ಮಲ್ಯ ಗಡೀಪಾರಿಗೆ ಕೇಂದ್ರ ಎಲ್ಲಾ ಪ್ರಯತ್ನ ಮಾಡಿದೆ: ಸುಪ್ರೀಂಗೆ ಕೇಂದ್ರ ಮಾಹಿತಿ!

Published : Jan 19, 2021, 09:50 AM IST
ಮಲ್ಯ ಗಡೀಪಾರಿಗೆ ಕೇಂದ್ರ ಎಲ್ಲಾ ಪ್ರಯತ್ನ ಮಾಡಿದೆ:  ಸುಪ್ರೀಂಗೆ ಕೇಂದ್ರ ಮಾಹಿತಿ!

ಸಾರಾಂಶ

ಬ್ಯಾಂಕುಗಳಿಗೆ 9000 ಕೋಟಿ ರು.ಗೂ ಅಧಿಕ ಸಾಲ ಮರುಪಾವತಿಸದೇ ವಿದೇಶಕ್ಕೆ ಪರಾರಿ| ಮಲ್ಯ ಗಡೀಪಾರಿಗೆ ಕೇಂದ್ರ ಎಲ್ಲಾ ಪ್ರಯತ್ನ ಮಾಡಿದೆ| ಸುಪ್ರೀಂಗೆ ಕೇಂದ್ರ ಮಾಹಿತಿ

ನವದೆಹಲಿ(ಜ.19): ಬ್ಯಾಂಕುಗಳಿಗೆ 9000 ಕೋಟಿ ರು.ಗೂ ಅಧಿಕ ಸಾಲ ಮರುಪಾವತಿಸದೇ ವಿದೇಶಕ್ಕೆ ಪರಾರಿ ಆಗಿರುವ ದೇಶಭ್ರಷ್ಟ ಉದ್ಯಮಿ ವಿಜಯ್‌ ಮಲ್ಯ ಗಡೀಪಾರಿಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ, ಈ ವಿಷಯದಲ್ಲಿ ಹಲವು ಕಾನೂನು ತೊಡಕುಗಳು ಎದುರಾದ ಕಾರಣ ಗಡೀಪಾರು ಪ್ರಕ್ರಿಯೆ ವಿಳಂಬವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸೋಮವಾರ ತಿಳಿಸಿದೆ.

ಈ ಕುರಿತು ಕೋರ್ಟ್‌ನಲ್ಲಿ ಹೇಳಿಕೆ ನೀಡಿದ ಸಾಲಿಸಿಟರ್‌ ಜನರಲ್‌, ವಿದೇಶಾಂಗ ಇಲಾಖೆ ಬ್ರಿಟನ್‌ ಸರ್ಕಾರದ ಜೊತೆ ಮಲ್ಯ ಗಡೀಪಾರು ವಿಷಯವನ್ನು ಪ್ರಸ್ತಾಪಿಸಿದೆ. ಕೇಂದ್ರ ಸರ್ಕಾರ ಎಲ್ಲಾ ಗಂಭೀರ ಪ್ರಯತ್ನಗಳನ್ನು ಮಾಡಿದೆ. ಮಲ್ಯ ಗಡೀಪಾರಿಗೆ ಸಂಬಂಧಿಸಿದಂತೆ ಸ್ಥಿತಿಗತಿ ವರದಿ ನೀಡಲು ಇನ್ನಷ್ಟು ಸಮಯ ಅಗತ್ಯವಿದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಕೋರ್ಟ್‌ ಪ್ರಕರಣದ ವಿಚಾರಣೆಯನ್ನು ಮಾ.15ಕ್ಕೆ ಮುಂದೂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ
India Latest News Live: ಅಮೆರಿಕ ತೆರಿಗೆ ದಾಳಿಗೆ ಒಳಗಾದ ದೇಶಗಳಿಂದ ಮಾದರಿಯಾದ ಚೀನಾ; ಟ್ರಂಪ್‌ಗೆ ಶಾಕ್ ನೀಡಿ ದಾಖಲೆ ಬರೆದ ಡ್ರ್ಯಾಗನ್