
ಕಲ್ಲಿಕೋಟೆ[ಜ.19]: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಕಾಂಗ್ರೆಸ್ ತೀವ್ರ ಪ್ರತಿಭಟನೆ ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ಸರ್ಕಾರವೇ ಸಿಎಎ ವಿರುದ್ಧ ಗೊತ್ತುವಳಿ ಅಂಗೀಕರಿಸಿದ ನಡುವೆಯೇ, ಯಾವುದೇ ರಾಜ್ಯವು ಸಿಎಎ ಜಾರಿಯನ್ನು ನಿರಾಕರಿ\ಸುವಂತಿಲ್ಲ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಪ್ರತಿಪಾದಿಸಿದ್ದಾರೆ.
ಮದುವೆ ಮಂಟಪದಲ್ಲೂ ಪೌರತ್ವ ಕಾಯ್ದೆಯದ್ದೇ ಹವಾ..!
ಅಲ್ಲದೆ, ಸಿಎಎ ಜಾರಿ ನಿರಾಕರಿಸುವುದು ಅಸಾಂವಿಧಾನಿಕ ಎಂದು ಹೇಳಿದ್ದಾರೆ. ಕೇರಳ ಸಾಹಿ ತ್ಯೋತ್ಸವವನ್ನುದ್ದೇಶಿಸಿ ಶನಿವಾರ ಮಾತ ನಾಡಿದ ಕೇಂದ್ರದ ಮಾಜಿ ಕಾನೂನು ಸಚಿವ ಸಿಬಲ್, ‘ಸಂಸತ್ತಿನಿಂದ ಅಂಗೀಕಾರಗೊಂಡಿರುವ ಸಿಎಎ ಅನ್ನು ಜಾರಿಗೊಳಿಸ ಲಾಗದು ಎಂದು ರಾಜ್ಯಗಳು ಹೇಳುವಂತಿಲ್ಲ. ಕಾಯ್ದೆ ವಾಪಸ್ ಪಡೆಯಲು ಕೇಂದ್ರಕ್ಕೆ ಒತ್ತಡ ತನ್ನಿ. ಆದರೆ, ಸಿಎಎ ಜಾರಿ ಮಾಡದಿರುವುದು ಅಸಾಂವಿಧಾನಿಕ’ ಎಂದು ಹೇಳಿದರು.
ಇನ್ನು ಸಿಎಎ ಜಾರಿಯಾದಂದಿನಿಂದ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಕೇರಳ ಹಾಗೂ ಪಂಜಾಬ್ ತಮ್ಮ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ಗೊತ್ತುವಳಿ ಅಂಗೀಕರಿಸಿ ಕೇಂದ್ರಕ್ಕೆ ಸೆಡ್ಡು ಹೊಡೆದಿವೆ.
ಹುಬ್ಬಳ್ಳಿಯಲ್ಲಿ ಅಮಿತ್ ಶಾ ಘರ್ಜನೆ: ಸಿಎಎ ಜಾರಿ ನಮ್ಮೆಲ್ಲರ ಹೊಣೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ