
ನಯಾ ರಾಯ್ಪುರ (ಫೆಬ್ರವರಿ 26, 2023): ಕಾಂಗ್ರೆಸ್ ಸದಸ್ಯರು ಮಾದಕ ವಸ್ತುಗಳಿಂದ ದೂರ ಇರಬೇಕು ಹಾಗೂ ಪಕ್ಷವನ್ನು ಸಾರ್ವಜನಿಕವಾಗಿ ಟೀಕಿಸಬಾರದು - ಎಂಬ 2 ಹೊಸ ನಿಯಮ ಸೇರಿ ಹಲವು ನಿಯಮಗಳನ್ನು ಛತ್ತೀಸ್ಗಢದ ರಾಯ್ಪುರದಲ್ಲಿ ನಡೆದಿರುವ 3 ದಿನಗಳ ಕಾಂಗ್ರೆಸ್ ಮಹಾಧಿವೇಶನದಲ್ಲಿ ರೂಪಿಸಲಾಗಿದೆ. ಪಕ್ಷದ ಸಂವಿಧಾನಕ್ಕೆ ಕೆಲವು ಬದಲಾವಣೆಗಳನ್ನು ಅಧಿವೇಶನದಲ್ಲಿ ತರಲಾಗಿದೆ. ಕಾಂಗ್ರೆಸ್ ಸದಸ್ಯರು ಸಮುದಾಯ ಸೇವೆ ಮಾಡುವ ಸ್ವಯಂಸೇವಕರಾಗಿರಬೇಕು. ಘೋರ ಅಪರಾಧ ಎಸಗಿ ಶಿಕ್ಷೆ ಅನುಭವಿಸಿರಕೂಡದು ಎಂಬ ನಿಯಮಗಳು ಹೊಸದಾಗಿ ಸೇರಿಕೊಂಡಿವೆ.
ಇದನ್ನು ಓದಿ: 2024ರಲ್ಲೂ ಮೋದಿ ವಿರುದ್ಧ ಕಾಂಗ್ರೆಸ್ ಮೈತ್ರಿ ರಚನೆ: ಖರ್ಗೆ; ಸೋನಿಯಾ ರಾಜಕೀಯ ವಿದಾಯ..?
ಸಿಡಬ್ಲ್ಯುಸಿಯಲ್ಲಿ ಶೇ.50ರಷ್ಟು ಮೀಸಲಿಗೆ ಅಸ್ತು
ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು, ಅಲ್ಪಸಂಖ್ಯಾತರು, ಯುವಕರು ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಶೇ.50 ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ಈ ಕುರಿತಾಗಿ ಛತ್ತೀಸ್ಗಢದ ನಯಾ ರಾಯಪುರದಲ್ಲಿ ನಡೆಯುತ್ತಿರುವ 85ನೇ ಮಹಾಧೀವೇಶನಲ್ಲಿ ಪಕ್ಷದ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ.
ಈ ತಿದ್ದುಪಡಿಯ ಪ್ರಕಾರ ಕಾರ್ಯಕಾರಿ ಸಮಿತಿಗೆ ಮಾಜಿ ಪ್ರಧಾನಿಗಳು ಮತ್ತು ಮಾಜಿ ಎಐಸಿಸಿ ಅಧ್ಯಕ್ಷರುಗಳನ್ನು ಸಹ ಸೇರಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಅಲ್ಲದೇ ಸಿಡಬ್ಲ್ಯುಸಿ ಸದಸ್ಯರ ಸಂಖ್ಯೆಯನ್ನು 25ರಿಂದ 35ಕ್ಕೆ ಏರಿಕೆ ಮಾಡಲಾಗಿದೆ. ಎಲ್ಲಾ ಸದಸ್ಯರಿಗೂ ಇನ್ನು ಮುಂದೆ ಕೇವಲ ಡಿಜಿಟಲ್ ಸದಸ್ಯತ್ವ ಮತ್ತು ದಾಖಲೆಗಳನ್ನು ಒದಗಿಸಲಾಗುತ್ತದೆ.
ಪ್ರಿಯಾಂಕಾಗೆ ಗುಲಾಬಿ ಸ್ವಾಗತ
ಛತ್ತೀಸ್ಗಢದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ 85ನೇ ಮಹಾಧಿವೇಶನಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರಿಗೆ 6 ಸಾವಿರ ಕೇಜಿ ಗುಲಾಬಿ ಹೂವುಗಳನ್ನು ನೆಲಕ್ಕೆ ಹಾಸಿ ಸ್ವಾಗತಿಸಲಾಯಿತು.
ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಜತೆ ನನ್ನ ಇನ್ನಿಂಗ್ಸ್ ಅಂತ್ಯವಾಗ್ಬಹುದು: ರಾಜಕೀಯ ನಿವೃತ್ತಿ ಸುಳಿವು ನೀಡಿದ ಸೋನಿಯಾ..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ