ ಸೊಸೈಟಿಯಾಗಿ ಅಧಿಕೃತವಾಗಿ ಮರು ನಾಮಕರಣ ಮಾಡಿದೆ.  

ನವದೆಹಲಿ (ಆ.15): ಕೇಂದ್ರ ಸರ್ಕಾರ ನವದೆಹಲಿಯಲ್ಲಿರುವ ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು (ಎನ್‌ಎಂಎಂಎಲ್) ಮಂಗಳವಾರ ಅಧಿಕೃತವಾಗಿ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (ಪಿಎಂಎಂಎಲ್) ಎಂದು ಮರು ನಾಮಕರಣ ಮಾಡಿದೆ. ತೀನ್ ಮೂರ್ತಿ ಭವನದ ಆವರಣದಲ್ಲಿ ಪ್ರಧಾನಮಂತ್ರಿ ಸಂಗ್ರಹಾಲಯ ಉದ್ಘಾಟನೆಗೊಂಡು ಸುಮಾರು ಒಂದು ವರ್ಷದ ನಂತರ ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ. 2023ರ ಜೂನ್ 17 ರಂದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯು ನೆಹರೂ ಸ್ಮಾರಕವನ್ನು ಮರುನಾಮಕರಣ ಮಾಡಲು ನಿರ್ಧರಿಸಿತು. ಜವಾಹರಲಾಲ್ ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (NMML) ಭಾರತದ ಮೊದಲ ಪ್ರಧಾನ ಮಂತ್ರಿಯ ಜೀವನ, ಕೊಡುಗೆಗಳು ಮತ್ತು ಸೃಜನಶೀಲ ಉತ್ಪಾದನೆಯನ್ನು ಸಂರಕ್ಷಿಸಲು ಮತ್ತು ಪ್ರದರ್ಶಿಸಲು ಮೀಸಲಾದ ಸೌಲಭ್ಯವಾಗಿದೆ. ಇದು ಗ್ರಂಥಾಲಯ ಮತ್ತು ವಸ್ತುಸಂಗ್ರಹಾಲಯವಾಗಿಯೂ ಕಾರ್ಯನಿರ್ವಹಿಸುತ್ತಿತ್ತು.

ಸಂಸ್ಕೃತಿ ಸಚಿವಾಲಯದ ಸಂವಹನದ ಪ್ರಕಾರ, ತೀನ್ ಮೂರ್ತಿ ಎಸ್ಟೇಟ್‌ನಲ್ಲಿ ಎಲ್ಲಾ ಪ್ರಧಾನ ಮಂತ್ರಿಗಳನ್ನು ಗೌರವಿಸುವ ವಸ್ತುಸಂಗ್ರಹಾಲಯದ ಸ್ಥಾಪನೆಯನ್ನು ಆರಂಭದಲ್ಲಿ NMML ನ ಕಾರ್ಯಕಾರಿ ಮಂಡಳಿಯು 2016 ರಲ್ಲಿ ಅನುಮೋದಿಸಿತ್ತು. ಈ ಯೋಜನೆಯನ್ನು ಎನ್‌ಎಂಎಂಎಲ್‌ ಕಾರ್ಯಕಾರಿ ಮಂಡಳಿ, ನವೆಂಬರ್ 2016 ರಲ್ಲಿ ನಡೆದ ಅದರ 162 ನೇ ಸಭೆಯಲ್ಲಿ ಅನುಮೋದಿಸಿತು. ಪ್ರಧಾನಮಂತ್ರಿ ಸಂಗ್ರಹಾಲಯವನ್ನು 2022ರ ಏಪ್ರಿಲ್ 21 ರಂದು ಸಾರ್ವಜನಿಕರಿಗೆ ಮುಕ್ತವಾಗಿಸಲಾಯಿತು ಉದ್ಘಾಟನೆಯ ಸಮಯದಲ್ಲಿ, ಸರ್ಕಾರದಿಂದ ಆಹ್ವಾನವನ್ನು ಪಡೆದಿದ್ದರೂ, ನೆಹರೂ ಹಾಗೂ ಗಾಂಧಿ ಕುಟುಂಬದ ಯಾರೊಬ್ಬರೂ ಕಾರ್ಯಕ್ರಮಕ್ಕೆ ಬಂದಿರಲಿಲ್ಲ.  ಪಂಡಿತ್ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಸೇರಿದಂತೆ ನೆಹರು-ಗಾಂಧಿ ಕುಟುಂಬದ ಮೂವರು ಸದಸ್ಯರು ದೇಶದ ಪ್ರಧಾನ ಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ಕುರಿತು: ಪ್ರಧಾನ ಮಂತ್ರಿಗಳ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯು ಭಾರತೀಯ ಸ್ವಾತಂತ್ರ್ಯ ಚಳುವಳಿಯ ಇತಿಹಾಸವನ್ನು ಸಂರಕ್ಷಿಸುವ ಮತ್ತು ಪುನರ್ನಿರ್ಮಿಸುವ ಗುರಿಯನ್ನು ಹೊಂದಿದೆ. ತೀನ್ ಮೂರ್ತಿ ಹೌಸ್ ಕಾಂಪ್ಲೆಕ್ಸ್‌ನೊಳಗೆ ನೆಲೆಗೊಂಡಿದೆ, ಇದು ಭಾರತೀಯ ಸಂಸ್ಕೃತಿ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿದೆ ಮತ್ತು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ಮರಣದ ನಂತರ 1964 ರಲ್ಲಿ ಇದನ್ನು ಸ್ಥಾಪನೆ ಮಾಡಲಾಗಿತ್ತು.

ನೆಹರೂ ಮೆಮೋರಿಯಲ್ ಮ್ಯೂಸಿಯಂ ಮರುನಾಮಕರಣ; ಇದು ಸಣ್ಣತನ: ಕಾಂಗ್ರೆಸ್‌ ಟೀಕೆ

ಇದು ಆಧುನಿಕ ಮತ್ತು ಸಮಕಾಲೀನ ಇತಿಹಾಸದ ಮೇಲೆ ಶೈಕ್ಷಣಿಕ ಸಂಶೋಧನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ತನ್ನ ಆರ್ಕೈವಲ್ ಮತ್ತು ಸಂಶೋಧನಾ ಚಟುವಟಿಕೆಗಳ ಜೊತೆಗೆ, ಪಿಎಂಎಂಎಲ್‌ ಭಾರತದ ಇತಿಹಾಸ, ಸಂಸ್ಕೃತಿ ಮತ್ತು ಅದರ ನಾಯಕರ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರದರ್ಶನಗಳು, ಸೆಮಿನಾರ್‌ಗಳು, ಉಪನ್ಯಾಸಗಳು ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸುತ್ತದೆ.

ಐತಿಹಾಸಿಕ ಸೆಂಗೋಲ್‌ಅನ್ನು ನೆಹರು ಅವರ 'ಚಿನ್ನದ ಊರುಗೋಲು' ಮಾಡಿದ್ಯಾರು? ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ!


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ