
ನವದೆಹಲಿ(ಆ.21): 2024ರ ಲೋಕಸಭಾ ಚುನಾವಣೆಗೆ ಎಲ್ಲಾ ವಿಪಕ್ಷಗಳು ಒಂದಾಗಿ ವ್ಯವಸ್ಥಿತ ಕಾರ್ಯತಂತ್ರ ರೂಪಿಸಬೇಕಿದೆ ಎಂದು ವಿಪಕ್ಷಗಳ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆ ಕೊಟ್ಟಿದ್ದಾರೆ.
17 ವಿಪಕ್ಷಗಳ ನಾಯಕರ ಜೊತೆ ಶುಕ್ರವಾರ ವಚ್ರ್ಯುವಲ್ ಸಭೆ ನಡೆಸಿದ ಸೋನಿಯಾ, ‘ಸಂವಿಧಾನದ ತತ್ವಗಳಲ್ಲಿ ನಂಬಿಕೆ ಇರುವ ಸರ್ಕಾರವನ್ನು ದೇಶಕ್ಕೆ ನೀಡುವುದು ನಮ್ಮ ಗುರಿ. ನಾವೆಲ್ಲಾ ಒಟ್ಟಿಗೆ ಸೇರಿ ಈ ಸವಾಲನ್ನು ಗೆಲ್ಲಬಹುದು’ ಎಂದು ಹೇಳಿದರು.
ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, ‘ನಮ್ಮ ಮುಂದಿನ ನಾಯಕರಾರು ಎಂಬುದನ್ನು ಮರೆತು, ನಮ್ಮ ವೈಯಕ್ತಿಕ ಹಿತಾಸಕ್ತಿಗಳನ್ನೂ ಬದಿಗಿಟ್ಟು ಪ್ರತಿಯೊಂದು ವಿಪಕ್ಷವೂ ಒಟ್ಟಾಗಿ 2024ರಲ್ಲಿ ಬಿಜೆಪಿಯನ್ನು ಎದುರಿಸಬೇಕು. ಜನರೇ ನಾಯಕರು. ವಿಪಕ್ಷಗಳ ಒಂದು ಗುಂಪು ರಚಿಸಿ ಒಟ್ಟಾಗಿ ಕೆಲಸ ಮಾಡೋಣ’ ಎಂದು ಕರೆ ನೀಡಿದರು.
ಬಳಿಕ ಎನ್ಸಿಪಿ ಪರಮೋಚ್ಚ ನಾಯಕ ಶರದ್ ಪವಾರ್, ಯಾರಿಗೆ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಸಿದ್ಧಾಂತದಲ್ಲಿ ನಂಬಿಕೆ ಇದೆಯೋ ಅವರೆಲ್ಲಾ ಒಟ್ಟಾಗಿ ಸೇರಿ ಪ್ರಜಾಪ್ರಭುತ್ವ ಸಿದ್ಧಾಂತಗಳನ್ನು ಉಳಿಸುವ ಕೆಲಸದಲ್ಲಿ ಕೈಜೋಡಿಸಬೇಕು ಎಂದು ಟ್ವೀಟ್ ಮೂಲಕ ಕರೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ