Booster Dose Updates: 60+ ಬೂಸ್ಟರ್‌ ಡೋಸ್‌ಗೆ ವೈದ್ಯರ ಪತ್ರ ಬೇಕಾ, ಬೇಡ್ವಾ ? ಗೊಂದಲಕ್ಕೆ ತೆರೆ

Kannadaprabha News   | Asianet News
Published : Dec 29, 2021, 07:15 AM IST
Booster Dose Updates: 60+ ಬೂಸ್ಟರ್‌ ಡೋಸ್‌ಗೆ ವೈದ್ಯರ ಪತ್ರ ಬೇಕಾ, ಬೇಡ್ವಾ ? ಗೊಂದಲಕ್ಕೆ ತೆರೆ

ಸಾರಾಂಶ

ಹಿರಿಯರು, ಮುಂಚೂಣಿ ಕಾರ‍್ಯಕರ್ತರಿಗೆ ಜ.10ರಿಂದ ಬೂಸ್ಟರ್‌ ಡೋಸ್‌ ಚುನಾವಣಾ ಸಿಬ್ಬಂದಿಗೆ ಮುಂಚೂಣಿ ಕಾರ್ಯಕರ್ತರ ಸ್ಥಾನಮಾನ ನೀಡಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ(ಡಿ.29): ನಾನಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ 60 ವರ್ಷ ಮೇಲ್ಪಟ್ಟವ್ಯಕ್ತಿಗಳು ಮುಂಜಾಗ್ರತಾ ಲಸಿಕೆ ಪಡೆಯಲು, ವೈದ್ಯರಿಂದ ಪ್ರಮಾಣಪತ್ರ ಪತ್ರ ತರುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಮೂಲಕ ವಯೋವೃದ್ಧರ ಪ್ರಮಾಣಪತ್ರಕ್ಕಾಗಿ ಆಸ್ಪತ್ರೆಗಳಿಗೆ ಅಲೆಯುವ ಕೆಲಸವನ್ನು ತಪ್ಪಿಸಿದೆ. ಆದರೆ ಮುಂಜಾಗ್ರತಾ ಲಸಿಕೆ ಪಡೆಯುವ ಮುನ್ನ ವೈದ್ಯರ ಸಲಹೆ ಪಡೆಯುವುದು ಸೂಕ್ತ ಎಂದು ಹೇಳಿದೆ.

ಈ ಕುರಿತು ಎಲ್ಲಾ ರಾಜ್ಯಗಳಿಗೆ ಮಾಹಿತಿ ರವಾನಿಸಿರುವ ಕೇಂದ್ರ ಆರೋಗ್ಯ ಸಚಿವಾಲಯ, ಜ.10ರಿಂದ 60 ವರ್ಷ ಮೇಲ್ಪಟ್ಟವರು ಮುಂಜಾಗ್ರತಾ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ. ಹೀಗೆ ಲಸಿಕೆ ಪಡೆಯಲು ಅರ್ಹರಾದವರು, ಲಸಿಕೆ ನೋಂದಣಿ ವೇಳೆ ಅಥವಾ ಲಸಿಕೆ ಪಡೆಯುವ ವೇಳೆ ತಮಗೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಬಗ್ಗೆ ವೈದ್ಯರಿಂದ ಪ್ರಮಾಣ ಪತ್ರ ಸಲ್ಲಿಸಬೇಕಿಲ್ಲ. ಅದರೆ ಅವರು ತಾವು ಲಸಿಕೆ ಪಡೆಯಬಹುದೇ ಎಂಬುದರ ಕುರಿತು ವೈದ್ಯರೊಂದಿಗೆ ಪೂರ್ವ ಸಮಾಲೋಚನೆ ನಡೆಸುವುದು ಸೂಕ್ತ. ಎಲ್ಲಾ ಅರ್ಹರಿಗೂ ಲಸಿಕೆ ಪಡೆಯುವ ಸಮಯದ ಕುರಿತು ಎಸ್‌ಎಂಎಸ್‌ ಮೂಲಕ ಮಾಹಿತಿ ರವಾನಿಸಲಾಗುವುದು ಎಂದು ಹೇಳಿದೆ.

ಒಮಿಕ್ರೋನ್‌ ಸ್ಫೋಟ: ಸೋಮವಾರ ದಾಖಲೆಯ 156 ಹೊಸ ಕೇಸ್‌!

ಇದೇ ವೇಳೆ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಕೂಡಾ ಜ.10ರಿಂದ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ. ಜ.3ರಿಂದ 15-18ರ ವಯೋಮಾನದ ಮಕ್ಕಳಿಗೆ ಕೋವ್ಯಾಕ್ಸಿನ್‌ ಲಸಿಕೆ ನೀಡಲಾಗುವುದು. ಇದಕ್ಕೆ ಅಗತ್ಯವಾದ ಹೆಚ್ಚುವರಿ ಲಸಿಕೆಯನ್ನು ಶೀಘ್ರವೇ ರಾಜ್ಯಗಳಿಗೆ ರವಾನಿಸಲಾಗುವುದು ಎಂದು ಸರ್ಕಾರ ಮಾಹಿತಿ ನೀಡಿದೆ.

15-18ರ ವಯೋಮಾನದ ಮಕ್ಕಳಿಗೆ ಲಸಿಕೆ, ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು ವಯೋವೃದ್ಧರಿಗೆ ಬೂಸ್ಟರ್‌ ಡೋಸ್‌ ಕೋವಿಡ್‌ ಲಸಿಕೆ ನೀಡುವ ಕೇಂದ್ರದ ನಿರ್ಧಾರದಿಂದಾಗಿ ಹೆಚ್ಚುವರಿ 20 ಕೋಟಿ ಡೋಸ್‌ ಲಸಿಕೆ ಅಗತ್ಯ ಬೀಳಲಿದೆ.

2011ರ ಜನಗಣತಿಯ ಪ್ರಕಾರ ಭಾರತದಲ್ಲಿ ಒಟ್ಟು 7.4 ಕೋಟಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿದ್ದಾರೆ. 13.79 ಕೋಟಿ 60 ವರ್ಷ ಮೇಲ್ಪಟ್ಟವಯಸ್ಕರಿದ್ದಾರೆ. ಈ ಪೈಕಿ ಶೇ.75ರಷ್ಟುಜನರು ನಾನಾ ರೀತಿಯ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಕೇಂದ್ರ ಕುಟುಂಬ ಹಾಗೂ ಆರೋಗ್ಯ ಕಲ್ಯಾಣ ಸಚಿವಾಲಯದ ವರದಿ ಹೇಳಿದೆ. ಅಂದರೆ 13.79 ಕೋಟಿ ಜನರ ಪೈಕಿ 10 ಕೋಟಿ ಜನರು ಬೂಸ್ಟರ್‌ ಡೋಸ್‌ ಪಡೆಯುವ ಅರ್ಹತೆ ಪಡೆಯುತ್ತಾರೆ. ಇವರ ಜೊತೆ 1 ಕೋಟಿ ಆರೋಗ್ಯ ಕಾರ್ಯಕರ್ತರು, 2 ಕೋಟಿ ಮುಂಚೂಣಿ ಕಾರ್ಯಕರ್ತರು ಇದ್ದಾರೆ. ಹೀಗಾಗಿ 20 ಕೋಟಿಗಿಂತ ಹೆಚ್ಚಿನ ಡೋಸ್‌ ಹೆಚ್ಚುವರಿ ಡೋಸ್‌ ಲಸಿಕೆ ಬೇಕಾಗಿ ಬರಲಿದೆ.

ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ತಲೆನೋವು ಕೊಡಲಾರಂಭಿಸಿದೆ. ಒಮಿಕ್ರಾನ್ ಪ್ರಕರಣಗಳ ಸಂಖ್ಯೆಯೂ ದಿನೇ ದಿನೇ ಹೆಚ್ಚುತ್ತಿವೆ. ಹೀಗಿರುವಾಗ ಹೊಸ ವರ್ಷಾಚರಣೆ ಮತ್ತೊಂದು ಹೊಸ ಅಲೆಗೆ ಕಾರಣವಾಗುತ್ತಾ ಎಂಬ ಭೀತಿ ಹುಟ್ಟಿಕೊಂಡಿದೆ. ಈಗಾಗಲೇ ಕರ್ನಾಟಕ ಸೇರಿ ಅನೇಕ ರಾಜ್ಯಗಳು ನ್ಯೂ ಇಯರ್ ಆಚರಣೆಗೆ ಬ್ರೇಕ್ ಹಾಕಿವೆ. ಹೀಗಿರುವಾಗ ಪ್ರಧಾನ ಮಂತ್ರಿ ನರೇದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಬೂಸ್ಟರ್ ಡೋಸ್ ಹಾಗೂ ಮಕ್ಕಳಿಗೆ ಲಸಿಕೆ ಆರಂಭಿಸುವ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..