2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನೌಷಧ ಬೇಡ : ಕೇಂದ್ರ

Kannadaprabha News   | Kannada Prabha
Published : Oct 04, 2025, 04:00 AM IST
Cough Syrup Tragedy

ಸಾರಾಂಶ

ಅತ್ತ ಕೇಂದ್ರ ಸರ್ಕಾರ ಕಾಫ್‌ಸಿರಪ್‌ನಿಂದ ಮಕ್ಕಳ ಸಾವು ಸಂಭವಿಸಿದೆ ಎಂಬ ಆರೋಪವನ್ನು ತಿರಸ್ಕರಿಸಿದೆ. ವೈದ್ಯಕೀಯ ಮತ್ತು ವೈಜ್ಞಾನಿಕ ಪರೀಕ್ಷೆಯಲ್ಲಿ ಸಿರಪ್‌ನಲ್ಲಿ ಯಾವುದೇ ವಿಷಪೂರಿತ ಅಂಶಗಳು ಪತ್ತೆಯಾಗಿಲ್ಲ. ಘಟನೆ ಕುರಿತು ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.

ನವದೆಹಲಿ : ಕೇಂದ್ರ ಸರ್ಕಾರ ಕಾಫ್‌ಸಿರಪ್‌ನಿಂದ ಮಕ್ಕಳ ಸಾವು ಸಂಭವಿಸಿದೆ ಎಂಬ ಆರೋಪವನ್ನು ತಿರಸ್ಕರಿಸಿದೆ. ವೈದ್ಯಕೀಯ ಮತ್ತು ವೈಜ್ಞಾನಿಕ ಪರೀಕ್ಷೆಯಲ್ಲಿ ಸಿರಪ್‌ನಲ್ಲಿ ಯಾವುದೇ ವಿಷಪೂರಿತ ಅಂಶಗಳು ಪತ್ತೆಯಾಗಿಲ್ಲ. ಘಟನೆ ಕುರಿತು ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದರ ಜತೆಗೆ 2 ವರ್ಷದ ಒಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡಬಾರದೆಂದು ಆದೇಶ ಹೊರಡಿಸಿದೆ. ಜೊತೆಗೆ ಕೆಮ್ಮಿನ ಔಷಧದ ಪರಿಣಾಮ ಎಂಬ ಯಾವುದೇ ಪ್ರಕರಣ ಬಂದಲ್ಲಿ ಖಾಸಗಿ ವೈದ್ಯರು ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಬೇಕು ಎಂದು ಆದೇಶಿಸಿದೆ.

11 ಮಕ್ಕಳು ಸಾವನ್ನಪ್ಪಿದ ಘಟನೆ

 ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚೆಗೆ 11 ಮಕ್ಕಳು ಸಾವನ್ನಪ್ಪಿದ ಘಟನೆಗೆ ಕೆಮ್ಮಿನ ಔಷಧ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಔಷಧದ ಮಾದರಿಯನ್ನು ಪರೀಕ್ಷಿಸಿ ಕ್ಲೀನ್‌ಚಿಟ್‌ ನೀಡಿದೆ. ಮಕ್ಕಳ ಸಾವಿಗೆ ಔಷಧ ಕಾರಣವಲ್ಲ ಎಂದು ಷ್ಟಪಡಿಸಿದೆ. ಆದರೆ ಮಕ್ಕಳ ಸಾವಿಗೆ ಏನು ಕಾರಣ ಎಂಬ ಅಂಶ ಇನ್ನು ಪತ್ತೆಯಾಗಿಲ್ಲ.

ಮಧ್ಯಪ್ರದೇಶದಲ್ಲಿ 9 ಮಕ್ಕಳು ಸಾವು:

ಕಳೆದ 15 ದಿನದಲ್ಲಿ ಮಧ್ಯ ಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ 9 ಮಕ್ಕಳು ಮೃತಪಟ್ಟಿವೆ. ಈ ಮಕ್ಕಳ ಸಾವಿಗೆ ಕೋಲ್ಡ್ರಿಫ್‌ ಮತ್ತು ನೆಕ್ಸ್ಟ್ರೋ-ಡಿಎಸ್‌ ಕೆಮ್ಮಿನ ಔಷಧ ಸೇವನೆಯಿಂದ ಉಂಟಾದ ಕಿಡ್ನಿ ವೈಫಲ್ಯ ಕಾರಣ ಎಂದು ಪೋಷಕರು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಮಧ್ಯಪ್ರದೇಶದ ಆರೋಗ್ಯ ಇಲಾಖೆಯು ಔಷಧದ ಪರೀಕ್ಷೆ ವೇಳೆ ಯಾವುದೇ ವಿಷಪೂರಿತ ಅಂಶ ಪತ್ತೆಯಾಗಿಲ್ಲ. ಔಷಧದ ನಿಷೇಧದ ಪ್ರಶ್ನೆಯೇ ಇಲ್ಲ. ಮಕ್ಕಳ ಸಾವಿಗೆ ಸಮಿತಿ ರಚಿಸಲಾಗಿದ್ದು, ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.

ರಾಜಸ್ಥಾನದಲ್ಲಿ 2 ಮಕ್ಕಳ ಸಾವು:

ರಾಜಸ್ಥಾನದ ಸಿಕಾರ್ ಮತ್ತು ಭರತ್‌ಪುರ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವಾಗಿದ್ದು, ಇಲ್ಲಿಯೂ ಸಹ ಔಷಧವೇ ಕಾರಣ ಎಂಬ ಆರೋಪವಿದೆ. ಆದರೆ ಅಲ್ಲಿನ ಸರ್ಕಾರವು ವೈದ್ಯರಿಗೆ ಕ್ಲೀನ್‌ಚಿಟ್‌ ನೀಡಿದೆ. ರಾಜಸ್ಥಾನ ಔಷಧ ನಿಯಂತ್ರಣ ಮಂಡಳಿಯು ಔಷಧಗಳ ಪೂರೈಕೆಗೆ ತಾತ್ಕಾಲಿಕ ತಡೆ ನೀಡಿದೆ. ಎರಡೂ ಪ್ರಕರಣಗಳಲ್ಲಿಯೂ ಪೋಷಕರು ವೈದ್ಯರ ಸೂಚನೆಯಿಲ್ಲದೆಯೇ ಔಷಧ ನೀಡಿದ್ದೇ ಕಾರಣ ಎಂದು ಆರೋಗ್ಯ ಇಲಾಖೆ ಹೇಳಿದೆ.

ತಮಿಳ್ನಾಡಿನಲ್ಲಿ ಔಷಧ ಬ್ಯಾನ್‌

ಮಕ್ಕಳ ಸಾವಿನ ಬೆನ್ನಲ್ಲೇ ತಮಿಳುನಾಡು ಸರ್ಕರ ಕೋಲ್ಡ್ರಿಫ್‌ ಸಿರಪ್‌ ಮೇಲೆ ನಿಷೇಧ ಹೇರಿದೆ. ತಮಿಳುನಾಡು ಔಷಧ ನಿಯಂತ್ರಣಾ ಮಂಡಳಿಯು ಈ ಕ್ರಮ ಕೈಗೊಂಡಿದೆ. ಘಟನೆ ಕುರಿತು ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್