ದೆಹಲಿ ಆಕ್ಸಿಜನ್ ಸಮಸ್ಯೆ ಅಂತ್ಯ, 3 ತಿಂಗಳಲ್ಲಿ ಸಂಪೂರ್ಣ ಲಸಿಕೆ ಅಭಿಯಾನ!

Published : May 07, 2021, 08:30 PM ISTUpdated : May 07, 2021, 08:31 PM IST
ದೆಹಲಿ ಆಕ್ಸಿಜನ್ ಸಮಸ್ಯೆ ಅಂತ್ಯ, 3 ತಿಂಗಳಲ್ಲಿ ಸಂಪೂರ್ಣ ಲಸಿಕೆ ಅಭಿಯಾನ!

ಸಾರಾಂಶ

ಕೊರೋನಾ ವೈರಸ್ ಕಾರಣ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉದ್ಭವಿಸಿದ ಆಕ್ಸಿಜನ್ ಸಮಸ್ಯೆ ಅಂತ್ಯವಾಗಿದೆ. ಇದೀಗ ಮುಂದಿನ ಗುರಿ ಸಂಪೂರ್ಣ ದೆಹಲಿಗೆ ಲಸಿಕೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ನವದೆಹಲಿ(ಮೇ.07):  ಕೊರೋನಾ ವೈರಸ್ ಸಂಖ್ಯೆ ಹೆಚ್ಚಳದಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಆಕ್ಸಿಜನ್ ಸಮಸ್ಯೆ ಎದುರಾಗಿದೆ. ಆದರೆ ಕೇಂದ್ರ ಸರ್ಕಾರ ಇದೀಗ ದೆಹಲಿಯಲ್ಲಿ ಉದ್ಭವಿಸಿದ ಆಕ್ಸಿಜನ್ ಸಮಸ್ಯೆಯನ್ನು ನಿವಾರಿಸುವಲ್ಲಿ ಕೇಂದ್ರ ಯಶಸ್ವಿಯಾಗಿದೆ. ವಿದೇಶಗಳಿಂದ ಬಂದ ಆಕ್ಸಿಜನ್, ಉತ್ಪಾದಕ ಘಟಕ, ನೈಟ್ರೋಜನ್ ಪರಿವರ್ತಿಸಿ ಆಕ್ಸಿಜನ್ ಸೇರಿದಂತೆ ಹಲವು ಕ್ರಮಗಳಿಂದ ದೆಹಲಿಯಲ್ಲಿ ಆಮ್ಲಜನಕ ಸಮಸ್ಯೆ ಅಂತ್ಯಗೊಂಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ಹೊಸ ಸೋಂಕಿತರಿಗಿಂತ ಚೇತರಿಕೆ ಪ್ರಮಾಣವೇ ಹೆಚ್ಚು!.

ಈ ಕುರಿತು ಸುದ್ದಿಗೋಷ್ಠಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಆಕ್ಸಿಜನ್ ಸಮಸ್ಯೆ ಅಂತ್ಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.  ಯಾರೂ ಕೂಡ ಬೆಡ್ ಇಲ್ಲದೆ, ಆಕ್ಸಿಜನ್ ಇಲ್ಲದೆ ಸಮಸ್ಯೆ ಎದುರಿಸುವುದಿಲ್ಲ. ದೆಹಲಿ ಎಲ್ಲಾ ಕೊರತೆಗಳನ್ನ ನೀಗಿಸಿಕೊಂಡಿದೆ ಎಂದಿದ್ದಾರೆ.

ಮುಂದಿನ 3 ತಿಂಗಳಲ್ಲಿ ದೆಹಲಿಯಲ್ಲಿ ಸಂಪೂರ್ಣ ವ್ಯಾಕ್ಸಿನೇಷನ್ ನಡೆಸಲು ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ತ್ವರಿತಗತಿಯಲ್ಲಿ ಲಸಿಕೆ ನೀಡಿ ದೆಹಲಿಯನ್ನು ಕೊರೋನಾ 3ನೇ ಅಲೆಯಿಂದ ತಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಆತಂಕ ಹೆಚ್ಚಿಸಿದ ಕೊರೋನಾ; ಮತ್ತೊಂದು ವಾರ ಲಾಕ್‌ಡೌನ್ ವಿಸ್ತರಣೆ!

ದೆಹಲಿ ಆಕ್ಸಿಜನ್ ಸಮಸ್ಯೆ ಅಂತ್ಯವಾಗಿದೆ. ಆದರೆ ದೇಶದ ಹಲವು ರಾಜ್ಯಗಳಲ್ಲಿ ಆಕ್ಸಿಜನ್ ಹಾಹಾಕಾರ ಇನ್ನೂ ಇದೆ. ಹೀಗಾಗಿ ಕೇಂದ್ರ ಸರ್ಕಾರ ಇತರ ರಾಜ್ಯಗಳ ಸಮಸ್ಯೆಯನ್ನು ಶೀಘ್ರದಲ್ಲೇ ಅಂತ್ಯಗೊಳಿಸಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರದ ಸಚಿವ ನಿತಿನ್ ನಬಿ ಆಯ್ಕೆ, ಶುಭಕೋರಿದ ಜೆಪಿ ನಡ್ಡಾ