
ಡೆಹ್ರಾಡೂನ್ (ಮಾ.4): ಉತ್ತರಾಖಂಡದ ಬದರಿನಾಥ ಮತ್ತು ಮಾಣಾ ನಡುವೆ ಹಿಮಕುಸಿತವಾಗಿ 8 ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ಬದರಿನಾಥ ದೇಗುಲದಲ್ಲಿ ಶಂಖ ನಾದ ನಿಷೇಧಿಸಲಾಗಿದೆ. ಶಂಖ ನಾದವು ಕಂಪನ ಸೃಷ್ಟಿಸುವ ಕಾರಣ ಅದು ಹಿಮಕುಸಿತಕ್ಕೆ ಕಾರಣವಾಗುವ ಭೀತಿಯಿಂದ ದೇಗುಲದಲ್ಲಿ ಮತ್ತು ಬದರಿಪಟ್ಟಣದಲ್ಲಿ ಶಂಖ ಮೊಳಗಿಸುವುದನ್ನು ನಿಷೇಧಿಸಲಾಗಿದೆ.
ಈ ಬಗ್ಗೆ ಸ್ಥಳೀಯ ಅರ್ಚಕರು ಮಾತನಾಡಿ, ಇದು ಹೊಸ ಪದ್ಧತಿಯೇನಲ್ಲ. ಹಿಂದಿನಿಂದಲೂ ಇದು ನಡೆದುಕೊಂಡು ಬರುತ್ತಿದೆ. ಶಂಖದಿಂದ ಉತ್ಪಾದನೆಯಾಗುವ ಕಂಪನಿಗಳ ಹಿಮಪರ್ವತದಲ್ಲಿ ಕಂಪನ ಸೃಷ್ಟಿಸುತ್ತದೆ. ಹೀಗೆ ತಯಾರಾಗುವ ಕಂಪನದಿಂದ ಹಿಮ ಕುಸಿತ ಉಂಟಾಗುತ್ತದೆ. ಅದರಿಂದಾಗಿ ಶಂಖನಾದವನ್ನು ನಿಷೇಧಿಸಲಾಗಿದೆ. ಜೊತೆಗೆ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೂ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಶಂಖವು ವಿಷ್ಣವಿಗೆ ಪ್ರಿಯವಾದ ವಸ್ತುವಾಗಿದ್ದು, ಅಭಿಷೇಕ ಮತ್ತು ಮಂಗಳರಾತಿ ವೇಳೆ ದೇಗುಲದಲ್ಲಿ ಮೊಳಗಿಸಲಾಗುತ್ತಿತ್ತು.
ಇದನ್ನೂ ಓದಿ: ಬದರಿನಾಥ ಹಿಮಕುಸಿತ: 4 ಸಾವು, ಇನ್ನೂ 5 ಜನರಿಗಾಗಿ ಶೋಧ
ಹಿರಿಯ ವಿಜ್ಞಾನಿಯೊಬ್ಬರು ಮಾತನಾಡಿ, ಬದರಿನಾಥ ಪ್ರದೇಶವು ಪರಿಸರ ಸೂಕ್ಷ್ಮ ವಲಯವಾಗಿದ್ದು, ಇಲ್ಲಿ ಮಾನವನ ಸಂಚಾರ ಹೆಚ್ಚಿದೆ. ಕಂಪನದ ಆತಂಕದಿಂದಾಗಿ ಶಂಖನಾದಕ್ಕೆ ನಿಷೇಧ ಹೇರಲಾಗಿದೆ. ಆದರೆ ಹೆಚ್ಚುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಯೂ ಕಂಪನ ಸೃಷ್ಟಿಸಿ ಹಿಮಪಾತಕ್ಕೆ ಕಾರಣವಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ