
ನವದೆಹಲಿ(ಏ.30): ಕೊರೋನಾ ಭೀಕರತೆ ಸಿಕ್ಕಿ ಗಿರ ಗಿರನೆ ತಿರುಗುತ್ತಿರುವ ನಗರಗಳ ಪೈಕಿ ದೆಹಲಿ ಕೂಡ ಒಂದಾಗಿದೆ. ರಾಷ್ಟ್ರ ರಾಜಧಾನಿ ಪರಿಸ್ಥಿತಿ ಚಿಂತಾಜನಕವಾಗಿದೆ. ಸೋಂಕಿತರ ನರಳಾತ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುತ್ತಿದೆ. ಅಧಿಕಾರಿಗಳು, ಶಾಸಕರು ,ಮಂತ್ರಿಗಳು ಏನೂ ಮಾಡಲಾಗದ ಸ್ಥಿತಿ ತಲುಪಿದೆ. ಇದೀಗ ದೆಹಲಿ ಆಮ್ ಆದ್ಮಿ ಪಕ್ಷದ ಶಾಸಕ ಶೋಯೆಬ್ ಇಕ್ಬಾಲ್ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಯೊಂದೇ ದಾರಿ ಎಂದಿದ್ದಾರೆ.
ಪ್ರಾಣಿಗಳ ಚಿತಾಗಾರದಲ್ಲಿಯೇ ಸೋಂಕಿತರ ಮೃತದೇಹ ಅಂತ್ಯಸಂಸ್ಕಾರ.
6 ಬಾರಿ ಶಾಸಕನಾಗಿರುವ ನನಗೆ ನನ್ನ ಸ್ನೇಹಿತನಿಗೆ ನೆರವು ನೀಡಲು ಸಾಧ್ಯವಾಗುತ್ತಿಲ್ಲ. ಕ್ಷೇತ್ರದ ಜನರಿಗೆ ನೆರವು ನೀಡಲು ಸಾಧ್ಯವಾಗುತ್ತಿಲ್ಲ. ಆಕ್ಸಿಜನ್ ಸಿಗುತ್ತಿಲ್ಲ. ಹೀಗಾಗಿ ದೆಹಲಿಯಲಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತನ್ನಿ ಎಂದು ಮತಿಯಾ ಮಹಲ್ ಕ್ಷೇತ್ರದ ಶಾಸಕ ಇಕ್ಬಾಲ್, ದೆಹಲಿ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಕೊರೋನಾ ಸ್ಫೋಟ: ರಾಮಲೀಲಾ ಮೈದಾನಲ್ಲಿ ಬೃಹತ್ ಕೋವಿಡ್ ಸೆಂಟರ್!
ದೆಹಲಿಯ ಚಿಂತಾಜನಕ ಸ್ಥಿತಿಯಿಂದ ನೋವುಂಟಾಗಿದೆ. ನನಗೆ ನಿದ್ದೆ ಬರುತ್ತಿಲ್ಲ. ಜನರಿಗೆ ಆಮ್ಲಜನಕ ಮತ್ತು ಔಷಧಿಗಳು ಸಿಗುತ್ತಿಲ್ಲ. ನನ್ನ ಸ್ನೇಹಿತ ಬಳಲುತ್ತಿದ್ದಾನೆ. ಆಸ್ಪತ್ರೆಯಲ್ಲಿ ಆಮ್ಲಜನಕ ಅಥವಾ ವೆಂಟಿಲೇಟರ್ ಸಿಗುತ್ತಿಲ್ಲ. ರಿಮೆಡೆಸಿವಿರ್ ಲಸಿಕೆ ಸಿಗುತ್ತಿಲ್ಲ. ಸ್ನೇಹಿತನ ಮಕ್ಕಳು ತಂದೆಯನ್ನು ಉಳಿಸಲು ಓಡಾಡುತ್ತಿದ್ದಾರೆ. ಆದರೆ ಶಾಸಕನಾಗಿರುವ ನನಗೆ ಏನೂ ಮಾಡಲಾಗುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.
ಸಂಬಂಧ ಪಟ್ಟ ಅಧಿಕಾರಿಗಳ, ನೋಡಲ್ ಅಧಿಕಾರಿಗಳ ಸಂಪರ್ಕ ಸಾಧ್ಯವಾಗುತ್ತಿಲ್ಲ. ಏನು ಮಾಡಬೇಕು ಅನ್ನೋದು ತೋಚುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ ರಾಷ್ಟ್ರಪತಿ ಆಳ್ವಿಕೆ ಸೂಕ್ತ ಎಂದು ಅಕ್ಬಾಲ್ ನೋವು ತೋಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ