ತಮಿಳುನಾಡು ಒಪ್ಪಿಗೆ ಇಲ್ಲದೆ ಮೇಕೆದಾಟು ಡ್ಯಾಂ ಇಲ್ಲ?

Published : Jun 23, 2022, 11:04 AM IST
ತಮಿಳುನಾಡು ಒಪ್ಪಿಗೆ ಇಲ್ಲದೆ ಮೇಕೆದಾಟು ಡ್ಯಾಂ ಇಲ್ಲ?

ಸಾರಾಂಶ

*  ಜಲಶಕ್ತಿ ಸಚಿವರಿಂದ ಭರವಸೆ ಸಿಕ್ಕಿದೆ: ತಮಿಳುನಾಡು *  ಸಚಿವರ ಭೇಟಿ ಬಳಿಕ ತ.ನಾಡು ಮಂತ್ರಿ ಹೇಳಿಕೆ *  ಮಂಡಳಿಗೆ ಮೇಕೆದಾಟು ಬಗ್ಗೆ ಚರ್ಚೆಗೆ ಅಧಿಕಾರವಿಲ್ಲ   

ಚೆನ್ನೈ(ಜೂ.23):  ತಮಿಳುನಾಡಿನ ಒಪ್ಪಿಗೆ ಇಲ್ಲದೇ ಕರ್ನಾಟಕ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡಲು ಆಗದು ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ತಮಗೆ ತಿಳಿಸಿದ್ದಾರೆ ಎಂದು ತಮಿಳುನಾಡು ಜಲ ಸಂಪನ್ಮೂಲ ಸಚಿವ ದೊರೈಮುರುಗನ್‌ ಹೇಳಿದ್ದಾರೆ.

ಮೇಕೆದಾಟುವಿನಲ್ಲಿ ಕರ್ನಾಟಕ ಸರ್ಕಾರ ನಿರ್ಮಾಣ ಮಾಡಲು ಚಿಂತಿಸಿರುವ ಅಣೆಕಟ್ಟು ಯೋಜನೆಗೆ ತಮಿಳುನಾಡಿನ ಹಿತದೃಷ್ಟಿಯಿಂದ ಅವಕಾಶ ನೀಡಬಾರದು ಎಂದು ಕೋರಿ ತಮಿಳುನಾಡಿನ ಶಾಸಕರ ನಿಯೋಗ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರಿಗೆ ಬುಧವಾರ ಮನವಿ ಮಾಡಿತು. 

ಒಕ್ಕೂಟ ವ್ಯವಸ್ಥೆ ಮೇಲೆ ಸ್ಟಾಲಿನ್‌ ದಬ್ಬಾಳಿಕೆ: ಸಿಎಂ ಬೊಮ್ಮಾಯಿ ಆಕ್ರೋಶ

ಅಲ್ಲದೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮೇಕೆದಾಟು ಅಣೆಕಟ್ಟು ಕುರಿತಾಗಿ ಚರ್ಚೆ ನಡೆಸದಂತೆ ಶೆಖಾವತ್‌ ಅವರು ಸೂಚನೆ ನೀಡಬೇಕು. ಮಂಡಳಿಗೆ ಮೇಕೆದಾಟು ಬಗ್ಗೆ ಚರ್ಚೆಗೆ ಅಧಿಕಾರವಿಲ್ಲ ಎಂದೂ ನಿಯೋಗ ಕೋರಿತು. ಆಗ ಶೆಖಾವತ್‌ ಈ ಮೇಲಿನಂತೆ ಉತ್ತರಿಸಿದರು ಎಮದು ದೊರೈಮುರುಗನ್‌ ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Keralam Election Results: ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?
5 State Assembly Election results 2026 Live: Keralam Election Results - ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?