
ನವದೆಹಲಿ(ಆ.22): ಅನ್ಲಾಕ್ 3.0 ನಿಯಮದಲ್ಲಿ ಅಂತಾರಾಜ್ಯ ಪ್ರಯಾಣಕ್ಕೆ ಅನುಮತಿ ನೀಡಿ. ಗಡಿಗಳನ್ನು ತೆರೆಯಿರಿ ಎಂದು ಕೇಂದ್ರ ಗೃಹ ಸಚಿವಾಲಯ ಕೇಂದ್ರಕ್ಕೆ ಸೂಚನೆ ನೀಡಿದೆ.
ಅಂತಾರಾಜ್ಯ ಪ್ರಯಾಣದ ಮೇಲೆ ಯಾವುದೇ ನಿರ್ಬಂಧ ಬೇಡ. ಸರಕು ಸಾಗಾಟ ಹಾಗೂ ಜನರು ಮುಕ್ತವಾಗಿ ಪ್ರಯಾಣಿಸಲು ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಪತ್ರದ ಮೂಲಕ ತಿಳಿಸಿದೆ.
ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!
ಕೇಂದ್ರ ಗೃಹಸಚಿವಾಲಯದ ಕಾರ್ಯದರ್ಶಿ ಆಯಾ ರಾಜ್ಯದ ಸಿಎಂಗಳಿಗೆ ಪತ್ರ ಬರೆದಿದ್ದು, ಕೇಂದ್ರದ 3.0 ಅನ್ಲಾಕ್ ನಿಯಮಗಳ ಬಗ್ಗೆ ಮಾಹಿತಿ ನೀಡಿದೆ. ಹಲವು ಜಿಲ್ಲೆ, ರಾಜ್ಯಗಳಲ್ಲಿ ಸ್ಥಳೀಯ ಮಟ್ಟದ ಸಂಚಾರ ನಿರ್ಬಂಧ ಹೇರಲಾಗಿದೆ. ಈ ರೀತಿ ಯಾವುದೇ ನಿರ್ಬಂಧ ಇರಬಾರದು. ಹಾಗೆಯೇ ಅನ್ಲಾಕ್ 3.0 ನಿಯಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಬೇಕೆಂದು ಸೂಚನೆ ನೀಡಲಾಗಿದೆ.
ಕೇಂದ್ರ ಗೃಹ ಸಚಿವಾಲಯ ಅನ್ಲಾಕ್ 3.0 ಭಾಗವಾಗಿ ಇತ್ತೀಚೆಗಷ್ಟೇ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಆಗಸ್ಟ್ 1ರಿಂದ ಅನ್ವಯಿಸುವಂತೆ ಇದು ಜಾರಿಯಾಗಿತ್ತು. ಹೊಸ ಮಾರ್ಗಸೂಚಿಗಳ ಪ್ರಕಾರ ಯೋಗ ಕೇಂದ್ರ, ಜಿಮ್ಗಳನ್ನು ಆಗಸ್ಟ್ 5ರಿಂದ ತೆರೆಯಲು ಸೂಚನೆ ನೀಡಲಾಗಿತ್ತು. ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಈಗಲೂ ಅಂತಾರಾಜ್ಯ ಗಡಿಗಳನ್ನು ಪ್ರಯಾಣಿಕರಿಗೆ ಮುಕ್ತವಾಗಿಸಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ