
ನವದೆಹಲಿ(ಏ. 24) 'ಕೊರೋನಾ ಲಾಕ್ ಡೌನ್ ಜಾರಿಯಲ್ಲಿದ್ದು ಅಜಾನ್ ಬ್ಯಾನ್ ಮಾಡಲಾಗಿದೆ' ಇದೇ ವಿಚಾರಕ್ಕೆ ಸಂಬಂಧಿಸಿದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಪೊಲೀಸರೊಂದಿಗೆ ನಡೆದ ಮಾತುಕತೆಯ ವಿಡಿಯೋ.
ಏಪ್ರಿಲ್ 25 ರಂದು ಪವಿತ್ರ ರಂಜಾನ್ ತಿಂಗಳು ಆರಂಭವಾಗಲಿದೆ. ಪೇದೆಯೊಬ್ಬರು ಅಜಾನ್ ಬ್ಯಾನ್ ಮಾಡಲಾಗಿದ ಎಂದು ಹೇಳಿದ್ದು ದೊಡ್ಡ ಸಮಾಚಾರವಾಗಿದೆ. ಅಜಾನ್ ನಿಷೇಧ ಮಾಡಲು ಹಿರಿಯ ಪೊಲೀಸರು ತಿಳಿಸಿದ್ದಾರೆ ಎಂದಾಗ ದೆಹಲಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಎಲ್ಲಿದೆ ಆದೇಶದ ಕಾಪಿ ಎಂದು ಕೇಳಿದ್ದಾರೆ. ಅಜಾನ್ ಮಾಡುವುದರಿಂದ ಕೊರೋನಾ ಹರಡುತ್ತದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಡೆಲೆವರಿ ಬಾಯ್ ಮುಸ್ಲಿಂ ಎಂಬ ಕಾರಣಕ್ಕೆ ಆಹಾರ ತಿರಸ್ಕರಿಸಿದ
ಈ ಬಗ್ಗೆ ಸ್ಪಷ್ಟನೆ ನೀಡಿರುವ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ, ಜನರಿಗೆ ಲಾಕ್ ಡೌನ್ ಆದೇಶ ಪಾಲನೆ ಮಾಡಲು ತಿಳಿಸಲಾಗಿದೆ. ಯಾರು ಮನೆಯಿಂದ ಹೊರಬರಬಾರದು. ಆದರೆ ಅಜಾನ್ ಮೇಲೆ ನಿಷೇಧ ಹೇರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಘಟನೆ ಬಗ್ಗೆ ತನಿಖೆ ನಡೆಸಲು ದೆಹಲಿ ಪೊಲೀಸರು ನಿರ್ಧಾರ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ