'ಬಂಜೆತನ, ಪುರುಷತ್ವ ಹರಣಕ್ಕೆ ಲಸಿಕೆ ಕಾರಣವಾಗಲ್ಲ' ಕೇಂದ್ರದ ಸ್ಪಷ್ಟನೆ

Published : Jun 21, 2021, 08:59 PM ISTUpdated : Jun 21, 2021, 09:27 PM IST
'ಬಂಜೆತನ, ಪುರುಷತ್ವ ಹರಣಕ್ಕೆ ಲಸಿಕೆ ಕಾರಣವಾಗಲ್ಲ' ಕೇಂದ್ರದ ಸ್ಪಷ್ಟನೆ

ಸಾರಾಂಶ

* ಕೊರೋನಾ ಲಸಿಕೆ ಹಲವು ಸಂಶಯಗಳಿಗೆ ತೆರೆ ಎಳೆದ ಸರ್ಕಾರ * ಬಂಜೆತನ, ಫಲವತ್ತತೆ ಕೊರತೆ ಶುದ್ಧ ಸುಳ್ಳು * ವದಂತಿಗಳಿಗೆ ದಯವಿಟ್ಟು ಕಿವಿ ಕೊಡಬೇಡಿ

ನವದೆಹಲಿ(ಜೂ. 21)  ಕೊರೋನಾ ಲಸಿಕೆಗಳು ಬಂಜೆತನಕ್ಕೆ ಕಾರಣವಾಗುವುದಿಲ್ಲ ಮತ್ತು ವಯಸ್ಕರಲ್ಲಿ ಸಂತಾನೋತ್ಪತ್ತಿ ಫಲವತ್ತತೆಯ ಮೇಲೆ ಲಸಿಕೆಗಳು ಋಣಾತ್ಮಕ ಪರಿಣಾಮ ಬೀರುತ್ತವೆ ಎನ್ನುವುದು ಆಧಾರ ರಹಿತ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಇಂಥ ಮೂಢನಂಬಿಕೆಗಳು ಹಾಗೂ ಕಾಲ್ಪನಿಕ ಕಥೆಗಳು ಆರೋಗ್ಯ ಕಾರ್ಯಕರ್ತರು ಮತ್ತು ದಾದಿಯರು ಸೇರಿದಂತೆ ಮುಂಚೂಣಿ ಕಾರ್ಯಕರ್ತರಿಂದಲೇ ಕೇಳಿಬಂದಿರುವುದು ಅಚ್ಚರಿ ತಂದಿದೆ.  ಲಸಿಕೆ ವಿರೋಧಿಸುವ ಜನರು  ಕೊರೋನಾ ವಾರಿಯರ್ಸ್ ಬಳಿ ಇಂಥ ವಿಚಾರ ಹೇಳಿದ್ದಾರೆ  ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಲಸಿಕಾ ಅಭಿಯಾನ ಸಂದರ್ಭದಲ್ಲಿ ಸಮುದಾಯದಲ್ಲಿ ಇಂತಹ ತಪ್ಪು ಸಂದೇಶ ಮತ್ತು ವದಂತಿಗಳು ಹರಡುವುದು  ಹಿಂದೆಯೂ ನಡೆದ ಉದಾಹರಣೆಗಳಿವೆ ಎಂದು ಸರ್ಕಾರ ಹೇಳಿದೆ.

ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ಹೇಗಿದೆ?

ಈ ಹಿಂದೆ ಪೋಲಿಯೊ ಮತ್ತು ದಢಾರ-ರುಬೆಲ್ಲಾ ಲಸಿಕೆ ಅಭಿಯಾನದ ವೇಳೆ ಸಹ ಇಂತಹ ವದಂತಿಗಳು ಹರಡಿದ್ದವು.  ಲಭ್ಯವಿರುವ ಯಾವುದೇ ಲಸಿಕೆಗಳು ಫಲವತ್ತತೆ ಮೇಲೆ ಪರಿಣಾಮ ಬೀರುವುದಿಲ್ಲ ಏಕೆಂದರೆ ಎಲ್ಲಾ ಲಸಿಕೆಗಳು ಮತ್ತು ಅವುಗಳ ಡೋಸ್ ಗಳನ್ನು ಮೊದಲು ಪ್ರಾಣಿಗಳ ಮೇಲೆ ಪ್ರಯೋಗಿಸಲಾಗಿದೆ. ಮಾನವರಲ್ಲಿ ಅಂತಹ ಯಾವುದೇ ಅಡ್ಡಪರಿಣಾಮಗಳಿವೆಯೇ ಎನ್ನುವುದನ್ನು ಪರೀಕ್ಷಿಸಿದ ನಂತರವೇ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ಹೇಳಿದೆ.

ಬಾಣಂತಿಯರಿಗೆ,  ಮಗುವಿಗೆ ಹಾಲುಣಿಸುವ ತಾಯಂದಿರಿಗೆ ಲಸಿಕೆ ನೀಡಲು ಶಿಫಾರಸು ಮಾಡಲಾಗಿದೆ.  ಲಸಿಕೆ ಮೊದಲು ಅಥವಾ ನಂತರ ಸ್ತನ್ಯಪಾನವನ್ನು ನಿಲ್ಲಿಸುವ ಅಥವಾ ವಿರಾಮ ನೀಡುವ ಅಗತ್ಯವಿಲ್ಲ ಎಂಬುದನ್ನು ಹೇಳಿದ್ದು ಅನೇಕ ಅನುಮಾನಗಳಿಗೆ ತೆರೆ ಎಳೆದಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!