ದೇಶಾದ್ಯಂತ NRC ಜಾರಿ: ಇನ್ನೂ ಡಿಸೈಡ್ ಮಾಡಿಲ್ಲ ಎಂದ ಕೇಂದ್ರ!

Published : Feb 04, 2020, 12:22 PM ISTUpdated : Feb 04, 2020, 12:42 PM IST
ದೇಶಾದ್ಯಂತ NRC ಜಾರಿ: ಇನ್ನೂ ಡಿಸೈಡ್ ಮಾಡಿಲ್ಲ ಎಂದ ಕೇಂದ್ರ!

ಸಾರಾಂಶ

NRC ದೇಶವ್ಯಾಪಿ ಜಾರಿಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ| ಮೊದಲ ಬಾರಿ ಅಧಿಕೃತ ಹೇಳಿಕೆ ನೀಡಿದ ಗೃಹ ಸಚಿವಾಲಯ| ಸಂಸತ್ತಿನಲ್ಲಿ ಕೇಳಲಾಗಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವ

ನವದೆಹಲಿ[ಫೆ.04]: ದೇಶದ ನಾನಾ ಭಾಗಗಳಲ್ಲಿ ಪೌರತ್ವ ಕಾಯ್ದೆ ಹಾಗೂ NRC ವಿರುದ್ಧ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಗೃಹ ಸಚಿವಾಲಯವು ಸದ್ಯ NRC ಜಾರಿಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಅಧಿಕೃತವಾಗಿ ಸಂಸತ್ತಿನಲ್ಲಿ ಇಂತಹ ಹೇಳಿಕೆ ನೀಡಿರುವುದು ಇದೇ ಮೊದಲು . ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ಮಂಗಳವಾರ ಲೋಕಸಭೆಯಲ್ಲಿ ಲಿಖಿತ ರೂಪದಲ್ಲಿ ಈ ಉತ್ತರ ನೀಡುತ್ತಾ 'ಈವರೆಗೆ ದೇಶವ್ಯಾಪಿ NRC ಜಾರಿಗೊಳಿಸುವ ವಿಚಾರವಾಗಿ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ' ಎಂದಿದ್ದಾರೆ.

ಏನಿದು ಪೌರತ್ವ ತಿದ್ದುಪಡಿ ಕಾಯ್ದೆ?

ಭಾರತದ ನೆರೆಯ ರಾಷ್ಟ್ರಗಳಿಂದ ಅಂದರೆ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳ ಅನುಭವಿಸಿ ಭಾರತಕ್ಕೆ ವಲಸೆ ಬಂದಿರುವ (ಸಕ್ರಮವಾಗಿ ಅಥವಾ ಅಕ್ರಮವಾಗಿ) 6 ಧಾರ್ಮಿಕ ಅಲ್ಪಸಂಖ್ಯಾತ (ಹಿಂದು, ಕ್ರಿಶ್ಚಿಯನ್‌, ಸಿಖ್‌, ಪಾರ್ಸಿ, ಜೈನ ಮತ್ತು ಬೌದ್ಧ) ಸಮುದಾಯಗಳಿಗೆ ಭಾರತದ ಪೌರತ್ವ ನೀಡುವ ಮಸೂದೆಯೇ ಪೌರತ್ವ ತಿದ್ದುಪಡಿ ಕಾಯ್ದೆ-2019. ಹಳೆಯ ಕಾಯ್ದೆಯಲ್ಲಿ ವಿದೇಶಿಗರು ಕಾನೂನುಬದ್ಧವಾಗಿ ಭಾರತಕ್ಕೆ ವಲಸೆ ಬಂದು ಇಲ್ಲಿ 12 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷ ನೆಲೆಸಿದ್ದರೆ ಪೌರತ್ವ ಪಡೆಯಲು ಅರ್ಹರಾಗಿದ್ದರು.

ಆದರೆ ಹೊಸ ತಿದ್ದುಪಡಿ ಕಾಯ್ದೆಯಲ್ಲಿ ಭಾರತಕ್ಕೆ ಮೇಲಿನ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿದ್ದರೂ ಇಲ್ಲಿ 6 ವರ್ಷ ವಾಸವಿದ್ದರೆ ಆರು ಧರ್ಮೀಯರು ಭಾರತದ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ.

ತಿದ್ದುಪಡಿಯನುಸಾರ 2014ರ ಡಿಸೆಂಬರ್‌ 31ರ ಒಳಗೆ ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ನಿರಾಶ್ರಿತರು ಭಾರತದ ಪೌರತ್ವ ಪಡೆಯಲು ಅರ್ಹರು. ಯಾವುದೇ ಸೂಕ್ತ ದಾಖಲೆ ಇಲ್ಲದಿದ್ದರೂ ಅವರು ಅರ್ಜಿ ಸಲ್ಲಿಸಬಹುದು. ಆದರೆ ಈ ರಾಷ್ಟ್ರಗಳಿಂದ ವಲಸೆ ಬಂದ ಮುಸ್ಲಿಮರಿಗೆ ಈ ಕಾಯ್ದೆಯು ಪೌರತ್ವ ನೀಡುವುದಿಲ್ಲ.

ಯಾರು ಅಕ್ರಮ ವಲಸಿಗರು?

ಪೌರತ್ವ ಕಾಯ್ದೆ-1955, ವಿದೇಶಿಗರ ಕಾಯ್ದೆ ಹಾಗೂ ಪಾಸ್‌ಪೋರ್ಟ್‌ ಕಾಯ್ದೆಗಳು ಭಾರತಕ್ಕೆ ಅಕ್ರಮವಾಗಿ ವಲಸೆ ಬರುವವರಿಗೆ ಪೌರತ್ವ ನೀಡುವಂತಿಲ್ಲ ಎಂದು ನಿರ್ಬಂಧಿಸಿವೆ. ಭಾರತದ ಸಂವಿಧಾನದ ಪ್ರಕಾರ ಕಾನೂನುಬದ್ಧ ಪಾಸ್‌ಪೋರ್ಟ್‌ ಅಥವಾ ಸೂಕ್ತ ದಾಖಲೆ ಇಲ್ಲದೆ ಭಾರತಕ್ಕೆ ನುಸುಳಿದವರು ಅಕ್ರಮ ವಲಸಿಗರು. ಹೀಗೆ ವಲಸೆ ಬಂದ 3 ದೇಶಗಳ 6 ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಸ್ತಾಪ ಹೊಸ ತಿದ್ದುಪಡಿಯಲ್ಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?
India Latest News Live: ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!