ಶಬರಿಮಲೆ ಪ್ರವೇಶಕ್ಕೆ ಕಂಡೀಶನ್ : ಯಾರಿಗಿಲ್ಲ ಪ್ರವೇಶ

Kannadaprabha News   | Asianet News
Published : Oct 16, 2020, 09:37 AM IST
ಶಬರಿಮಲೆ ಪ್ರವೇಶಕ್ಕೆ ಕಂಡೀಶನ್ : ಯಾರಿಗಿಲ್ಲ ಪ್ರವೇಶ

ಸಾರಾಂಶ

 ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದರ್ಶನದ ವಾರ್ಷಿಕ ಯಾತ್ರೆಯಿಂದ ಹಿರಿಯ ನಾಗರಿಕರು ಮತ್ತು 10 ವರ್ಷದ ಒಳಗಿನ ಮಕ್ಕಳು ಅವಕಾಶ ವಂಚಿತರಾಗುವ ಸಾಧ್ಯತೆ ಇದೆ

ಕೊಚ್ಚಿ (ಅ.16): ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದರ್ಶನದ ವಾರ್ಷಿಕ ಯಾತ್ರೆಯಿಂದ ಹಿರಿಯ ನಾಗರಿಕರು ಮತ್ತು 10 ವರ್ಷದ ಒಳಗಿನ ಮಕ್ಕಳು ಅವಕಾಶ ವಂಚಿತರಾಗುವ ಸಾಧ್ಯತೆ ದಟ್ಟವಾಗಿದೆ. ನ.16ರಿಂದ ಆರಂಭವಾಗಲಿರುವ ವಾರ್ಷಿಕ ಯಾತ್ರೆ ವೇಳೆ ಕೊರೋನಾ ನಿಯಂತ್ರಣಕ್ಕೆ ಅಗತ್ಯದ ಕ್ರಮಗಳ ವರದಿಯನ್ನು ಶಬರಿಮಲೆಯ ವಿಶೇಷ ಆಯುಕ್ತ ಎಂ. ಮನೋಜ್‌ ಅವರು ಕೇರಳ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. 

ಅದರಲ್ಲಿ ಕೊರೋನಾದಿಂದ ಹೆಚ್ಚು ಬಾಧೆಗೆ ಗುರಿಯಾಗುವ ಭೀತಿ ಇರುವ ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ಅವಕಾಶ ಕಲ್ಪಿಸದೇ ಇದ್ದರೆ ಸೂಕ್ತ. ಅಲ್ಲದೆ, ದೇವಸ್ಥಾನ ಸುತ್ತಮುತ್ತ ಉದ್ದದ ಸಾಲುಗಳು ಏರ್ಪಡದಂತೆ ನೋಡಿಕೊಳ್ಳಬೇಕು ಹಾಗೂ ಕೊರೋನಾ ನೆಗೆಟಿವ್‌ ವರದಿ ಹೊಂದಿದವರಿಗೆ ಮಾತ್ರವೇ ಅಯ್ಯಪ್ಪನ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು.

ಕೊರೋನಾತಂಕ ನಡುವೆ ತೆರೆಯಲಿದೆ ಅಯ್ಯಪ್ಪ ಸ್ವಾಮಿ ದೇಗುಲ, ನಿಯಮ ಪಾಲಿಸಿದರಷ್ಟೇ ಪ್ರವೇಶ! ..

ಅಲ್ಲದೆ, ನವೆಂಬರ್‌ 16ರಿಂದ ಆರಂಭವಾಗಲಿರುವ 2 ತಿಂಗಳ ವಾರ್ಷಿಕ ಯಾತ್ರೆ ವೇಳೆ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸುತ್ತಾರೆ. ಈ ವೇಳೆ ಭಕ್ತರನ್ನು ನಿಯಂತ್ರಿಸುವುದು ಕಷ್ಟಸಾಧ್ಯ. ಈ ಹಿನ್ನೆಲೆಯಲ್ಲಿ ಶಬರಿಮಲೆಯಲ್ಲಿರುವ ಹೋಟೆಲ್‌ಗಳು, ಅಂಗಡಿಗಳು ಸೇರಿದಂತೆ ಇನ್ನಿತರ ಪ್ರದೇಶವನ್ನು ಶುಚಿಯಾಗಿಡಬೇಕು ಎಂಬ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೆವ್ವಗಳ ಬಗ್ಗೆ ಪಿಎಚ್‌ಡಿ ಮಾಡಲಿದ್ದಾರೆ ಬಾಗೇಶ್ವರ ಬಾಬಾ ಧೀರೇಂದ್ರ ಶಾಸ್ತ್ರಿ! ಘೋಸ್ಟ್ ಬಗ್ಗೆ ತಿಳಿಯಲು ನಿಮಗೆ ಆಸಕ್ತಿ ಇದೆಯೇ?
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು!