
ನವದೆಹಲಿ (ಮಾ.22): ಹಿಂದಿ ಭಾಷೆ ಹೇರಿಕೆ ವಿಚಾರವಾಗಿ ದಕ್ಷಿಣದ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಸಮರ ನಡೆಯುತ್ತಿರುವ ಹೊತ್ತಿನಲ್ಲಿಯೇ ಕೇಂದ್ರ ಸಚಿವ ಅಮಿತ್ ಶಾ ಅವರು, ಡಿಸೆಂಬರ್ನಿಂದ ಕರ್ನಾಟಕ ಸೇರಿದಂತೆ ಆಯಾ ರಾಜ್ಯಗಳ ಜತೆ ಅಧಿಕೃತ ಸಂವಹನವನ್ನು ಸ್ಥಳೀಯ ಭಾಷೆಯಲ್ಲಿಯೇ ನಡೆಸಲಾಗುತ್ತದೆ ಎಂದು ಘೋಷಿಸಿದ್ದಾರೆ.
ಶುಕ್ರವಾರ ರಾಜ್ಯಸಭೆಯಲ್ಲಿ ಸ್ಥಳೀಯ ಭಾಷೆ ವಿಚಾರವಾಗಿ ಕೇಂದ್ರ ಸರ್ಕಾರದ ಬದ್ಧತೆಯನ್ನು ಎತ್ತಿ ಹಿಡಿದು ಮಾತನಾಡಿದ ಶಾ, ‘ಡಿಸೆಂಬರ್ನಿಂದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದರು ಮತ್ತು ಜನಸಾಮಾನ್ಯರ ಜೊತೆಗಿನ ಅಧಿಕೃತ ಪತ್ರ ವ್ಯವಹಾರಗಳನ್ನು ಸ್ಥಳೀಯ ಭಾಷೆಯಲ್ಲೇ ಮಾಡಲಾಗುವುದು’ ಎಂದು ಘೋಷಿಸಿದರು.
ಇದನ್ನೂ ಓದಿ: ಏಯ್ ಡಿಕೆ ಶಿವಕುಮಾರ, ಹಿಂದಿ ಹೇರಿಕೆಗೆ ರಾಹುಲ್, ಸೋನಿಯಾಗಾಂಧಿ ಪರಿಹಾರ ಕೊಡ್ತಾರಾ?; ಕೋಡಿಹಳ್ಳಿ ಏಕವಚನದಲ್ಲೇ ವಾಗ್ದಾಳಿ!
ಜೊತೆಗೆ ಸ್ಥಳೀಯ ಭಾಷೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜಭಾಷಾ ವಿಭಾಗದಲ್ಲಿ ಹೊಸ ಇಲಾಖೆಯನ್ನು ತೆರೆಯಲಾಗಿದೆ. ಅದರ ಅಡಿಯಲ್ಲಿ ಅನುವಾದಕ್ಕೆ ಅನುಕೂಲವಾಗಲು ಆ್ಯಪ್ಗಳನ್ನು ಬಿಡುಗಡೆ ಮಾಡಲಾಗುವುದು. ಭಾರತದ ಪ್ರತಿ ಭಾಷೆಯೂ ವಿಶೇಷವಾಗಿದ್ದು, ಅವುಗಳು ದೇಶದ ಸಂಸ್ಕೃತಿಯನ್ನು ಸಾರುತ್ತವೆ ಎಂದು ಅಮಿತ್ ಶಾ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ