
ನವದೆಹಲಿ(ಜೂ. 26) 'ನಾನು ಇಂದಿರಾ ಗಾಂಧಿ ಮೊಮ್ಮಗಳು, ಸತ್ಯ ಹೇಳಲು ಯಾವ ಹಿಂಜರಿಕೆ ಇಲ್ಲ, ಸತ್ಯ ಹೇಳುವುದನ್ನು ನಿಲ್ಲಿಸುವುದಿಲ್ಲ' ಇದು ಉತ್ತರ ಪ್ರದೇಶ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್ ನೀಡಿದ ಮರುದಿನ ಪ್ರಿಯಾಂಕಾ ಅವರಿಂದ ಬಂದ ಮಾತು.
ಕಾನ್ ಪುರ ಕೊರೋನಾ ಕೇಂದ್ರದಲ್ಲಿರುವ 57 ಹುಡುಗಿಯರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಪ್ರಿಯಾಂಕಾ ಹೇಳಿದ್ದಕ್ಕೆ ಆಯೋಗ ನೋಟಿಸ್ ನೀಡಿತ್ತು.
ಸುಳ್ಳು ಸುದ್ದಿ ಹಬ್ಬಿಸಿದ್ದ ಪ್ರಿಯಾಂಕಾಗೆ ನೋಟಿಸ್
ಈ ರೀತಿಯ ಬೆದರಿಕೆಗಳು ನನ್ನ ಮೇಲೆ ಯಾವುದೇ ಪರಿಣಾಮ ಉಂಟುಮಾಡುವುದುಲ್ಲ. ಸಾರ್ವಜನಿಕರ ಹಿತ ಕಾಪಾಡುವುದು ನನ್ನ ಕರ್ತವ್ಯ, ನಾನೊಬ್ಬ ಜನಪ್ರತಿನಿಧಿಯಾಗಿ ಆ ಕೆಲಸ ಮಾಡಿಕೊಂಡೆ ಬರುತ್ತೇನೆ ಎಂದು ಪ್ರಿಯಾಂಕಾ ಹೇಳಿದ್ದಾರೆ.
ನಾನು ಇಂದಿತರಾ ಗಾಂಧಿ ಮೊಮ್ಮಗಳು, ಬಿಜೆಪಿಯ ವಕ್ತಾರೆ ಅಲ್ಲ ಎಂದಿರುವ ಗಾಂಧಿ ನಿರಾಶ್ರಿತ ಕೇಂದ್ರದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾಗಿದ್ದಾರೆ ಎಂಬ ಮಾಧ್ಯಮ ವರದಿಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.
ಕೊರೋನಾ ಸೋಂಕಿಗೆ ತುತ್ತಾಗಿ ಆಗ್ರಾದಲ್ಲಿ 28 ಜನ ಮೃತಪಟ್ಟಿದ್ದಾರೆ ಎಂದು ಸುದ್ದಿ ಶೇರ್ ಮಾಡಿಕೊಂಡಿದ್ದ ಪ್ರಿಯಾಂಕಾಗೆ ಆಗ್ರಾ ಆಡಳಿತ ಸಹ ನೋಟಿಸ್ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ