
ಗೋವಾ(ಜೂ. 30) ಮಾಸ್ಕ್ ಧರಿಸದೆ ಓಡಾಡುವವರನ್ನು ನೇರವಾಗಿ ಜೈಲಿಗೆ ಕಳಿಸಲು ಸರ್ಕಾರ ನಿರ್ಧರಿಸಿದೆ. ಸಾಮಾಜಿಕ ಅಂತರ ಮುರಿಯುವವರು ಮತ್ತು ಮಾಸ್ಕ್ ಧರಿಸದೇ ಓಡಾಡುವವರಿಗೆ ಜೈಲು ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಎಚ್ಚರಿಕೆ ನೀಡಿದ್ದಾರೆ.
ನಾನು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದೇನೆ. ಮಾಸ್ಕ್ ಧರಿಸದವರಿಗೆ ಹಾಕುತ್ತಿರುವ ದಂಡದ ಮೊತ್ತ ಏರಿಕೆ ಮಾಡಲಾಗಿದೆ. ಕೊರೋನಾ ಲಾಕ್ ಡೌನ್ ರೂಲ್ಸ್ ಮುರಿಯುವವರನ್ನು ನೇರವಾಗಿ ಜೈಲಿಗೆ ಕಳಿಸುತ್ತೇವೆ ಎಂದು ಪ್ರಮೋದ್ ಎಚ್ಚರಿಸಿದ್ದಾರೆ.
ಮಾಜಿ ಸಚಿವ ರೇವಣ್ಣಗೂ ಕೊರೋನಾ ನಡುಕ
ಲಾಕ್ ಡೌನ್ ಶಾಶ್ವತ ಪರಿಹಾರ ಅಲ್ಲ, ಇದೊಂದು ಕ್ರಮ ಎನ್ನುವುದು ಗೊತ್ತಿದೆ. ಅಗತ್ಯ ಬಿದ್ದರೆ ಗೋವಾದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮುನ್ನಚ್ಚೆರಿಕೆ ಕ್ರಮ ತೆಗೆದುಕೊಳಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಮಾಸ್ಕ್ ಧರಿಸುವುದು, ಸಾನಿಟೈಸ್ ಮಾಡಿಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಗೋವಾದಲ್ಲಿ ಇಲ್ಲಿಯವರೆಗೆ 724 ಕೊರೋನಾ ಪಾಸಿಟಿವ್ ಕೇಸ್ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ