
ಮುಂಬೈ(ಮಾ.16): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕೆ ಮತ್ತೊಮ್ಮೆ ಲಾಕ್ಡೌನ್ ಹೇರಿಕೆ ಪರಿಹಾರವಾಗಲಾರದು. ಆದರೆ ಕಠಿಣ ನಿರ್ಬಂಧಗಳ ಮೂಲಕ ಕೊರೋನಾ ಅಲೆಯನ್ನು ತಗ್ಗಿಸಲಾಗುತ್ತದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಪ್ರತಿಪಾದಿಸಿದ್ದಾರೆ.
ಸೋಮವಾರ ಮಾತನಾಡಿದ ಟೋಪೆ ಅವರು, ‘ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿವೆ. ಆದರೆ ಲಾಕ್ಡೌನ್ ಇದಕ್ಕೆ ಪರಿಹಾರವಲ್ಲ. ಬದಲಿಗೆ ಕೊರೋನಾ ಪರೀಕ್ಷೆಯ ಹೆಚ್ಚಳ, ಸೋಂಕಿತರ ಪತ್ತೆ ಮತ್ತು ಕಠಿಣ ನಿರ್ಬಂಧಗಳ ಮೂಲಕ ಪರಿಹಾರ ಕಂಡುಕೊಳ್ಳಲಾಗುತ್ತದೆ’ ಎಂದರು.
ಏತನ್ಮಧ್ಯೆ, ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸಚಿವರು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಈ ವೇಳೆ ಕಠಿಣ ಕ್ರಮಗಳ ಘೋಷಣೆ ಆಗುವ ಸಾಧ್ಯತೆ ಇದೆ.
ಈ ನಡುವೆ, ಸೋಮವಾರ ಮಹಾರಾಷ್ಟ್ರದಲ್ಲಿ 15,051 ಪ್ರಕರಣ ದಾಖಲಾಗಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ