ಹಿಂಸಾತ್ಮಕ ಪ್ರತಿಭಟನೆ ಮಾಡಿದರೆ ಸರ್ಕಾರಿ ನೌಕರಿ ಕಷ್ಟ ಸಾಧ್ಯ!

Published : Feb 04, 2021, 09:28 AM IST
ಹಿಂಸಾತ್ಮಕ ಪ್ರತಿಭಟನೆ ಮಾಡಿದರೆ ಸರ್ಕಾರಿ ನೌಕರಿ ಕಷ್ಟ ಸಾಧ್ಯ!

ಸಾರಾಂಶ

ಹಿಂಸಾತ್ಮಕ ಪ್ರತಿಭಟನೆ ಮಾಡಿದರೆ ಸರ್ಕಾರಿ ನೌಕರಿ ಕಷ್ಟ ಸಾಧ್ಯ| ಬಿಹಾರದಲ್ಲಿ ಹೊಸ ನಿಯಮ ಜಾರಿಗೆ| ಪ್ರತಿಭಟನೆ ನಡೆಸೋದೇ ತಪ್ಪಾ?: ವಿಪಕ್ಷಗಳು ಗರಂ

ಪಟನಾ(ಫೆ.04): ಹಿಂಸಾತ್ಮಕ ಪ್ರತಿಭಟನೆಗಳು, ಅಕ್ರಮ ರಸ್ತೆ ತಡೆ, ಶಾಂತಿಭಂಗ ಚಟುವಟಿಕೆ- ಇತ್ಯಾದಿಗಳನ್ನು ನಡೆಸಿದರೆ ಬಿಹಾರದಲ್ಲಿ ಸರ್ಕಾರಿ ನೌಕರಿ ಸಿಗುವುದು ಇನ್ನು ಕಷ್ಟಸಾಧ್ಯವಾಗಲಿದೆ. ಇಂಥ ನಿಯಮವೊಂದನ್ನು ನಿತೀಶ್‌ ಕುಮಾರ್‌ ಸರ್ಕಾರ ಜಾರಿಗೆ ತಂದಿದೆ.

‘ಯಾವುದಾದರೂ ವ್ಯಕ್ತಿ ಶಾಂತಿಭಂಗ ತರುವ ಕ್ರಿಮಿನಲ್‌ ಚಟುವಟಿಕೆ ನಡೆಸಿದ್ದರೆ, ಹಿಂಸೆಗೆ ತಿರುಗುವ ಪ್ರತಿಭಟನೆಗಳನ್ನು ಮಾಡಿದ್ದರೆ, ರಸ್ತೆ ಜಾಮ್‌ ಮಾಡಿದ್ದರೆ- ಆತನ ಮೇಲೆ ಪೊಲೀಸ್‌ ಕೇಸು ದಾಖಲಾಗುತ್ತದೆ. ಈ ವಿಷಯವನ್ನು ಪೊಲೀಸರು ವ್ಯಕ್ತಿಯ ಚಾರಿತ್ರ್ಯ ಪ್ರಮಾಣಪತ್ರದಲ್ಲಿ (ಕ್ಯಾರೆಕ್ಟರ್‌ ಸರ್ಟಿಫಿಕೇಟ್‌) ನಮೂದಿಸಬೇಕು. ಇಂಥವರಿಗೆ ಸರ್ಕಾರಿ ನೌಕರಿ ಸಿಗುವುದು ಅಥವಾ ಮದ್ಯದ ಅಂಗಡಿ ಲೈಸೆನ್ಸ್‌ ತೆಗೆದುಕೊಳ್ಳುವುದು ಆಗದು’ ಎಂದು ಬಿಹಾರ ಡಿಜಿಪಿ ಅವರು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಆದರೆ ಬಿಹಾರ ವಿಪಕ್ಷಗಳು ಇದನ್ನು ಪ್ರಶ್ನಿಸಿವೆ. ‘ಪ್ರತಿಭಟನೆ ನಡೆಸೋದೇ ತಪ್ಪಾ? ಪ್ರಜಾಸತ್ತೆಯಲ್ಲಿ ಜನರಿಗೆ ಪ್ರತಿಭಟಿಸುವ ಹಕ್ಕಿದೆ. ಇದು ಹಿಟ್ಲರ್‌, ಮುಸೋಲಿನಿ ಆಡಳಿತ’ ಎಂದು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ರನ್ನು ಪ್ರಶ್ನಿಸಿದ್ದಾರೆ.

ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಬಿಹಾರ ಎಡಿಜಿ ಜಿತೇಂದ್ರ ಕುಮಾರ್‌, ‘ಚಾರಿತ್ರ್ಯ ಪ್ರಮಾಣಪತ್ರದಲ್ಲಿ ವ್ಯಕ್ತಿಯ ಕೃತ್ಯಗಳನ್ನು ನಮೂದಿಸುವುದಷ್ಟೇ ಪೊಲೀಸರ ಕೆಲಸ. ಅದನ್ನು ನೋಡಿಕೊಂಡು ನೌಕರಿ ಕೊಡುವುದು ಅಥವಾ ಬಿಡುವುದು ಉದ್ಯೋಗದಾತರಿಗೆ ಬಿಟ್ಟವಿಚಾರ’ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?