ತೌಕ್ಟೆ ಚಂಡಮಾರುತ ಹಿನ್ನೆಲೆ ಮುಂಬೈನಲ್ಲಿ ಆರೆಂಜ್ ಅಲರ್ಟ್, ಲಸಿಕೆ ಅಭಿಯಾನಕ್ಕೆ ಬ್ರೇಕ್!

Published : May 16, 2021, 07:32 PM ISTUpdated : May 16, 2021, 07:45 PM IST
ತೌಕ್ಟೆ ಚಂಡಮಾರುತ ಹಿನ್ನೆಲೆ ಮುಂಬೈನಲ್ಲಿ ಆರೆಂಜ್ ಅಲರ್ಟ್, ಲಸಿಕೆ ಅಭಿಯಾನಕ್ಕೆ ಬ್ರೇಕ್!

ಸಾರಾಂಶ

ಮುಂಬೈಗೆ ಅಪ್ಪಳಿಸಲಿದೆ ತೌಕ್ಟೆ ಚಂಡಮಾರುತ  ಮುಂಬೈನಲ್ಲಿ ಮುನ್ನಚ್ಚೆರಿಕಾ ಕ್ರಮವಾಗಿ ಆರೇಂಜ್ ಅಲರ್ಟ್ ಘೋಷಣೆ ಲಸಿಕೆ ಅಭಿಯಾನಕ್ಕೂ ಬ್ರೇಕ್ ಹಾಕಿದ ಸರ್ಕಾರ

ಮುಂಬೈ(ಮೇ.16): ಕೊರೋನಾ ವೈರಸ್ ಮಹಾಮಾರಿ ನಡುವೆ ಇದೀಗ ತೌಕ್ಟೆ ಚಂಡಮಾರುತ ಆತಂಕ ಭಾರತದ ಕರಾವಳಿ ಭಾಗದಲ್ಲಿ ಅವಂತಾರ ಸೃಷ್ಟಿಸಿದೆ. ಕೇರಳ, ಕರ್ನಾಟಕದಲ್ಲಿ ಈಗಾಗಲೇ ತೌಕ್ಟೆ ಚಂಡಮಾರುತ ಅನಾಹುತ ಸೃಷ್ಟಿಸಿದೆ. ನಾಳೆ(ಮೇ.17) ಮುಂಬೈಗೆ ತೌಕ್ಟೆ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ ಮುಂಬೈನಲ್ಲಿ ನಾಳೆ ಲಸಿಕೆ ಅಭಿಯಾನಕ್ಕೆ ಬ್ರೇಕ್ ಹಾಕಲಾಗಿದೆ.

ಭಾರೀ ಮಳೆ ಸೂಚನೆ ಕೊಟ್ಟ ಹವಾಮಾನ ಇಲಾಖೆ, ಈ ಜಿಲ್ಲೆಗಳಲ್ಲಿ ಅಲರ್ಟ್

ಈ ಕುರಿತು ಮುಂಬೈ ಮಹಾನರಗರಿ ಪಾಲಿಕೆ ಸ್ಪಷ್ಟಪಡಿಸಿದೆ. ತೌಕ್ಟೆ ಚಂಡ ಮಾರುತದಿಂದ ದಕ್ಷಿಣ ಭಾರತದಲ್ಲಿ ಹಲವು ನಷ್ಟ ಸಂಭವಿಸಿದೆ. ಸೋಮವಾರ ಮುಂಬೈಗೆ ಅಪ್ಪಳಿಸಲಿರುವ ಕಾರಣ ಮುನ್ನಚ್ಚೆರಿಕಾ ಕ್ರಮವಾಗಿ ಲಸಿಕೆ ಅಭಿಯಾನವನ್ನು ಒಂದು ದಿನ ಸ್ಥಗಿತಗೊಳಿಸುತ್ತಿದ್ದೇವೆ ಎಂದಿದೆ. ಮಂಗಳವಾರ, ಬುಧವಾರ ಹಾಗೂ ಗುರವಾರ ಎಂದಿನಂತೆ ಲಸಿಕೆ ನೀಡಲಾಗುವುದು ಎಂದು ಪಾಲಿಕೆ ಹೇಳಿದೆ.

ಕೇರಳ, ಕರ್ನಾಟಕದ ಸೇರಿ ಹಲವೆಡೆ ತೌಕ್ಟೆ ತೀವ್ರ ಪರಿಣಾಮ: 100 ರಿಲೀಫ್ ತಂಡ ರೆಡಿ  

ಮುಂಬೈನ ಸಮುದ್ರ ತೀರದಲ್ಲಿನ ಕೋವಿಡ್ ಕೇರ್ ಸೆಂಟರ್‌ನಲ್ಲಿದ್ದ 580ಕ್ಕೂ ಹೆಚ್ಚಿನ ಸೋಂಕಿತರನ್ನು ಮುನ್ನೆಚ್ಚೆರಿಕಾ ಕ್ರಮವಾಗಿ ಬೇರೆಡೆ ಸ್ಥಳಾಂತರಿಸಲಾಗಿದೆ.  ಮೇ.17ರಂದು ಗುಜರಾತ್‌ನ ಪೋರಬಂದರ್‌ಗೆ ಚಂಡಮಾರುತ ಪ್ರಬಲವಾಗಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನು ಭವನಗರ ಜಿಲ್ಲೆಯ ಮಹುವಾ ಸಮುದ್ರ ತೀರಕ್ಕೆ ಮಾರ್ಚ್ 18 ರಂದು ಚಂಡ ಮಾರುತ ಅಪ್ಪಳಿಸಲಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!