
ನವದೆಹಲಿ(ಫೆ.03): ದೇಶವ್ಯಾಪಿಯಾಗಿ ಅಂತರ್ಧರ್ಮೀಯ ವಿವಾಹ ನಿಷೇಧ (ಲವ್ ಜಿಹಾದ್ ನಿಷೇಧ) ಕಾಯ್ದೆ ಜಾರಿಗೊಳಿಸುವ ಉದ್ದೇಶವಿಲ್ಲ. ಇದು ರಾಜ್ಯ ಸರ್ಕಾರಗಳಿಗೆ ಬಿಟ್ಟವಿಷಯ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿರುವ ಕೇಂದ್ರ ಗೃಹ ಸಚಿವಾಲಯ, ‘ಅಂತರ್ ಧರ್ಮೀಯ ವಿವಾಹ ನಿಷೇಧಿಸಲು ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಉದ್ದೇಶವಿಲ್ಲ. ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದ ಅಪರಾಧಗಳನ್ನು ಪತ್ತೆ ಮಾಡುವುದು ಹಾಗೂ ತನಿಖೆ ನಡೆಸುವುದು ರಾಜ್ಯಗಳಿಗೆ ಸಂಬಂಧಿಸಿದ ವಿಷಯ’ ಎಂದಿದೆ.
ಇತ್ತೀಚೆಗೆ ಉತ್ತರಪ್ರದೇಶ ಹಾಗೂ ಮಧ್ಯಪ್ರದೇಶದ ಬಿಜೆಪಿ ಆಡಳಿತದ ರಾಜ್ಯಗಳು ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ತಂದಿವೆ. ಕರ್ನಾಟಕದಲ್ಲೂ ಇದರ ಜಾರಿ ಕುರಿತ ಚರ್ಚೆ ನಡೆದಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ