ಲಾಕ್‌ಡೌನ್ ವೇಳೆ ನೌಕರರಿಗೆ ವೇತನ ಪಾವತಿಸದವರ ವಿರುದ್ಧ ಕ್ರಮ ಇಲ್ಲ; ಸುಪ್ರೀಂ ಕೋರ್ಟ್!

Suvarna News   | Asianet News
Published : Jun 12, 2020, 06:05 PM IST
ಲಾಕ್‌ಡೌನ್ ವೇಳೆ ನೌಕರರಿಗೆ ವೇತನ ಪಾವತಿಸದವರ ವಿರುದ್ಧ ಕ್ರಮ ಇಲ್ಲ; ಸುಪ್ರೀಂ ಕೋರ್ಟ್!

ಸಾರಾಂಶ

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್‌ನಿಂದ ಜನರ ಬದುಕು ದುಸ್ತರವಾಗಿದೆ. ವೇತನ ಕಡಿತ, ಉದ್ಯೋಗ ಕಡಿತ ಸೇರಿದಂತೆ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಇದೀಗ ನೌಕರರಿಗೆ ವೇತನ ನೀಡಿದ ಉದ್ಯೋಗದಾತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ. 

ನವದೆಹಲಿ(ಜೂ.12):  ಕೊರೋನಾ ವೈರಸ್ ‌ಕಾರಣ ಕೇಂದ್ರ ಸರ್ಕಾರ ಲಾಕ್‌ಡೌನ್ ಮಾಡಿ ಸೋಂಕು ತೀವ್ರವಾಗಿ ಹರಡದಂತೆ ಕ್ರಮ ಕೈಗೊಂಡಿತು. ಲಾಕ್‌ಡೌನ್ ಘೋಷಣೆ ವೇಳೆ ಪ್ರಧಾನಿ ಮೋದಿ, ವೇತನ ಕಡಿತ ಹಾಗೂ ಉದ್ಯೋಗ ಕಡಿತ ಮಾಡದಂತೆ ಮನವಿ ಮಾಡಿದ್ದರು. ಬಳಿಕ ಕೇಂದ್ರ ಗೃಹ ಇಲಾಖೆ, ಖಾಸಗಿ ಉದ್ಯೋಗದಾತರಿಗೆ ನೌಕರರ ಸಂಪೂರ್ಣ ವೇತನ ನೀಡುವಂತೆ ಸೂಚಿಸಿತ್ತು. ಇದೀಗ ವೇತನ ನೀಡಿದ ಖಾಸಗಿ ಉದ್ಯೋಗದಾತರ ವಿರುದ್ಧ ಜುಲೈ ಅಂತ್ಯದ ವರೆಗೆ ಯಾವುದೇ ಕ್ರಮವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಮೀಸಲಾತಿ’ ಮೂಲಭೂತ ಹಕ್ಕಲ್ಲ'; ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ

ದೇಶದ ಸರ್ವೋಚ್ಚ ನ್ಯಾಯಾಲಯ ಉದ್ಯೋಗದಾತರಿಗೆ ಕೊಂಚ ರಿಲೀಫ್ ನೀಡಿದೆ. ನೌಕರರ ವೇತನ ಪಾವತಿ ಕುರಿತು ನೌಕರರು ಮತ್ತು ಉದ್ಯೋಗದಾತರ ನಡುವೆ ಮಾತುಕತೆ ನಡೆಸಲು ರಾಜ್ಯಗಳು ಮುಂದಾಗಬೇಕು. ಇನ್ನು ಈ ಕುರಿತ ವರದಿಗಳನ್ನು ಸಂಬಂಧಪಟ್ಟ ಕಾರ್ಮಿಕ ಆಯುಕ್ತರಿಗೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

ವಲಸಿಗ ಕಾರ್ಮಿಕರ ನೆರವಿಗೆ ಧಾವಿಸಲು ರಾಜ್ಯಗಳಿಗೆ ಗಡುವು!.

ಲಾಕ್ ಡೌನ್ ಸಮಯದಲ್ಲಿ ನೌಕರರಿಗೆ ಪೂರ್ಣ ವೇತನವನ್ನು ಕಡ್ಡಾಯವಾಗಿ ಪಾವತಿಸಲು ಕೇಂದ್ರ ಗೃಹ ಇಲಾಖೆ ಸೂಚಿಸಿತ್ತು. ಮಾರ್ಚ್ 29 ರಂದು ಅಧಿಸೂಚನೆಯನ್ನು ಹೊರಡಿಸಿತ್ತು.  ಮಾರ್ಚ್ 29 ರ ಅಧಿಸೂಚನೆಯ ಕಾನೂನುಬದ್ಧತೆಯ ಕುರಿತು 4 ವಾರಗಳಲ್ಲಿ ಕೇಂದ್ರ ಸರ್ಕಾರ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. 

ನೌಕರರು ಹಾಗೂ ಉದ್ಯೋಗಿಗಳು ಒಂದಕ್ಕೊಂದು ಹೊಂದಾಣಿಕೆಯಿಂದ ಇರಬೇಕು. ಇಲ್ಲಿ ಕಂಪನಿ ಅಥವಾ ನೌಕರರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಅಥವಾ ಈ ಕುರಿತು ತಕರಾರು ಉತ್ತಮವಲ್ಲ. ಹೀಗಾಗಿ 50 ದಿನಗಳ ಒಳಗೆ ವೇತನ ಕುರಿತು ತಕರಾರಿಗೆ ತಾರ್ಕಿಕ ಅಂತ್ಯ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?