
ನವದೆಹಲಿ(ಡಿ.23): ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದವರ ವಿವರಗಳನ್ನು ಬಹಿರಂಗಗೊಳಿಸುವುದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಎಂದು ಹೇಳಿರುವ ಕೇಂದ್ರೀಯ ಮಾಹಿತಿ ಆಯೋಗ (ಸಿಐಸಿ), ಈ ಸಂಬಂಧ ಸಲ್ಲಿಸಿದ್ದ ಅರ್ಜಿಯೊಂದನ್ನು ತಿರಸ್ಕರಿಸಿದೆ.
ಪುಣೆ ಮೂಲದ ಆರ್ಟಿಐ ಕಾರ್ಯಕರ್ತ ವಿಹಾರ್ ದುರ್ವೆ ಎನ್ನುವವರು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದವರ ವಿವರ ಹಾಗೂ ಎಲೆಕ್ಟೋರಲ್ ಬಾಂಡ್ಗಳ ವಿವರಗಳನ್ನು ಒದಗಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಮುನ್ನ ಅವರಿಗೆ ಎಲೆಕ್ಟೋರಲ್ ಬಾಂಡ್ಗಳ ಮಾಹಿತಿಯನ್ನು ನೀಡಲು ಎಸ್ಬಿಐ ನಿರಾಕರಿಸಿತ್ತು. ಹೀಗಾಗಿ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಬಾಂಡ್ಗಳ ಮಾಹಿತಿಯನ್ನು ಎಸ್ಬಿಐ ಬಹಿರಂಗಪಡಿಸಬೇಕು ಎಂದು ಕೇಳಿದ್ದರು.
ಆದರೆ, ಬಾಂಡ್ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿ ಇಡುವುದು ಬ್ಯಾಂಕಿನ ಕರ್ತವ್ಯವಾಗಿದ್ದು, ವಿವರಗಳನ್ನು ಬಹಿರಂಗಪಡಿಸುವುದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ ಎಂದು ಮಾಹಿತಿ ಆಯೋಗ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ